<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ’ ರೈಲು ಸೇವೆ ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಮೆಟ್ರೊ ರೈಲು ನಿಗಮವು ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು (ಎಸ್ಒಪಿ) ಗುರುವಾರ ಪ್ರಕಟಿಸಿದೆ.</p>.<p>ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಟೋಕನ್ ಮಾರಾಟವನ್ನು ನಿಷೇಧಿಸಲಾಗಿದ್ದು, ಸ್ಮಾರ್ಟ್ಕಾರ್ಡ್ ಇದ್ದವರಿಗೆ ಮಾತ್ರ ಸಂಚರಿಸಲು ಅವಕಾಶ ನೀಡಲಾಗುತ್ತದೆ. ಸ್ಮಾರ್ಟ್ಕಾರ್ಡ್ ರಿಚಾರ್ಜ್ ಮಾಡಿಸಿದ ಮೇಲೆ ಅದನ್ನು ಬಳಸಲು ಮೊದಲು 60 ದಿನಗಳವರೆಗೆ ಸಮಯವಿತ್ತು. ಈಗ, ಇದನ್ನು 7 ದಿನಗಳಿಗೆ ಸೀಮಿತಗೊಳಿಸಲಾಗಿದೆ. ಅಂದರೆ, ರಿಚಾರ್ಜ್ ಮಾಡಿಸಿದ ಏಳು ದಿನದೊಳಗೆ ಆ ಕಾರ್ಡ್ ಮೂಲಕ ಮೊದಲು ಪ್ರಯಾಣ ಮಾಡಬೇಕು. ನಿಗಮವು ಸೆ.7ರಿಂದ ಮೊಬೈಲ್ ಆ್ಯಪ್ ಬಳಸುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.</p>.<p>ಎಲ್ಲ ನಿಲ್ದಾಣಗಳಲ್ಲಿ ಒದಗಿಸಲಾದ ಯುಪಿಐ, ಕ್ಯೂಆರ್ಕೋಡ್ ಅಥವಾ ಪೇಟಿಎಂ ಮೂಲಕ, ನಿಲ್ದಾಣದಲ್ಲಿ ನಗದುರಹಿತ ಪಾವತಿ ಮಾಡಿ ಸ್ಮಾರ್ಟ್ಕಾರ್ಡ್ ಖರೀದಿ ಅಥವಾ ರಿಚಾರ್ಜ್ ಮಾಡಬಹುದು.</p>.<p>ಇದಲ್ಲದೆ,ಪ್ರಯಾಣಿಕರು ನಿಲ್ದಾಣಕ್ಕೆ ಬರುವ ಒಂದು ಗಂಟೆ ಮೊದಲು ಸ್ಮಾರ್ಟ್ಕಾರ್ಡ್ ರಿಚಾರ್ಜ್ ಮಾಡಿಸಿಕೊಳ್ಳಬೇಕು. ಇದಕ್ಕೆ, ನಮ್ಮ ಮೆಟ್ರೊ ಮೊಬೈಲ್ ಅಪ್ಲಿಕೇಷನ್ ಅಥವಾ ಬಿಎಂಆರ್ಸಿಎಲ್ ವೆಬ್ಸೈಟ್ ಮೂಲಕ ರಿಚಾರ್ಜ್ ಮಾಡಿಸಿಕೊಳ್ಳಬೇಕು.</p>.<p>ಮೊದಲಿನಂತೆ, ಪ್ರವೇಶ ಅಥವಾ ನಿರ್ಗಮನ ಗೇಟ್ಗಳ ಕಾರ್ಡ್ ರೀಡರ್ ಮೇಲೆ ಸ್ಮಾರ್ಟ್ಕಾರ್ಡ್ ಇಡುವ ಬದಲಾಗಿ, 3 ಸೆ.ಮೀ. ದೂರದಿಂದಲೇ ಪ್ರಸ್ತುತಪಡಿಸಬೇಕು ಎಂದು ನಿಗಮ ಹೇಳಿದೆ.</p>.<p>ಸೆ.7ರಿಂದ ನೇರಳೆ ಮಾರ್ಗದಲ್ಲಿ, 9ರಿಂದ ಹಸಿರು ಮಾರ್ಗದಲ್ಲಿ ಸಂಚಾರ ಆರಂಭವಾಗಲಿದೆ. ಸೆ.11ರಿಂದ ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ಎರಡೂ ಮಾರ್ಗಗಳಲ್ಲಿ ರೈಲುಗಳು ಸಂಚರಿಸಲಿವೆ.</p>.<p><strong>ಕಂಟೈನ್ಮೆಂಟ್ ವಲಯದಲ್ಲಿ ಪ್ರವೇಶವಿಲ್ಲ</strong></p>.<p>ಯಾವುದೇ ನಿಲ್ದಾಣವು ಕಂಟೈನ್ಮೆಂಟ್ ವಲಯದ ವ್ಯಾಪ್ತಿಗೆ ಬಂದರೆ, ಅಂತಹ ನಿಲ್ದಾಣದಲ್ಲಿ ಪ್ರವೇಶ ಅಥವಾ ನಿರ್ಗಮನ ದ್ವಾರ ತೆರೆಯಲಾಗುವುದಿಲ್ಲ. ಈ ಕುರಿತು ಪ್ರಯಾಣಿಕರಿಗೆ ಮಾಹಿತಿ ನೀಡಲಾಗುತ್ತದೆ. ಪ್ರಯಾಣಿಕರು ಸಮೀಪದ ನಿಲ್ದಾಣವನ್ನು ಹತ್ತಲು ಮತ್ತು ಇಳಿಯಲು ಬಳಸಿಕೊಳ್ಳಬಹುದು ಎಂದು ಎಸ್ಒಪಿಯಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ’ ರೈಲು ಸೇವೆ ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಮೆಟ್ರೊ ರೈಲು ನಿಗಮವು ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು (ಎಸ್ಒಪಿ) ಗುರುವಾರ ಪ್ರಕಟಿಸಿದೆ.</p>.<p>ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ಟೋಕನ್ ಮಾರಾಟವನ್ನು ನಿಷೇಧಿಸಲಾಗಿದ್ದು, ಸ್ಮಾರ್ಟ್ಕಾರ್ಡ್ ಇದ್ದವರಿಗೆ ಮಾತ್ರ ಸಂಚರಿಸಲು ಅವಕಾಶ ನೀಡಲಾಗುತ್ತದೆ. ಸ್ಮಾರ್ಟ್ಕಾರ್ಡ್ ರಿಚಾರ್ಜ್ ಮಾಡಿಸಿದ ಮೇಲೆ ಅದನ್ನು ಬಳಸಲು ಮೊದಲು 60 ದಿನಗಳವರೆಗೆ ಸಮಯವಿತ್ತು. ಈಗ, ಇದನ್ನು 7 ದಿನಗಳಿಗೆ ಸೀಮಿತಗೊಳಿಸಲಾಗಿದೆ. ಅಂದರೆ, ರಿಚಾರ್ಜ್ ಮಾಡಿಸಿದ ಏಳು ದಿನದೊಳಗೆ ಆ ಕಾರ್ಡ್ ಮೂಲಕ ಮೊದಲು ಪ್ರಯಾಣ ಮಾಡಬೇಕು. ನಿಗಮವು ಸೆ.7ರಿಂದ ಮೊಬೈಲ್ ಆ್ಯಪ್ ಬಳಸುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.</p>.<p>ಎಲ್ಲ ನಿಲ್ದಾಣಗಳಲ್ಲಿ ಒದಗಿಸಲಾದ ಯುಪಿಐ, ಕ್ಯೂಆರ್ಕೋಡ್ ಅಥವಾ ಪೇಟಿಎಂ ಮೂಲಕ, ನಿಲ್ದಾಣದಲ್ಲಿ ನಗದುರಹಿತ ಪಾವತಿ ಮಾಡಿ ಸ್ಮಾರ್ಟ್ಕಾರ್ಡ್ ಖರೀದಿ ಅಥವಾ ರಿಚಾರ್ಜ್ ಮಾಡಬಹುದು.</p>.<p>ಇದಲ್ಲದೆ,ಪ್ರಯಾಣಿಕರು ನಿಲ್ದಾಣಕ್ಕೆ ಬರುವ ಒಂದು ಗಂಟೆ ಮೊದಲು ಸ್ಮಾರ್ಟ್ಕಾರ್ಡ್ ರಿಚಾರ್ಜ್ ಮಾಡಿಸಿಕೊಳ್ಳಬೇಕು. ಇದಕ್ಕೆ, ನಮ್ಮ ಮೆಟ್ರೊ ಮೊಬೈಲ್ ಅಪ್ಲಿಕೇಷನ್ ಅಥವಾ ಬಿಎಂಆರ್ಸಿಎಲ್ ವೆಬ್ಸೈಟ್ ಮೂಲಕ ರಿಚಾರ್ಜ್ ಮಾಡಿಸಿಕೊಳ್ಳಬೇಕು.</p>.<p>ಮೊದಲಿನಂತೆ, ಪ್ರವೇಶ ಅಥವಾ ನಿರ್ಗಮನ ಗೇಟ್ಗಳ ಕಾರ್ಡ್ ರೀಡರ್ ಮೇಲೆ ಸ್ಮಾರ್ಟ್ಕಾರ್ಡ್ ಇಡುವ ಬದಲಾಗಿ, 3 ಸೆ.ಮೀ. ದೂರದಿಂದಲೇ ಪ್ರಸ್ತುತಪಡಿಸಬೇಕು ಎಂದು ನಿಗಮ ಹೇಳಿದೆ.</p>.<p>ಸೆ.7ರಿಂದ ನೇರಳೆ ಮಾರ್ಗದಲ್ಲಿ, 9ರಿಂದ ಹಸಿರು ಮಾರ್ಗದಲ್ಲಿ ಸಂಚಾರ ಆರಂಭವಾಗಲಿದೆ. ಸೆ.11ರಿಂದ ಬೆಳಿಗ್ಗೆ 7ರಿಂದ ರಾತ್ರಿ 9ರವರೆಗೆ ಎರಡೂ ಮಾರ್ಗಗಳಲ್ಲಿ ರೈಲುಗಳು ಸಂಚರಿಸಲಿವೆ.</p>.<p><strong>ಕಂಟೈನ್ಮೆಂಟ್ ವಲಯದಲ್ಲಿ ಪ್ರವೇಶವಿಲ್ಲ</strong></p>.<p>ಯಾವುದೇ ನಿಲ್ದಾಣವು ಕಂಟೈನ್ಮೆಂಟ್ ವಲಯದ ವ್ಯಾಪ್ತಿಗೆ ಬಂದರೆ, ಅಂತಹ ನಿಲ್ದಾಣದಲ್ಲಿ ಪ್ರವೇಶ ಅಥವಾ ನಿರ್ಗಮನ ದ್ವಾರ ತೆರೆಯಲಾಗುವುದಿಲ್ಲ. ಈ ಕುರಿತು ಪ್ರಯಾಣಿಕರಿಗೆ ಮಾಹಿತಿ ನೀಡಲಾಗುತ್ತದೆ. ಪ್ರಯಾಣಿಕರು ಸಮೀಪದ ನಿಲ್ದಾಣವನ್ನು ಹತ್ತಲು ಮತ್ತು ಇಳಿಯಲು ಬಳಸಿಕೊಳ್ಳಬಹುದು ಎಂದು ಎಸ್ಒಪಿಯಲ್ಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>