ಬೆಂಗಳೂರು: ಹೆಸರಘಟ್ಟ ಮತ್ತು ದಾಸನಪುರ ಹೋಬಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿಯ ಕರ ವಸೂಲಿಗಾರರು ಮತ್ತು ಕಾರ್ಯದರ್ಶಿಗಳ ಹೊಸ ಜೇಷ್ಠತಾ ಪಟ್ಟಿಯನ್ನು ಸಿದ್ದಪಡಿಸುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಗೆ ಆದೇಶ ನೀಡಿತ್ತು. ಆದರೆ, ಆದೇಶ ನೀಡಿ ಐದಾರು ತಿಂಗಳು ಕಳೆದರೂ ಪಟ್ಟಿ ಇನ್ನೂ ಸಿದ್ದವಾಗಿಲ್ಲ.