<p><strong>ಬೆಂಗಳೂರು</strong>: ‘ಉದ್ಯೋಗ ಕ್ಷೇತ್ರದಲ್ಲಿ ನಿರಂತರವಾಗಿ ಬದಲಾಗುತ್ತಿರುವ ಅಗತ್ಯಕ್ಕೆ ತಕ್ಕಂತೆ ಉನ್ನತ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು’ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ<br>(ಎಐಸಿಟಿಇ) ಉಪಾಧ್ಯಕ್ಷ ಡಾ. ಅಭಯರ್ ಜೆರೆ ತಿಳಿಸಿದರು.</p><p>ಸಸ್ತ್ರ (ಎಸ್ಎಎಸ್ಟಿಆರ್ಎ) ಯೂನಿವರ್ಸಿಟಿಯ ‘ವಿಶ್ವವಿದ್ಯಾಲಯದ ದಿನ’ದಲ್ಲಿ ಮಾತನಾಡಿದ ಅವರು, ‘ವಿಕಸಿತವಾಗುತ್ತಿರುವ ಅನಿಶ್ಚಿತ ತಂತ್ರಜ್ಞಾನಗಳನ್ನು ಸತತವಾಗಿ ಕಲಿಯುವ ಪದವೀಧರರು, ಇದರ ಜೊತೆಗೆ ದೀರ್ಘಕಾಲದಲ್ಲಿ ಜೀವನೋಪಾಯಕ್ಕಾಗಿ ಅಗತ್ಯವಿರುವ ಸ್ವಯಂ– ಸ್ಥಿರತೆಯನ್ನೂ<br>ಸೃಷ್ಟಿಸಿಕೊಳ್ಳಬೇಕು’ ಎಂದರು.</p><p>ಶಿಸ್ತು ಸೇರಿದಂತೆ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ ಹಾಗೂ ಶಿಕ್ಷಕ ವರ್ಗ– ಪಿಎಚ್.ಡಿ ಪದವಿ ಪೂರೈಸಿ<br>ದವರಿಗೆ ಸಂಶೋಧನಾ ಪ್ರಶಸ್ತಿಗಳನ್ನು ಪ್ರದಾನಮಾಡಲಾಯಿತು.</p><p>2023–24ನೇ ಸಾಲಿನ ವಾರ್ಷಿಕ ವರದಿಯನ್ನು ಪ್ರಸ್ತುತಪಡಿಸಿದ ಕುಲಪತಿ ಡಾ. ಎಸ್. ವೈದ್ಯಸುಬ್ರಹ್ಮಣ್ಯಂ, ವಿಶ್ವವಿದ್ಯಾಲಯದ ಪ್ರಗತಿಯ ಪ್ರಮುಖಾಂಶಗಳನ್ನು ವಿವರಿಸಿದರು. 1100 ಪ್ರಕಟಣೆಗಳು, 12 ಪೇಟೆಂಟ್, 8 ಉತ್ಪನ್ನಗಳ ಬಿಡುಗಡೆ, ವಿದ್ಯಾರ್ಥಿಗಳಿಗೆ 1900 ಉದ್ಯೋಗ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ₹125 ಕೋಟಿ ವಿನಿಯೋಗದ ಬಗ್ಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಉದ್ಯೋಗ ಕ್ಷೇತ್ರದಲ್ಲಿ ನಿರಂತರವಾಗಿ ಬದಲಾಗುತ್ತಿರುವ ಅಗತ್ಯಕ್ಕೆ ತಕ್ಕಂತೆ ಉನ್ನತ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು’ಎಂದು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ<br>(ಎಐಸಿಟಿಇ) ಉಪಾಧ್ಯಕ್ಷ ಡಾ. ಅಭಯರ್ ಜೆರೆ ತಿಳಿಸಿದರು.</p><p>ಸಸ್ತ್ರ (ಎಸ್ಎಎಸ್ಟಿಆರ್ಎ) ಯೂನಿವರ್ಸಿಟಿಯ ‘ವಿಶ್ವವಿದ್ಯಾಲಯದ ದಿನ’ದಲ್ಲಿ ಮಾತನಾಡಿದ ಅವರು, ‘ವಿಕಸಿತವಾಗುತ್ತಿರುವ ಅನಿಶ್ಚಿತ ತಂತ್ರಜ್ಞಾನಗಳನ್ನು ಸತತವಾಗಿ ಕಲಿಯುವ ಪದವೀಧರರು, ಇದರ ಜೊತೆಗೆ ದೀರ್ಘಕಾಲದಲ್ಲಿ ಜೀವನೋಪಾಯಕ್ಕಾಗಿ ಅಗತ್ಯವಿರುವ ಸ್ವಯಂ– ಸ್ಥಿರತೆಯನ್ನೂ<br>ಸೃಷ್ಟಿಸಿಕೊಳ್ಳಬೇಕು’ ಎಂದರು.</p><p>ಶಿಸ್ತು ಸೇರಿದಂತೆ ಅತ್ಯುತ್ತಮ ವಿದ್ಯಾರ್ಥಿ ಪ್ರಶಸ್ತಿ ಹಾಗೂ ಶಿಕ್ಷಕ ವರ್ಗ– ಪಿಎಚ್.ಡಿ ಪದವಿ ಪೂರೈಸಿ<br>ದವರಿಗೆ ಸಂಶೋಧನಾ ಪ್ರಶಸ್ತಿಗಳನ್ನು ಪ್ರದಾನಮಾಡಲಾಯಿತು.</p><p>2023–24ನೇ ಸಾಲಿನ ವಾರ್ಷಿಕ ವರದಿಯನ್ನು ಪ್ರಸ್ತುತಪಡಿಸಿದ ಕುಲಪತಿ ಡಾ. ಎಸ್. ವೈದ್ಯಸುಬ್ರಹ್ಮಣ್ಯಂ, ವಿಶ್ವವಿದ್ಯಾಲಯದ ಪ್ರಗತಿಯ ಪ್ರಮುಖಾಂಶಗಳನ್ನು ವಿವರಿಸಿದರು. 1100 ಪ್ರಕಟಣೆಗಳು, 12 ಪೇಟೆಂಟ್, 8 ಉತ್ಪನ್ನಗಳ ಬಿಡುಗಡೆ, ವಿದ್ಯಾರ್ಥಿಗಳಿಗೆ 1900 ಉದ್ಯೋಗ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ₹125 ಕೋಟಿ ವಿನಿಯೋಗದ ಬಗ್ಗೆ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>