<p><strong>ಬೆಂಗಳೂರು:</strong> ‘ದೇಶದಲ್ಲಿ ಕೃಷಿಕರಿಗೆ ತಂತ್ರಜ್ಞಾನವನ್ನು ಸಕಾಲದಲ್ಲಿ ವರ್ಗಾಯಿಸಲು ಸಾಧ್ಯವಾಗುತ್ತಿಲ್ಲ.ಕೃಷಿ ಪರಿಕರಗಳ ಮಾರಾಟಗಾರರು ವ್ಯಾಪಾರದ ಜೊತೆಗೆ ತಾವು ಕಲಿತಿರುವ ತಾಂತ್ರಿಕ ಜ್ಞಾನವನ್ನು ರೈತರಿಗೆ ತಲುಪಿಸಬೇಕು’ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿಎಸ್.ರಾಜೇಂದ್ರ ಪ್ರಸಾದ್ ಮನವಿ ಮಾಡಿದರು.</p>.<p>ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶನಾಲಯ, ಕೃಷಿ ಇಲಾಖೆ ಸಹಯೋಗದಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ (ಜಿಕೆವಿಕೆ) ಸೋಮವಾರ ಹಮ್ಮಿಕೊಂಡಿದ್ದ ‘ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೊಮಾ’ (ದೇಸಿ) ಪ್ರಮಾಣಪತ್ರ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸ್ಥಳೀಯ ಮಟ್ಟದಲ್ಲಿ ರೈತರಿಗೆ ಲಭ್ಯವಾಗುವ ಕೃಷಿ ಪರಿಕರ ಮಾರಾಟಗಾರರು ರೈತರು ಮತ್ತು ಕೃಷಿ ವಿಶ್ವವಿದ್ಯಾಲಯಗಳ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಬೇಕು. ‘ದೇಸಿ’ ಕೋರ್ಸ್ ಪೂರ್ಣಗೊಳಿಸಿರುವ ಮಾರಾಟಗಾರರು ‘ಕೃಷಿ ವೈದ್ಯ’ರಂತೆ ಕಾರ್ಯನಿರ್ವಹಿಸಬಹುದು’ ಎಂದರು.</p>.<p>ವಿಶ್ವವಿದ್ಯಾಲಯದವಿಸ್ತರಣಾ ನಿರ್ದೇಶಕ ಎನ್.ದೇವ ಕುಮಾರ್, ‘ಮಾರಾಟಗಾರರು ಕೃಷಿ ಪರಿಕರಗಳನ್ನು ಮಧ್ಯವತಿಗಳ ಮೂಲಕ ಮಾರಾಟ ಮಾಡುವ ಬದಲು ನೇರವಾಗಿ ರೈತರನ್ನು ಸಂಪರ್ಕಿಸಬೇಕು. ಇದರಿಂದ ರೈತರು ಹಾಗೂ ಮಾರಾಟಗಾರರ ನಡುವೆ ಸಮನ್ವಯ ಹಾಗೂ ವಿಶ್ವಾಸ ಮೂಡುತ್ತದೆ. ವ್ಯಾಪಾರ ವೃದ್ಧಿಗೂ ಇದು ಸಹಕಾರಿ’ ಎಂದು ಹೇಳಿದರು.</p>.<p>‘ಅಂಗಡಿಗಳಲ್ಲಿ ಕೃಷಿಗೆ ಸಂಬಂಧಿಸಿದ ಪುಸ್ತಕಗಳು, ನಿಯತಕಾಲಿಕೆಗಳನ್ನು ಇಡುವುದರಿಂದ ರೈತರ ಜ್ಞಾನಾರ್ಜನೆಗೆ ಸಹಕಾರಿಯಾಗುತ್ತದೆ. ಮಾರಾಟಗಾರರು ನಿಷೇಧಿತ ರಾಸಾಯನಿಕಗಳ ಮಾರಾಟ ನಿಲ್ಲಿಸಿ, ಪರಿಸರ ಸ್ನೇಹಿ ರಾಸಾಯನಿಕಗಳ ಮಾರಾಟಕ್ಕೆ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಒಂದು ವರ್ಷದದೇಸಿಕೋರ್ಸ್ ಆರಂಭಿಸಲಾಗಿತ್ತು. ಕೋರ್ಸ್ ಮುಗಿಸಿದ 36 ಮಂದಿಗೆ ಪ್ರಮಾಣಪತ್ರ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ದೇಶದಲ್ಲಿ ಕೃಷಿಕರಿಗೆ ತಂತ್ರಜ್ಞಾನವನ್ನು ಸಕಾಲದಲ್ಲಿ ವರ್ಗಾಯಿಸಲು ಸಾಧ್ಯವಾಗುತ್ತಿಲ್ಲ.ಕೃಷಿ ಪರಿಕರಗಳ ಮಾರಾಟಗಾರರು ವ್ಯಾಪಾರದ ಜೊತೆಗೆ ತಾವು ಕಲಿತಿರುವ ತಾಂತ್ರಿಕ ಜ್ಞಾನವನ್ನು ರೈತರಿಗೆ ತಲುಪಿಸಬೇಕು’ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿಎಸ್.ರಾಜೇಂದ್ರ ಪ್ರಸಾದ್ ಮನವಿ ಮಾಡಿದರು.</p>.<p>ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶನಾಲಯ, ಕೃಷಿ ಇಲಾಖೆ ಸಹಯೋಗದಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ (ಜಿಕೆವಿಕೆ) ಸೋಮವಾರ ಹಮ್ಮಿಕೊಂಡಿದ್ದ ‘ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೊಮಾ’ (ದೇಸಿ) ಪ್ರಮಾಣಪತ್ರ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸ್ಥಳೀಯ ಮಟ್ಟದಲ್ಲಿ ರೈತರಿಗೆ ಲಭ್ಯವಾಗುವ ಕೃಷಿ ಪರಿಕರ ಮಾರಾಟಗಾರರು ರೈತರು ಮತ್ತು ಕೃಷಿ ವಿಶ್ವವಿದ್ಯಾಲಯಗಳ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಬೇಕು. ‘ದೇಸಿ’ ಕೋರ್ಸ್ ಪೂರ್ಣಗೊಳಿಸಿರುವ ಮಾರಾಟಗಾರರು ‘ಕೃಷಿ ವೈದ್ಯ’ರಂತೆ ಕಾರ್ಯನಿರ್ವಹಿಸಬಹುದು’ ಎಂದರು.</p>.<p>ವಿಶ್ವವಿದ್ಯಾಲಯದವಿಸ್ತರಣಾ ನಿರ್ದೇಶಕ ಎನ್.ದೇವ ಕುಮಾರ್, ‘ಮಾರಾಟಗಾರರು ಕೃಷಿ ಪರಿಕರಗಳನ್ನು ಮಧ್ಯವತಿಗಳ ಮೂಲಕ ಮಾರಾಟ ಮಾಡುವ ಬದಲು ನೇರವಾಗಿ ರೈತರನ್ನು ಸಂಪರ್ಕಿಸಬೇಕು. ಇದರಿಂದ ರೈತರು ಹಾಗೂ ಮಾರಾಟಗಾರರ ನಡುವೆ ಸಮನ್ವಯ ಹಾಗೂ ವಿಶ್ವಾಸ ಮೂಡುತ್ತದೆ. ವ್ಯಾಪಾರ ವೃದ್ಧಿಗೂ ಇದು ಸಹಕಾರಿ’ ಎಂದು ಹೇಳಿದರು.</p>.<p>‘ಅಂಗಡಿಗಳಲ್ಲಿ ಕೃಷಿಗೆ ಸಂಬಂಧಿಸಿದ ಪುಸ್ತಕಗಳು, ನಿಯತಕಾಲಿಕೆಗಳನ್ನು ಇಡುವುದರಿಂದ ರೈತರ ಜ್ಞಾನಾರ್ಜನೆಗೆ ಸಹಕಾರಿಯಾಗುತ್ತದೆ. ಮಾರಾಟಗಾರರು ನಿಷೇಧಿತ ರಾಸಾಯನಿಕಗಳ ಮಾರಾಟ ನಿಲ್ಲಿಸಿ, ಪರಿಸರ ಸ್ನೇಹಿ ರಾಸಾಯನಿಕಗಳ ಮಾರಾಟಕ್ಕೆ ಆದ್ಯತೆ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಒಂದು ವರ್ಷದದೇಸಿಕೋರ್ಸ್ ಆರಂಭಿಸಲಾಗಿತ್ತು. ಕೋರ್ಸ್ ಮುಗಿಸಿದ 36 ಮಂದಿಗೆ ಪ್ರಮಾಣಪತ್ರ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>