<p><strong>ಬೆಂಗಳೂರು</strong>: ‘ಸುಸ್ಥಿರ ಅಭಿವೃದ್ಧಿ ಗುರಿ ಮುಟ್ಟಲು ಎಲ್ಲ ಸ್ತರಗಳಲ್ಲೂ ದೀರ್ಘಕಾಲದ ದೊಡ್ಡಮಟ್ಟದ ಸಂಘಟನಾತ್ಮಕ ಸಹಯೋಗ ಅಗತ್ಯವಾಗಿದೆ’ ಎಂದು ಸೆಲ್ಕೊ ಫೌಂಡೇಷನ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹರೀಶ್ ಹಂದೆ ಹೇಳಿದರು.</p>.<p>ಸೆಲ್ಕೊ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಜಯನಗರದಲ್ಲಿ ನಡೆದ ಸೌರಶಕ್ತಿಯ ಅನ್ವಯಿಕಗಳ ಕುರಿತ ಒಂದು ದಿನದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>‘2030ರ ಹೊತ್ತಿಗೆ ಸುಸ್ಥಿರ ಅಭಿವೃದ್ಧಿ ಗುರಿ ತಲುಪಲು ಜೀವನೋಪಾಯ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಸಾಧಿಸಬೇಕೆಂದರೆ ಅದು ಕುಕ್ಕುಟೋದ್ಯಮವೇ ಇರಲಿ, ಗಿರಣಿ, ಗಾಣ ಮುಂತಾದ ಎಲ್ಲ ಕ್ಷೇತ್ರಗಳಲ್ಲೂ ಸೌರಶಕ್ತಿ ಬಳಕೆ ಅನಿವಾರ್ಯ’ ಎಂದರು.</p>.<p>ಕೇಂದ್ರದ ಗ್ರಾಮೀಣ ವಿದ್ಯುದೀಕರಣ ನಿಗಮದ(ಆರ್ಇಸಿ) ಕಾರ್ಯಕ್ರಮಗಳ ಹಿರಿಯ ವ್ಯವಸ್ಥಾಪಕ ಸೌಮ್ಯಕಾಂತ್ ಮಾತನಾಡಿ, ‘ಪಳೆಯುಳಿಕೆಗಳ ಮೇಲೆ ಅವಲಂಬಿತವಾಗಿರುವ ಈಗಿನ ಇಂಧನ ಮೂಲಗಳನ್ನು ಭವಿಷ್ಯದಲ್ಲಿ ಹಸಿರು ಮತ್ತು ಶುದ್ಧ ಇಂಧನ ಮೂಲಗಳಾದ ಗಾಳಿ, ನೀರು ಮತ್ತು ಸೌರಶಕ್ತಿ ಆಧಾರಿತವಾಗಿ ರೂಪಿಸಲು ಆರ್ಇಸಿ ಬದ್ಧವಾಗಿದೆ‘ ಎಂದರು.</p>.<p>‘ಗ್ರಾಮೀಣ ಜನರಿಗೆ ಆಧುನಿಕ ತಂತ್ರಜ್ಞಾನದೊಂದಿಗೆ ಪರಿಸರಕ್ಕೆ ಪೂರಕವಾದ ವಿಶ್ವಾಸಾರ್ಹ ಮತ್ತು ಕೈಗೆಟಕುವ ಇಂಧನವನ್ನು ಒದಗಿಸುವ ಮೂಲಕ ಅವರ ಆರ್ಥಿಕ, ಸಾಮಾಜಿಕ ಬದಲಾವಣೆಗಾಗಿ ಆರ್ಇಸಿ ಫೌಂಡೇಷನ್ ಆರಂಭಿಸಲಾಗಿದ್ದು, ಇದಕ್ಕೆ ಸುಸ್ಥಿರ ಅಭಿವೃದ್ಧಿಯೇ ಮೂಲ ಮಂತ್ರವಾಗಿದೆ’ ಎಂದು ಅವರು ವಿವರಿಸಿದರು.</p>.<p>ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಪ್ರಿಯಾ ಖಾನ್ ಅವರು, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಸೆಲ್ಕೊ ಸಂಸ್ಥೆ ಜತೆ ಕೈ ಜೋಡಿಸಲು ಮಹಾರಾಷ್ಟ್ರ ಸರ್ಕಾರ ಹೆಚ್ಚು ಉತ್ಸುಕವಾಗಿದೆ ಎಂದರು.</p>.<p>ಸುಸ್ಥಿರ ಇಂಧನವನ್ನು ಆಧಾರವಾಗಿಟ್ಟುಕೊಂಡು ಮಹಿಳಾ ಬಲವರ್ಧನೆಯಲ್ಲಿ ತೊಡಗಿರುವ ಬಿಹಾರದ ಜೆ. ವೈರ್ಸ್ ನಿರ್ದೇಶಕಿ ಸಂಜುದೇವಿ, ತಮ್ಮ ಸಂಸ್ಥೆಯ ಯಶೋಗಾಥೆಯನ್ನು ಹಂಚಿಕೊಂಡರು.</p>.<p>ಸೆಲ್ಕೊ ಇಂಡಿಯಾದ ಸಿಇಒ ಮೋಹನ ಭಾಸ್ಕರ ಹೆಗಡೆ, ನಿರ್ದೇಶಕರಾದ ಥಾಮಸ್ ಪುಲ್ಲೆಂಕೇವ್, ಸೆಲ್ಕೊ ಫೌಂಡೇಷನ್ನ ನಿರ್ದೇಶಕಿ ಹುದಾ ಜಾಫರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸುಸ್ಥಿರ ಅಭಿವೃದ್ಧಿ ಗುರಿ ಮುಟ್ಟಲು ಎಲ್ಲ ಸ್ತರಗಳಲ್ಲೂ ದೀರ್ಘಕಾಲದ ದೊಡ್ಡಮಟ್ಟದ ಸಂಘಟನಾತ್ಮಕ ಸಹಯೋಗ ಅಗತ್ಯವಾಗಿದೆ’ ಎಂದು ಸೆಲ್ಕೊ ಫೌಂಡೇಷನ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹರೀಶ್ ಹಂದೆ ಹೇಳಿದರು.</p>.<p>ಸೆಲ್ಕೊ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಜಯನಗರದಲ್ಲಿ ನಡೆದ ಸೌರಶಕ್ತಿಯ ಅನ್ವಯಿಕಗಳ ಕುರಿತ ಒಂದು ದಿನದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>‘2030ರ ಹೊತ್ತಿಗೆ ಸುಸ್ಥಿರ ಅಭಿವೃದ್ಧಿ ಗುರಿ ತಲುಪಲು ಜೀವನೋಪಾಯ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಪ್ರಗತಿ ಸಾಧಿಸಬೇಕೆಂದರೆ ಅದು ಕುಕ್ಕುಟೋದ್ಯಮವೇ ಇರಲಿ, ಗಿರಣಿ, ಗಾಣ ಮುಂತಾದ ಎಲ್ಲ ಕ್ಷೇತ್ರಗಳಲ್ಲೂ ಸೌರಶಕ್ತಿ ಬಳಕೆ ಅನಿವಾರ್ಯ’ ಎಂದರು.</p>.<p>ಕೇಂದ್ರದ ಗ್ರಾಮೀಣ ವಿದ್ಯುದೀಕರಣ ನಿಗಮದ(ಆರ್ಇಸಿ) ಕಾರ್ಯಕ್ರಮಗಳ ಹಿರಿಯ ವ್ಯವಸ್ಥಾಪಕ ಸೌಮ್ಯಕಾಂತ್ ಮಾತನಾಡಿ, ‘ಪಳೆಯುಳಿಕೆಗಳ ಮೇಲೆ ಅವಲಂಬಿತವಾಗಿರುವ ಈಗಿನ ಇಂಧನ ಮೂಲಗಳನ್ನು ಭವಿಷ್ಯದಲ್ಲಿ ಹಸಿರು ಮತ್ತು ಶುದ್ಧ ಇಂಧನ ಮೂಲಗಳಾದ ಗಾಳಿ, ನೀರು ಮತ್ತು ಸೌರಶಕ್ತಿ ಆಧಾರಿತವಾಗಿ ರೂಪಿಸಲು ಆರ್ಇಸಿ ಬದ್ಧವಾಗಿದೆ‘ ಎಂದರು.</p>.<p>‘ಗ್ರಾಮೀಣ ಜನರಿಗೆ ಆಧುನಿಕ ತಂತ್ರಜ್ಞಾನದೊಂದಿಗೆ ಪರಿಸರಕ್ಕೆ ಪೂರಕವಾದ ವಿಶ್ವಾಸಾರ್ಹ ಮತ್ತು ಕೈಗೆಟಕುವ ಇಂಧನವನ್ನು ಒದಗಿಸುವ ಮೂಲಕ ಅವರ ಆರ್ಥಿಕ, ಸಾಮಾಜಿಕ ಬದಲಾವಣೆಗಾಗಿ ಆರ್ಇಸಿ ಫೌಂಡೇಷನ್ ಆರಂಭಿಸಲಾಗಿದ್ದು, ಇದಕ್ಕೆ ಸುಸ್ಥಿರ ಅಭಿವೃದ್ಧಿಯೇ ಮೂಲ ಮಂತ್ರವಾಗಿದೆ’ ಎಂದು ಅವರು ವಿವರಿಸಿದರು.</p>.<p>ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಪ್ರಿಯಾ ಖಾನ್ ಅವರು, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಸೆಲ್ಕೊ ಸಂಸ್ಥೆ ಜತೆ ಕೈ ಜೋಡಿಸಲು ಮಹಾರಾಷ್ಟ್ರ ಸರ್ಕಾರ ಹೆಚ್ಚು ಉತ್ಸುಕವಾಗಿದೆ ಎಂದರು.</p>.<p>ಸುಸ್ಥಿರ ಇಂಧನವನ್ನು ಆಧಾರವಾಗಿಟ್ಟುಕೊಂಡು ಮಹಿಳಾ ಬಲವರ್ಧನೆಯಲ್ಲಿ ತೊಡಗಿರುವ ಬಿಹಾರದ ಜೆ. ವೈರ್ಸ್ ನಿರ್ದೇಶಕಿ ಸಂಜುದೇವಿ, ತಮ್ಮ ಸಂಸ್ಥೆಯ ಯಶೋಗಾಥೆಯನ್ನು ಹಂಚಿಕೊಂಡರು.</p>.<p>ಸೆಲ್ಕೊ ಇಂಡಿಯಾದ ಸಿಇಒ ಮೋಹನ ಭಾಸ್ಕರ ಹೆಗಡೆ, ನಿರ್ದೇಶಕರಾದ ಥಾಮಸ್ ಪುಲ್ಲೆಂಕೇವ್, ಸೆಲ್ಕೊ ಫೌಂಡೇಷನ್ನ ನಿರ್ದೇಶಕಿ ಹುದಾ ಜಾಫರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>