<p><strong>ಬೆಂಗಳೂರು</strong>: ‘ಕನ್ನಡ ಸಾಹಿತ್ಯದಲ್ಲಿ ದಲಿತ ಬಂಡಾಯ ಪ್ರಕಾರ ಇದೆ. ಆದರೆ ತೆಲುಗು ಭಾಷೆಯಲ್ಲಿ ಬಹುಜನ ಸಾಹಿತ್ಯ ಪ್ರಕಾರ ಹೊಸ ಅಲೆಯನ್ನು ಸೃಷ್ಟಿಸಿದೆ. ಕನ್ನಡದಲ್ಲಿ ಈ ರೀತಿಯ ಬರವಣಿಗೆ ಕಾಣುವುದು ವಚನ ಪರಂಪರೆಯಲ್ಲಿ ಮಾತ್ರ’ ಎಂದು ಲೇಖಕ ಮೂಡ್ನಾಕೂಡು ಚಿನ್ನಸ್ವಾಮಿ ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕೆನರಾ ಬ್ಯಾಂಕ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ನಲ್ಲಿ ತೆಲುಗು ಅಧ್ಯಯನ ವಿಭಾಗದ ವತಿಯಿಂದ ಆಯೋಜಿಸಿದ್ದ ‘ತೆಲುಗು–ಕನ್ನಡ ಬಹುಜನ ಸಾಹಿತ್ಯ' ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>‘ಸಾಹಿತಿಗಳಾದ ಲಂಕೇಶ್, ಯು.ಆರ್.ಅನಂತಮೂರ್ತಿ ಅವರೊಂದಿಗೆ ಸೇರಿಕೊಂಡು ‘ಜಾಗೃತ ಕನ್ನಡ ಸಾಹಿತ್ಯ’ವನ್ನು ಹುಟ್ಟುಹಾಕಲು ಪ್ರಯತ್ನ ಮಾಡಿದೆವು. ಆದರೆ ಅಂದಿನಿಂದ ಇವತ್ತಿನವರೆಗೂ ಸಾಹಿತ್ಯದ ಗತಿ ಬದಲಾಗಲೇ ಇಲ್ಲ. ಕನ್ನಡದಲ್ಲೂ ಬಹುಜನ ಸಾಹಿತ್ಯ ಪ್ರಕಾರ ಬೆಳೆದರೆ ಸಾಕಷ್ಟು ಬದಲಾವಣೆ ನಿರೀಕ್ಷಿಸಬಹುದು’ ಎಂದರು.</p>.<p>‘ವಚನ ಸಾಹಿತ್ಯದಲ್ಲಿ ಜಾತಿ, ಧರ್ಮ, ಮೇಲು–ಕೀಳುಗಳ ವಿರುದ್ಧ ಧ್ವನಿ ಎತ್ತಲಾಗಿದೆ. ಆದರೆ ಆ ನಂತರ ಅದು ಹೆಚ್ಚು ಗಮನಸೆಳೆದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಆಧುನಿಕ ಬರಹಗಳು ಕೆಲವೊಮ್ಮೆ ಇಣುಕಿ ಮರೆಯಾಗುತ್ತವೆ’ ಎಂದು ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಬಿ.ಕೆ.ರವಿ, ‘ಕನ್ನಡದಲ್ಲಿ ಬಹುಜನ ಸಾಹಿತ್ಯಿಕ ಚಿಂತನೆ ಇಲ್ಲದಿರುವುದರ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ತೆಲುಗು ಪತ್ರಿಕೆಗಳ ಪ್ರಸಾರ ಸಂಖ್ಯೆ ಕೂಡ ಹೆಚ್ಚುತ್ತಿದೆ. ಇದು ಒಳ್ಳೆಯ ಬೆಳವಣಿಗೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕನ್ನಡ ಸಾಹಿತ್ಯದಲ್ಲಿ ದಲಿತ ಬಂಡಾಯ ಪ್ರಕಾರ ಇದೆ. ಆದರೆ ತೆಲುಗು ಭಾಷೆಯಲ್ಲಿ ಬಹುಜನ ಸಾಹಿತ್ಯ ಪ್ರಕಾರ ಹೊಸ ಅಲೆಯನ್ನು ಸೃಷ್ಟಿಸಿದೆ. ಕನ್ನಡದಲ್ಲಿ ಈ ರೀತಿಯ ಬರವಣಿಗೆ ಕಾಣುವುದು ವಚನ ಪರಂಪರೆಯಲ್ಲಿ ಮಾತ್ರ’ ಎಂದು ಲೇಖಕ ಮೂಡ್ನಾಕೂಡು ಚಿನ್ನಸ್ವಾಮಿ ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಕೆನರಾ ಬ್ಯಾಂಕ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ನಲ್ಲಿ ತೆಲುಗು ಅಧ್ಯಯನ ವಿಭಾಗದ ವತಿಯಿಂದ ಆಯೋಜಿಸಿದ್ದ ‘ತೆಲುಗು–ಕನ್ನಡ ಬಹುಜನ ಸಾಹಿತ್ಯ' ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.</p>.<p>‘ಸಾಹಿತಿಗಳಾದ ಲಂಕೇಶ್, ಯು.ಆರ್.ಅನಂತಮೂರ್ತಿ ಅವರೊಂದಿಗೆ ಸೇರಿಕೊಂಡು ‘ಜಾಗೃತ ಕನ್ನಡ ಸಾಹಿತ್ಯ’ವನ್ನು ಹುಟ್ಟುಹಾಕಲು ಪ್ರಯತ್ನ ಮಾಡಿದೆವು. ಆದರೆ ಅಂದಿನಿಂದ ಇವತ್ತಿನವರೆಗೂ ಸಾಹಿತ್ಯದ ಗತಿ ಬದಲಾಗಲೇ ಇಲ್ಲ. ಕನ್ನಡದಲ್ಲೂ ಬಹುಜನ ಸಾಹಿತ್ಯ ಪ್ರಕಾರ ಬೆಳೆದರೆ ಸಾಕಷ್ಟು ಬದಲಾವಣೆ ನಿರೀಕ್ಷಿಸಬಹುದು’ ಎಂದರು.</p>.<p>‘ವಚನ ಸಾಹಿತ್ಯದಲ್ಲಿ ಜಾತಿ, ಧರ್ಮ, ಮೇಲು–ಕೀಳುಗಳ ವಿರುದ್ಧ ಧ್ವನಿ ಎತ್ತಲಾಗಿದೆ. ಆದರೆ ಆ ನಂತರ ಅದು ಹೆಚ್ಚು ಗಮನಸೆಳೆದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಆಧುನಿಕ ಬರಹಗಳು ಕೆಲವೊಮ್ಮೆ ಇಣುಕಿ ಮರೆಯಾಗುತ್ತವೆ’ ಎಂದು ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಬಿ.ಕೆ.ರವಿ, ‘ಕನ್ನಡದಲ್ಲಿ ಬಹುಜನ ಸಾಹಿತ್ಯಿಕ ಚಿಂತನೆ ಇಲ್ಲದಿರುವುದರ ಕುರಿತು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ತೆಲುಗು ಪತ್ರಿಕೆಗಳ ಪ್ರಸಾರ ಸಂಖ್ಯೆ ಕೂಡ ಹೆಚ್ಚುತ್ತಿದೆ. ಇದು ಒಳ್ಳೆಯ ಬೆಳವಣಿಗೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>