ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂತ್ರ ವಿಸರ್ಜನೆ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ

Last Updated 16 ಫೆಬ್ರುವರಿ 2021, 21:44 IST
ಅಕ್ಷರ ಗಾತ್ರ

ಬೆಂಗಳೂರು: ಜ್ಞಾನಭಾರತಿ ಠಾಣೆ ವ್ಯಾಪ್ತಿಯಲ್ಲಿ ಮೂತ್ರ ವಿಸರ್ಜನೆ ವಿಚಾರಕ್ಕಾಗಿ ಎರಡು ಗುಂಪುಗಳ ನಡುವೆ ಮಂಗಳವಾರ ಮಾರಾಮಾರಿ ನಡೆದಿದ್ದು, ಅರುಣ್‌ಕುಮಾರ್ (26) ಎಂಬುವರನ್ನು ಕೊಲೆ ಮಾಡಲಾಗಿದೆ.

‘ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಅರುಣ್‌ಕುಮಾರ್, ಕೆಲಸಕ್ಕಾಗಿ ನಗರಕ್ಕೆ ಬಂದು ಉಲ್ಲಾಳ ಉಪನಗರದಲ್ಲಿ ವಾಸವಿದ್ದರು. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸರು ಹೇಳಿದರು.

‘ಮಂಗಳವಾರ ಸಂಜೆ 5.30ರ ಸುಮಾರಿಗೆ ಅರುಣ್‌ಕುಮಾರ್, ಉಲ್ಲಾಳು ಉಪನಗರದ ರಸ್ತೆ ಬದಿ ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಸ್ಥಳದಲ್ಲಿದ್ದ ರೌಡಿ ಕೃಷ್ಣನ ಸಹಚರರು, ‘ಮಹಿಳೆಯರು ಓಡಾಡುವ ಜಾಗದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದಿಯಲ್ಲ’ ಎಂದು ಪ್ರಶ್ನಿಸಿದ್ದರು. ನಂತರ, ಮಾತಿಗೆ ಮಾತು ಬೆಳೆದು ಜಗಳ ಆರಂಭವಾಗಿತ್ತು.’

‘ಮತ್ತಷ್ಟು ಮಂದಿ ಸ್ಥಳದಲ್ಲಿ ಸೇರಿದ್ದರು. ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆಯಿತು. ರೌಡಿ ಕೃಷ್ಣ ಸಹಚರರು, ಅರುಣ್‌ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡು ಅರುಣ್ ಮೃತಪಟ್ಟಿದ್ದಾರೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT