ಏನಿದು ಅರ್ಜಿ?: ‘ಅಕ್ರಮ ಕಟ್ಟಡ ನಿರ್ಮಾಣಕ್ಕೆ ಕಾರಣವಾಗುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಿ ಕರ್ನಾಟಕ ಪೌರಾಡಳಿತ ಕಾಯ್ದೆ (ಕೆಎಂಸಿ) ಕಾಯ್ದೆ-1976ಕ್ಕೆ 2000ನೇ ಇಸ್ವಿಯಲ್ಲಿ ತಿದ್ದುಪಡಿ ತರಲಾಗಿದೆ. ಆದರೆ, ಈತನಕ ಯಾವೊಬ್ಬ ಅಧಿಕಾರಿಗೂ ಶಿಕ್ಷೆಯಾಗಿಲ್ಲ’ ಎಂಬುದು ಅರ್ಜಿದಾರರ ಆಕ್ಷೇಪ.