ಜಯನಗರದ ಯುನೈಟೆಡ್ ಆಸ್ಪತ್ರೆಯ ಸಹಯೋಗದಲ್ಲಿ ರೋಟರ್ಯಾಕ್ಟ್ ಬೆಂಗಳೂರು ಸೌತ್ ನಗರದಲ್ಲಿ ಶನಿವಾರ ಆಯೋಜಿಸಿದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ, ಮಾತನಾಡಿದರು. ‘ಕೋವಿಡ್ ಮೂರನೇ ಅಲೆಯ ಮುನ್ಸೂಚನೆ ಗೋಚರಿಸಲಾರಂಭಿಸಿದೆ. ಈ ಸಾಂಕ್ರಾಮಿಕ ಕಾಯಿಲೆಯ ವಿರುದ್ಧ ಹೋರಾಡಲು ಲಸಿಕೆಯೇ ಪ್ರಮುಖ ಅಸ್ತ್ರ. ಹಾಗಾಗಿ, ಜನರು ಜಾಗೃತರಾಗಿ ಲಸಿಕೆಗಳನ್ನು ಪಡೆದುಕೊಳ್ಳಬೇಕು’ ಎಂದರು.