<p><strong>ಬೆಂಗಳೂರು:</strong> ಉತ್ತರ ಕರ್ನಾಟಕದ ಹಾಡು, ಕುಣಿತ, ನಾಟಕವನ್ನು ಒಂದೇ ಸೂರಿನಡಿ ಕಣ್ತುಂಬಿಕೊಂಡು ಸಂಭ್ರಮಿಸಿದ ನಗರದ ಜನರು, ಆ ಭಾಗದ ವಿಶೇಷ ರೊಟ್ಟಿ ಊಟವನ್ನು ಸವಿದರು.</p>.<p>ಹೋಟೆಲ್ ನಳಪಾಕ, ವಂದೇ ಕರ್ನಾಟಕ ಹಾಗೂ ಹುಬ್ಬಳ್ಳಿಯ ಗುರು ಇನ್ಸ್ಟಿಟ್ಯೂಟ್ ಜಂಟಿಯಾಗಿ ಕೋಣನಕುಂಟೆಯ ಪ್ರೆಸ್ಟೀಜ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಉತ್ತರೋತ್ತಮ ಉತ್ಸವ’ವು ಉತ್ತರ ಕರ್ನಾಟಕ ಭಾಗದ ಸಾಂಸ್ಕೃತಿಕ ಸೊಗಡನ್ನು ಪರಿಚಯಿಸಿತು. </p>.<p>ಈ ಸಾಂಸ್ಕೃತಿಕ ಉತ್ಸವದಲ್ಲಿ ಐಶ್ವರ್ಯ ದೇಸಾಯಿ ಅವರು ಹಿಂದೂಸ್ಥಾನಿ ಗಾಯನವನ್ನು ಪ್ರಸ್ತುತಪಡಿಸಿದರು. ಗಾಯಕಿ ಸಂಗೀತ ಕಟ್ಟಿ ಕುಲಕರ್ಣಿ ಅವರು ನಡೆಸಿಕೊಟ್ಟ ಸಂಗೀತ ವೈವಿಧ್ಯ ಕಾರ್ಯಕ್ರಮವು ನೆರೆದಿದ್ದವರನ್ನು ರಂಜಿಸಿತು. ಗುರುಬಲ ಎಂಟರ್ಟೈನರ್ಸ್ ವತಿಯಿಂದ ‘ಅಮರ ಮಧುರ ಪ್ರೇಮ’ ನಾಟಕವನ್ನು ಪ್ರದರ್ಶಿಸಲಾಯಿತು.</p>.<p>ಹುಬ್ಬಳ್ಳಿಯ ಗುರು ಇನ್ಸ್ಟಿಟ್ಯೂಟ್ ವತಿಯಿಂದ ಪ್ರಸ್ತುತಪಡಿಸಿದ ‘ರಾಶಿಚಕ್ರ’ ಏಕವ್ಯಕ್ತಿ ಹಾಸ್ಯ ರಂಗಪ್ರಯೋಗವು ಪ್ರೇಕ್ಷಕರು ನಗೆಗಡಲಲ್ಲಿ ತೇಲುವಂತೆ ಮಾಡಿತು. ಕಲಾವಿದೆ ಸ್ಫೂರ್ತಿ ಜೋಶಿ ಅವರು ಕಥಕ್ ನೃತ್ಯ ಪ್ರಸ್ತುತಪಡಿಸಿದರು.</p>.<p>ಇದೇ ಸಮಾರಂಭದಲ್ಲಿ ರಂಗಕರ್ಮಿ ಯಶವಂತ ಸರದೇಶಪಾಂಡೆ ಅವರನ್ನು ಗೌರವಿಸಲಾಯಿತು. ರಂಗಭೂಮಿ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದರು.</p>.<p>ರಾಜಾಜಿನಗರದ ನಳಪಾಕ ಹೋಟೆಲ್ ವತಿಯಿಂದ ಉತ್ತರ ಕರ್ನಾಟಕದ ರೊಟ್ಟಿ ಊಟ ಏರ್ಪಾಡು ಮಾಡಲಾಗಿತ್ತು. ಕಲಾಸಕ್ತರು ಬಿಸಿ ರೊಟ್ಟಿ, ಪಲ್ಯ, ಖಡಕ್ ರೊಟ್ಟಿ, ಚಟ್ನಿಯನ್ನು ಒಳಗೊಂಡ ಊಟವನ್ನು ಸವಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉತ್ತರ ಕರ್ನಾಟಕದ ಹಾಡು, ಕುಣಿತ, ನಾಟಕವನ್ನು ಒಂದೇ ಸೂರಿನಡಿ ಕಣ್ತುಂಬಿಕೊಂಡು ಸಂಭ್ರಮಿಸಿದ ನಗರದ ಜನರು, ಆ ಭಾಗದ ವಿಶೇಷ ರೊಟ್ಟಿ ಊಟವನ್ನು ಸವಿದರು.</p>.<p>ಹೋಟೆಲ್ ನಳಪಾಕ, ವಂದೇ ಕರ್ನಾಟಕ ಹಾಗೂ ಹುಬ್ಬಳ್ಳಿಯ ಗುರು ಇನ್ಸ್ಟಿಟ್ಯೂಟ್ ಜಂಟಿಯಾಗಿ ಕೋಣನಕುಂಟೆಯ ಪ್ರೆಸ್ಟೀಜ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ನಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಉತ್ತರೋತ್ತಮ ಉತ್ಸವ’ವು ಉತ್ತರ ಕರ್ನಾಟಕ ಭಾಗದ ಸಾಂಸ್ಕೃತಿಕ ಸೊಗಡನ್ನು ಪರಿಚಯಿಸಿತು. </p>.<p>ಈ ಸಾಂಸ್ಕೃತಿಕ ಉತ್ಸವದಲ್ಲಿ ಐಶ್ವರ್ಯ ದೇಸಾಯಿ ಅವರು ಹಿಂದೂಸ್ಥಾನಿ ಗಾಯನವನ್ನು ಪ್ರಸ್ತುತಪಡಿಸಿದರು. ಗಾಯಕಿ ಸಂಗೀತ ಕಟ್ಟಿ ಕುಲಕರ್ಣಿ ಅವರು ನಡೆಸಿಕೊಟ್ಟ ಸಂಗೀತ ವೈವಿಧ್ಯ ಕಾರ್ಯಕ್ರಮವು ನೆರೆದಿದ್ದವರನ್ನು ರಂಜಿಸಿತು. ಗುರುಬಲ ಎಂಟರ್ಟೈನರ್ಸ್ ವತಿಯಿಂದ ‘ಅಮರ ಮಧುರ ಪ್ರೇಮ’ ನಾಟಕವನ್ನು ಪ್ರದರ್ಶಿಸಲಾಯಿತು.</p>.<p>ಹುಬ್ಬಳ್ಳಿಯ ಗುರು ಇನ್ಸ್ಟಿಟ್ಯೂಟ್ ವತಿಯಿಂದ ಪ್ರಸ್ತುತಪಡಿಸಿದ ‘ರಾಶಿಚಕ್ರ’ ಏಕವ್ಯಕ್ತಿ ಹಾಸ್ಯ ರಂಗಪ್ರಯೋಗವು ಪ್ರೇಕ್ಷಕರು ನಗೆಗಡಲಲ್ಲಿ ತೇಲುವಂತೆ ಮಾಡಿತು. ಕಲಾವಿದೆ ಸ್ಫೂರ್ತಿ ಜೋಶಿ ಅವರು ಕಥಕ್ ನೃತ್ಯ ಪ್ರಸ್ತುತಪಡಿಸಿದರು.</p>.<p>ಇದೇ ಸಮಾರಂಭದಲ್ಲಿ ರಂಗಕರ್ಮಿ ಯಶವಂತ ಸರದೇಶಪಾಂಡೆ ಅವರನ್ನು ಗೌರವಿಸಲಾಯಿತು. ರಂಗಭೂಮಿ ಕ್ಷೇತ್ರದ ಪ್ರಮುಖರು ಭಾಗವಹಿಸಿದ್ದರು.</p>.<p>ರಾಜಾಜಿನಗರದ ನಳಪಾಕ ಹೋಟೆಲ್ ವತಿಯಿಂದ ಉತ್ತರ ಕರ್ನಾಟಕದ ರೊಟ್ಟಿ ಊಟ ಏರ್ಪಾಡು ಮಾಡಲಾಗಿತ್ತು. ಕಲಾಸಕ್ತರು ಬಿಸಿ ರೊಟ್ಟಿ, ಪಲ್ಯ, ಖಡಕ್ ರೊಟ್ಟಿ, ಚಟ್ನಿಯನ್ನು ಒಳಗೊಂಡ ಊಟವನ್ನು ಸವಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>