ವಡ್ಡರಹಳ್ಳಿ ಪ್ರದೇಶದಲ್ಲಿ ಖಾಲಿ ನಿವೇಶನಗಳು, ಕೃಷಿಭೂಮಿ, ಕುರುಚಲು ಪೊದೆಗಳು ಹಾಗೂ ಮರಮಟ್ಟುಗಳಿವೆ. ಸಮೀಪದಲ್ಲೇ ಎರಡು ಕೆರೆಗಳಿವೆ. ಈ ಪ್ರದೇಶ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಸಮೀಪದಲ್ಲಿದೆ. ಐದಾರು ವರ್ಷಗಳಿಂದ ಈಚೆಗೆ ಈ ಪ್ರದೇಶದಲ್ಲಿ ಹೊಸ ಬಡಾವಣೆ ಅಭಿವೃದ್ಧಿಯಾಗುತ್ತಿದೆ. ಇದು ವನ್ಯಜೀವಿ–ಮಾನವ ಸಂಘರ್ಷಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ತಿಳಿಸಿದರು. ಅರಣ್ಯ ಇಲಾಖೆಯವರು ಈ ಕರಡಿಯನ್ನು ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.