<p><strong>ಹೆಸರಘಟ್ಟ</strong>: ಬೆಂಗಳೂರು ನಗರ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಸರ್ಕಾರಿ ಜಮೀನುಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ಒಂದು ಲಕ್ಷ ಮನೆಗಳ ಕಾಮಗಾರಿಯ ಪ್ರಗತಿಯನ್ನು ವಸತಿ ಸಚಿವ ವಿ. ಸೋಮಣ್ಣ ಭಾನುವಾರ ಪರಿಶೀಲಿಸಿದರು. ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಈ ಮನೆಗಳನ್ನು ನಿರ್ಮಿಸಲಾಗುತ್ತಿದೆ.</p>.<p>‘ನಾಲ್ಕು ವರ್ಷಗಳ ಹಿಂದೆಯೇ ಅನುಮೋದನೆ ಪಡೆಯಲಾಗಿದ್ದರೂ ಯೋಜನೆ ಸ್ಥಗಿತಗೊಂಡಿದೆ. ಕೆಲಸ ನಡೆಯುತ್ತಿಲ್ಲ ಎಂಬ ದೂರುಗಳು ಬರುತ್ತಿದ್ದವು. ಪ್ರಗತಿ ಪರಿಶೀಲನೆ ಕೈಗೊಳ್ಳಲಾಗಿದ್ದು, ಕಾಮಗಾರಿ ಚುರುಕುಗೊಳಿಸುವಂತೆ ಸೂಚನೆ ನೀಡಲಾಗಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>‘ಅಸಂಘಟಿತ ಕಾರ್ಮಿಕರು, ಆಟೊ ಚಾಲಕರು ಸೇರಿದಂತೆ ಆರ್ಥಿಕವಾಗಿ ಹಿಂದುಳಿದವರನ್ನು ಗುರುತಿಸಿ ಮನೆ ನೀಡಲಾಗುತ್ತದೆ. ವರ್ಷದೊಳಗೆ ಒಂದು ಲಕ್ಷ ಮನೆ ನಿರ್ಮಿಸಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೈಯಿಂದ ಫಲಾನುಭವಿಗಳಿಗೆ ಹಂಚಿಕೆ ಮಾಡಿಸಲಾಗುವುದು’ ಎಂದರು.</p>.<p class="Subhead">ಅಧಿಕಾರಿಗಳಿಗೆ ಸೂಚನೆ: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಗಾಣಿಗರಹಳ್ಳಿ, ಯಲಹಂಕ ತಾಲ್ಲೂಕಿನ ಅಗ್ರಹಾರ ಗ್ರಾಮದಲ್ಲಿ ಕಾಮಗಾರಿಯನ್ನು ವೀಕ್ಷಿಸಿದರು. ಬಿಳಿಜಾಜಿ, ಪಿಳ್ಳಹಳ್ಳಿ, ಲಕ್ಷ್ಮೀಪುರ ಗ್ರಾಮಗಳಲ್ಲಿ ಮನೆ ನಿರ್ಮಿಸಲು ಮಂಜೂರಾಗಿರುವ ಸ್ಥಳವನ್ನು ಪರಿಶೀಲಿಸಿ ಶೀಘ್ರವಾಗಿ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗಾಣಿಗರಹಳ್ಳಿ ಗ್ರಾಮದಲ್ಲಿ ಕೆಲಸ ಮಂದಗತಿಯಿಂದ ನಡೆಯುತ್ತಿರುವ ಬಗ್ಗೆ ಬೇಸರಗೊಂಡ ಅವರು, ಸ್ಥಳದಲ್ಲಿದ್ದ ಎಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡರು. ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.</p>.<p>‘ಗಾಣಿಗರಹಳ್ಳಿಯಲ್ಲಿ ಐದು ಎಕರೆ ಜಾಗದಲ್ಲಿ 931 ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು, ಇದರಲ್ಲಿ ಎರಡು ಕೋಣೆಯ 200 ಮನೆಗಳು, ಒಂದು ಕೋಣೆಯ 791 ಮನೆಗಳನ್ನು ನಿರ್ಮಿಸಲಾಗುತ್ತಿದೆ’ ಎಂದರು.</p>.<p>‘ಬೆಂಗಳೂರು ನಗರದಲ್ಲಿಯೇ ಸುಮಾರು 36 ಸಾವಿರ ಅರ್ಜಿಗಳು ಬಂದಿವೆ. ಲಕ್ಷ್ಮೀಪುರ, ಬಿಳಿಜಾಜಿ, ಪಿಲ್ಲಹಳ್ಳಿ, ಗ್ರಾಮಗಳಲ್ಲಿ ಗೋಮಾಳ ಜಾಗವನ್ನು ಮಂಜೂರು ಮಾಡಲಾಗಿದೆ. ಎರಡು ವಾರಗಳಲ್ಲಿ ಕೆಲಸ ಆರಂಭವಾಗಲಿದೆ’ ಎಂದರು.</p>.<p>‘ಗೋಮಾಳ ಜಾಗದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಅನ್ಯಾಯವಾಗದಂತೆ ಎಚ್ಚರವಹಿಸಿ’ ಎಂದೂ ಸೂಚಿಸಿದರು.</p>.<p>ದಾಸರಹಳ್ಳಿ ಶಾಸಕ ಆರ್.ಮಂಜುನಾಥ್, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮರಿಸ್ವಾಮಿ, ಹೆಸರಘಟ್ಟ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಬಿ.ಕೃಷ್ಣಯ್ಯ, ಯಲಹಂಕ ತಾಲ್ಲೂಕು ಪಂಚಾಯಿತಿ ಇಒ ಕಿಶೋರ್ ಕುಮಾರ್, ಹುರುಳಿಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ನಾರಾಯಣ ಸ್ವಾಮಿ, ನಿಗಮದ ಅಧಿಕಾರಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ</strong>: ಬೆಂಗಳೂರು ನಗರ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಸರ್ಕಾರಿ ಜಮೀನುಗಳಲ್ಲಿ ನಿರ್ಮಿಸಲು ಉದ್ದೇಶಿಸಿರುವ ಒಂದು ಲಕ್ಷ ಮನೆಗಳ ಕಾಮಗಾರಿಯ ಪ್ರಗತಿಯನ್ನು ವಸತಿ ಸಚಿವ ವಿ. ಸೋಮಣ್ಣ ಭಾನುವಾರ ಪರಿಶೀಲಿಸಿದರು. ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಈ ಮನೆಗಳನ್ನು ನಿರ್ಮಿಸಲಾಗುತ್ತಿದೆ.</p>.<p>‘ನಾಲ್ಕು ವರ್ಷಗಳ ಹಿಂದೆಯೇ ಅನುಮೋದನೆ ಪಡೆಯಲಾಗಿದ್ದರೂ ಯೋಜನೆ ಸ್ಥಗಿತಗೊಂಡಿದೆ. ಕೆಲಸ ನಡೆಯುತ್ತಿಲ್ಲ ಎಂಬ ದೂರುಗಳು ಬರುತ್ತಿದ್ದವು. ಪ್ರಗತಿ ಪರಿಶೀಲನೆ ಕೈಗೊಳ್ಳಲಾಗಿದ್ದು, ಕಾಮಗಾರಿ ಚುರುಕುಗೊಳಿಸುವಂತೆ ಸೂಚನೆ ನೀಡಲಾಗಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.</p>.<p>‘ಅಸಂಘಟಿತ ಕಾರ್ಮಿಕರು, ಆಟೊ ಚಾಲಕರು ಸೇರಿದಂತೆ ಆರ್ಥಿಕವಾಗಿ ಹಿಂದುಳಿದವರನ್ನು ಗುರುತಿಸಿ ಮನೆ ನೀಡಲಾಗುತ್ತದೆ. ವರ್ಷದೊಳಗೆ ಒಂದು ಲಕ್ಷ ಮನೆ ನಿರ್ಮಿಸಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೈಯಿಂದ ಫಲಾನುಭವಿಗಳಿಗೆ ಹಂಚಿಕೆ ಮಾಡಿಸಲಾಗುವುದು’ ಎಂದರು.</p>.<p class="Subhead">ಅಧಿಕಾರಿಗಳಿಗೆ ಸೂಚನೆ: ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಗಾಣಿಗರಹಳ್ಳಿ, ಯಲಹಂಕ ತಾಲ್ಲೂಕಿನ ಅಗ್ರಹಾರ ಗ್ರಾಮದಲ್ಲಿ ಕಾಮಗಾರಿಯನ್ನು ವೀಕ್ಷಿಸಿದರು. ಬಿಳಿಜಾಜಿ, ಪಿಳ್ಳಹಳ್ಳಿ, ಲಕ್ಷ್ಮೀಪುರ ಗ್ರಾಮಗಳಲ್ಲಿ ಮನೆ ನಿರ್ಮಿಸಲು ಮಂಜೂರಾಗಿರುವ ಸ್ಥಳವನ್ನು ಪರಿಶೀಲಿಸಿ ಶೀಘ್ರವಾಗಿ ಕಾಮಗಾರಿ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಗಾಣಿಗರಹಳ್ಳಿ ಗ್ರಾಮದಲ್ಲಿ ಕೆಲಸ ಮಂದಗತಿಯಿಂದ ನಡೆಯುತ್ತಿರುವ ಬಗ್ಗೆ ಬೇಸರಗೊಂಡ ಅವರು, ಸ್ಥಳದಲ್ಲಿದ್ದ ಎಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡರು. ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.</p>.<p>‘ಗಾಣಿಗರಹಳ್ಳಿಯಲ್ಲಿ ಐದು ಎಕರೆ ಜಾಗದಲ್ಲಿ 931 ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು, ಇದರಲ್ಲಿ ಎರಡು ಕೋಣೆಯ 200 ಮನೆಗಳು, ಒಂದು ಕೋಣೆಯ 791 ಮನೆಗಳನ್ನು ನಿರ್ಮಿಸಲಾಗುತ್ತಿದೆ’ ಎಂದರು.</p>.<p>‘ಬೆಂಗಳೂರು ನಗರದಲ್ಲಿಯೇ ಸುಮಾರು 36 ಸಾವಿರ ಅರ್ಜಿಗಳು ಬಂದಿವೆ. ಲಕ್ಷ್ಮೀಪುರ, ಬಿಳಿಜಾಜಿ, ಪಿಲ್ಲಹಳ್ಳಿ, ಗ್ರಾಮಗಳಲ್ಲಿ ಗೋಮಾಳ ಜಾಗವನ್ನು ಮಂಜೂರು ಮಾಡಲಾಗಿದೆ. ಎರಡು ವಾರಗಳಲ್ಲಿ ಕೆಲಸ ಆರಂಭವಾಗಲಿದೆ’ ಎಂದರು.</p>.<p>‘ಗೋಮಾಳ ಜಾಗದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಅನ್ಯಾಯವಾಗದಂತೆ ಎಚ್ಚರವಹಿಸಿ’ ಎಂದೂ ಸೂಚಿಸಿದರು.</p>.<p>ದಾಸರಹಳ್ಳಿ ಶಾಸಕ ಆರ್.ಮಂಜುನಾಥ್, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮರಿಸ್ವಾಮಿ, ಹೆಸರಘಟ್ಟ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಬಿ.ಕೃಷ್ಣಯ್ಯ, ಯಲಹಂಕ ತಾಲ್ಲೂಕು ಪಂಚಾಯಿತಿ ಇಒ ಕಿಶೋರ್ ಕುಮಾರ್, ಹುರುಳಿಚಿಕ್ಕನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ನಾರಾಯಣ ಸ್ವಾಮಿ, ನಿಗಮದ ಅಧಿಕಾರಿಗಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>