ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎನ್ಎಚ್ಎಂ ಗುತ್ತಿಗೆ ನೌಕರರು ಕೋವಿಡ್ ಸಂದರ್ಭದಲ್ಲಿ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಸೇವೆ ಸಲ್ಲಿಸಿದ್ದಾರೆ. ಇದೀಗ ಸಮಾನ ಕೆಲಸಕ್ಕೆ ಸಮಾನ ವೇತನ, ವಿಶೇಷ ಭತ್ಯೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, 16 ದಿನಗಳಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಹೋರಾಟ ನಡೆಸುತ್ತಿದ್ದಾರೆ. ಈ ಹೋರಾಟಕ್ಕೆ ನಮ್ಮ ಬೆಂಬಲವಿದೆ. ಪ್ರತಿಭಟನಾನಿರತ ನೌಕರರಲ್ಲಿ ಬಹುತೇಕರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಾಗಿದ್ದು, ಅವರ ನ್ಯಾಯೋಚಿತ ಬೇಡಿಕೆಗಳಿಗೆ ಸರ್ಕಾರ ಉದಾಸೀನ ತೋರುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.