ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿ. ಸೋಮಣ್ಣ ಕರೆ ಸ್ವೀಕರಿಸಲಿಲ್ಲ ಎಂದ ಬಿ.ಎಸ್‌. ಯಡಿಯೂರಪ್ಪ

Published 25 ನವೆಂಬರ್ 2023, 16:24 IST
Last Updated 25 ನವೆಂಬರ್ 2023, 16:24 IST
ಅಕ್ಷರ ಗಾತ್ರ

ಬೆಂಗಳೂರು: ‘ವಿ. ಸೋಮಣ್ಣ ಅವರ ಜತೆ ಮಾತನಾಡುವ ಪ್ರಯತ್ನ ಮಾಡಿದ್ದೇನೆ. ಅವರು ನನ್ನ ದೂರವಾಣಿ ಕರೆಯನ್ನು ಸ್ವೀಕರಿಸಲಿಲ್ಲ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಪಕ್ಷದ ನಾಯಕರ ವಿರುದ್ಧ ಸೋಮಣ್ಣ ಅಸಮಾಧಾನ ಹೊರಹಾಕಿರುವ ಕುರಿತು ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ‘ಸೋಮಣ್ಣ ಮಾತನಾಡಿದ್ದನ್ನು ನೋಡಿದ್ದೇನೆ. ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ’ ಎಂದರು.

‘ವಿಜಯೇಂದ್ರ ಮನೆಗೆ ಬಂದು ಹೂಗುಚ್ಛ ಕೊಡುವ ನಾಟಕ ಆಡುವುದು ಬೇಡ’ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಬಗ್ಗೆ ಕೇಳಿದಾಗ, ‘ಯತ್ನಾಳ ಮನೆಗೆ ಹೋಗುತ್ತೀವಿ ಅಂದವರು ಯಾರು’ ಎಂದು ಮರುಪ್ರಶ್ನೆ ಹಾಕಿದರು.

‘ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಕರಣದಲ್ಲಿ ನಾನು ಹೇಳಿರುವುದೆಲ್ಲವೂ ಸತ್ಯ. ಎಲ್ಲ ಗೊತ್ತಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸತ್ಯವನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT