ಶನಿವಾರಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷಡಾ.ಸಿ.ಎಸ್. ಕೇದಾರ್, ‘ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ರಾಜ್ಯದ ಅಭ್ಯರ್ಥಿಗಳಲ್ಲಿ ಬಹುತೇಕರು ಕಿರಿಯ ವಯಸ್ಸಿನವರು. ಅವರಿಗೆ ಹೆಚ್ಚಿನ ಅವಧಿ ಸೇವೆ ಸಲ್ಲಿಸಲು ಅವಕಾಶ ಸಿಗಲಿದೆ. ಬಡ ಕುಟುಂಬದ ಅಭ್ಯರ್ಥಿಗಳಿಗೆ ದೂರದ ದೆಹಲಿಗೆ ತೆರಳಿ, ತರಬೇತಿ ಪಡೆಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಇಲ್ಲಿಯೇ ತರಬೇತಿ ಆರಂಭಿಸಲಾಯಿತು’ ಎಂದು ತಿಳಿಸಿದರು.