ಬೆಂಗಳೂರು: ಜೂಜಾಟ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ಉಪ್ಪಾರಪೇಟೆಯ ಇಬ್ಬರು ಕಾನ್ಸ್ಟೆಬಲ್ಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.
ಪುಟ್ಟೇನಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಕಾನ್ಸ್ಟೆಬಲ್ಗಳಾದ ಮಲ್ಲೇಶ್ ಹಾಗೂ ಗವಿಸಿದ್ದೇಶ್ ಭಾಗಿಯಾಗಿದ್ದ ಬಗ್ಗೆ ತನಿಖಾಧಿಕಾರಿ ವರದಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ್ದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ, ಕಾನ್ಸ್ಟೆಬಲ್ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
‘ಇನ್ಸ್ಪೆಕ್ಟರ್ ಆರ್.ಎಸ್.ಚೌಧರಿ ನೇತೃತ್ವದ ತಂಡ, ಜೆ.ಪಿ. ನಗರದ ಹೋಟೆಲ್ವೊಂದರ ಮೇಲೆ ಅಕ್ಟೋಬರ್ 19ರಂದು ದಾಳಿ ಮಾಡಿತ್ತು. ಮಲ್ಲೇಶ್ ಹಾಗೂ ಗವಿಸಿದ್ದಪ್ಪ ಸಹ ಜೂಜಾಟದಲ್ಲಿ ನಿರತರಾಗಿದ್ದರು. ಅವರಿಬ್ಬರು ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿತ್ತು’ ಎಂದು ಮೂಲಗಳು ತಿಳಿಸಿವೆ.