<p><strong>ಪೀಣ್ಯ ದಾಸರಹಳ್ಳಿ:</strong> ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂಬ ಜಾತಿಗಣತಿ ವರದಿ ಅವೈಜ್ಞಾನಿಕ. ಮಂಡನೆಯಾಗುವ ಮೊದಲೇ ಸೋರಿಕೆಯೂ ಆಗಿದೆ. ಈ ವರದಿಯನ್ನು ಯಾವುದೇ ಕಾರಣಕ್ಕೆ ಮಂಡಿಸಬಾರದು ಎಂದು ಒಕ್ಕಲಿಗ ಮುಖಂಡರ ಸಮಾಲೋಚನಾ ಸಭೆಯಲ್ಲಿ ಆಗ್ರಹಿಸಲಾಗಿದೆ.</p>.<p>‘ಜಾತಿಗಣತಿ ರಾಜಕೀಯ; ಒಕ್ಕಲಿಗರಿಗೆ ಅನ್ಯಾಯ’ ಎಂಬ ಘೋಷವಾಕ್ಯ ಇಟ್ಟುಕೊಂಡು ಒಕ್ಕಲಿಗ ಕ್ರಿಯಾ ಸಮಿತಿ ಅಧ್ಯಕ್ಷ ಕೆ.ಜಿ. ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಆಗ್ರಹ ಮಾಡಲಾಗಿದೆ.</p>.<p>ಈ ವರದಿಯನ್ನು ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ದಲಿತ ಮತ್ತು ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಜೊತೆಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಹೇಳಿದ್ದರು. ಹೊಸದಾಗಿ ಗಣತಿ ನಡೆಸಿದರೆ ಅಭ್ಯಂತರವಿಲ್ಲ. ಈ ವರದಿ ಮಂಡಿಸಬಾರದು ಎಂದು ಸಭೆಯಲ್ಲಿ ಭಾಗವಹಿಸಿದವರು ಒತ್ತಾಯಿಸಿದರು.</p>.<p>‘ಈ ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯಿತರ ಮತ್ತು ಒಕ್ಕಲಿಗರ ಸಂಖ್ಯೆ ಕಡಿಮೆ ತೋರಿಸಲಾಗಿದೆ. ವರದಿ ಸೋರಿಕೆ ಮಾಹಿತಿ ಪ್ರಕಾರ ರಾಜ್ಯದಲ್ಲಿ ವೀರಶೈವ ಲಿಂಗಾಯಿತರ ಸಂಖ್ಯೆ 59 ಲಕ್ಷ, ಒಕ್ಕಲಿಗರ ಸಂಖ್ಯೆ 49 ಲಕ್ಷ ಎಂದು ತೋರಿಸಲಾಗಿದೆ. ಅಹಿಂದ ವರ್ಗಕ್ಕೆ ಅನುಕೂಲ ಮಾಡಿಕೊಡುವುದಕ್ಕೆ ನಮ್ಮ ವಿರೋಧವಿಲ್ಲ. ಆ ಉದ್ದೇಶದಿಂದ ಇತರ ಸಮುದಾಯಗಳಿಗೆ ಅನ್ಯಾಯ ಮಾಡಬಾರದು’ ಎಂದು ತಿಳಿಸಿದರು.</p>.<p>ಒಕ್ಕಲಿಗರ ಕ್ರಿಯಾ ಸಮಿತಿಯ ಪದಾಧಿಕಾರಿಗಳು, ಸಮುದಾಯದ ಮುಖಂಡರು ಭಾಗವಹಿಸಿದ್ದರು. ಮುಂದೆ ಬೃಹತ್ ಸಭೆ ನಡೆಸಲು ತೀರ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂಬ ಜಾತಿಗಣತಿ ವರದಿ ಅವೈಜ್ಞಾನಿಕ. ಮಂಡನೆಯಾಗುವ ಮೊದಲೇ ಸೋರಿಕೆಯೂ ಆಗಿದೆ. ಈ ವರದಿಯನ್ನು ಯಾವುದೇ ಕಾರಣಕ್ಕೆ ಮಂಡಿಸಬಾರದು ಎಂದು ಒಕ್ಕಲಿಗ ಮುಖಂಡರ ಸಮಾಲೋಚನಾ ಸಭೆಯಲ್ಲಿ ಆಗ್ರಹಿಸಲಾಗಿದೆ.</p>.<p>‘ಜಾತಿಗಣತಿ ರಾಜಕೀಯ; ಒಕ್ಕಲಿಗರಿಗೆ ಅನ್ಯಾಯ’ ಎಂಬ ಘೋಷವಾಕ್ಯ ಇಟ್ಟುಕೊಂಡು ಒಕ್ಕಲಿಗ ಕ್ರಿಯಾ ಸಮಿತಿ ಅಧ್ಯಕ್ಷ ಕೆ.ಜಿ. ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಆಗ್ರಹ ಮಾಡಲಾಗಿದೆ.</p>.<p>ಈ ವರದಿಯನ್ನು ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ದಲಿತ ಮತ್ತು ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಜೊತೆಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಹೇಳಿದ್ದರು. ಹೊಸದಾಗಿ ಗಣತಿ ನಡೆಸಿದರೆ ಅಭ್ಯಂತರವಿಲ್ಲ. ಈ ವರದಿ ಮಂಡಿಸಬಾರದು ಎಂದು ಸಭೆಯಲ್ಲಿ ಭಾಗವಹಿಸಿದವರು ಒತ್ತಾಯಿಸಿದರು.</p>.<p>‘ಈ ಸಮೀಕ್ಷೆಯಲ್ಲಿ ವೀರಶೈವ ಲಿಂಗಾಯಿತರ ಮತ್ತು ಒಕ್ಕಲಿಗರ ಸಂಖ್ಯೆ ಕಡಿಮೆ ತೋರಿಸಲಾಗಿದೆ. ವರದಿ ಸೋರಿಕೆ ಮಾಹಿತಿ ಪ್ರಕಾರ ರಾಜ್ಯದಲ್ಲಿ ವೀರಶೈವ ಲಿಂಗಾಯಿತರ ಸಂಖ್ಯೆ 59 ಲಕ್ಷ, ಒಕ್ಕಲಿಗರ ಸಂಖ್ಯೆ 49 ಲಕ್ಷ ಎಂದು ತೋರಿಸಲಾಗಿದೆ. ಅಹಿಂದ ವರ್ಗಕ್ಕೆ ಅನುಕೂಲ ಮಾಡಿಕೊಡುವುದಕ್ಕೆ ನಮ್ಮ ವಿರೋಧವಿಲ್ಲ. ಆ ಉದ್ದೇಶದಿಂದ ಇತರ ಸಮುದಾಯಗಳಿಗೆ ಅನ್ಯಾಯ ಮಾಡಬಾರದು’ ಎಂದು ತಿಳಿಸಿದರು.</p>.<p>ಒಕ್ಕಲಿಗರ ಕ್ರಿಯಾ ಸಮಿತಿಯ ಪದಾಧಿಕಾರಿಗಳು, ಸಮುದಾಯದ ಮುಖಂಡರು ಭಾಗವಹಿಸಿದ್ದರು. ಮುಂದೆ ಬೃಹತ್ ಸಭೆ ನಡೆಸಲು ತೀರ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>