<p><strong>ಬೆಂಗಳೂರು</strong>: ಜನವರಿ 30ರಂದು ನಿವೃತ್ತಿ ಆಗಲಿರುವ ಡಿಜಿ ಮತ್ತು ಐಜಿ ನೀಲಮಣಿ ಎಸ್. ರಾಜು ಅವರ ಉತ್ತರಾಧಿಕಾರಿ ನೇಮಕಕ್ಕೆ ಪ್ರಕ್ರಿಯೆ ಆರಂಭವಾಗಿದ್ದು, 30 ವರ್ಷ ಸೇವೆ ಪೂರೈಸಿರುವ ಅಧಿಕಾರಿಗಳ ಪಟ್ಟಿಯನ್ನು ಕೇಂದ್ರ ಲೋಕಸೇವಾ ಆಯೋಗಕ್ಕೆ (ಯುಪಿಎಸ್ಸಿ) ಕಳುಹಿಸಲಾಗಿದೆ.</p>.<p>ಈ ಸಂಬಂಧ ಯುಪಿಎಸ್ಸಿ ಕೆಲವು ಮಾಹಿತಿ ಕೇಳಿತ್ತು. ಅದನ್ನೂ ಕಳುಹಿಸಲಾಗಿದೆ. ರಾಜ್ಯ ಸರ್ಕಾರದಿಂದ ಬಂದಿರುವ ಪಟ್ಟಿಯಲ್ಲಿ ಮೂವರ ಹೆಸರನ್ನು ಸೇವಾ ಹಿರಿತನ, ಕಾರ್ಯಕ್ಷಮತೆ ಮತ್ತಿತರ ಆಧಾರದಲ್ಲಿ ಯುಪಿಎಸ್ಸಿ ಸರ್ಕಾರಕ್ಕೆ ಕಳುಹಿಸಲಿದೆ. ಅವರಲ್ಲಿ ಒಬ್ಬರನ್ನು ಸರ್ಕಾರ ಆಯ್ಕೆ ಮಾಡಲಿದೆ ಎಂದು ಮೂಲಗಳು ಪ್ರಜಾವಾಣಿಗೆ ತಿಳಿಸಿವೆ.</p>.<p>ಇದಲ್ಲದೆ, 2020ರೊಳಗೆ ಐದು ಪೊಲೀಸ್ ಮಹಾನಿರ್ದೇಶಕರ ಹುದ್ದೆಗಳು ಖಾಲಿಯಾಗಲಿದ್ದು, ಈ ಹುದ್ದೆಗಳಿಗೆ ಅರ್ಹರಾದ ಆರು ಹಿರಿಯ ಅಧಿಕಾರಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಪದೋನ್ನತಿ ಸಮಿತಿ ಸಭೆ ನಡೆಯಿತು. ಡಿಜಿ ಮತ್ತು ಐಜಿ ನೀಲಮಣಿ ರಾಜು ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜನವರಿ 30ರಂದು ನಿವೃತ್ತಿ ಆಗಲಿರುವ ಡಿಜಿ ಮತ್ತು ಐಜಿ ನೀಲಮಣಿ ಎಸ್. ರಾಜು ಅವರ ಉತ್ತರಾಧಿಕಾರಿ ನೇಮಕಕ್ಕೆ ಪ್ರಕ್ರಿಯೆ ಆರಂಭವಾಗಿದ್ದು, 30 ವರ್ಷ ಸೇವೆ ಪೂರೈಸಿರುವ ಅಧಿಕಾರಿಗಳ ಪಟ್ಟಿಯನ್ನು ಕೇಂದ್ರ ಲೋಕಸೇವಾ ಆಯೋಗಕ್ಕೆ (ಯುಪಿಎಸ್ಸಿ) ಕಳುಹಿಸಲಾಗಿದೆ.</p>.<p>ಈ ಸಂಬಂಧ ಯುಪಿಎಸ್ಸಿ ಕೆಲವು ಮಾಹಿತಿ ಕೇಳಿತ್ತು. ಅದನ್ನೂ ಕಳುಹಿಸಲಾಗಿದೆ. ರಾಜ್ಯ ಸರ್ಕಾರದಿಂದ ಬಂದಿರುವ ಪಟ್ಟಿಯಲ್ಲಿ ಮೂವರ ಹೆಸರನ್ನು ಸೇವಾ ಹಿರಿತನ, ಕಾರ್ಯಕ್ಷಮತೆ ಮತ್ತಿತರ ಆಧಾರದಲ್ಲಿ ಯುಪಿಎಸ್ಸಿ ಸರ್ಕಾರಕ್ಕೆ ಕಳುಹಿಸಲಿದೆ. ಅವರಲ್ಲಿ ಒಬ್ಬರನ್ನು ಸರ್ಕಾರ ಆಯ್ಕೆ ಮಾಡಲಿದೆ ಎಂದು ಮೂಲಗಳು ಪ್ರಜಾವಾಣಿಗೆ ತಿಳಿಸಿವೆ.</p>.<p>ಇದಲ್ಲದೆ, 2020ರೊಳಗೆ ಐದು ಪೊಲೀಸ್ ಮಹಾನಿರ್ದೇಶಕರ ಹುದ್ದೆಗಳು ಖಾಲಿಯಾಗಲಿದ್ದು, ಈ ಹುದ್ದೆಗಳಿಗೆ ಅರ್ಹರಾದ ಆರು ಹಿರಿಯ ಅಧಿಕಾರಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಪದೋನ್ನತಿ ಸಮಿತಿ ಸಭೆ ನಡೆಯಿತು. ಡಿಜಿ ಮತ್ತು ಐಜಿ ನೀಲಮಣಿ ರಾಜು ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>