<p><strong>ಬೆಂಗಳೂರು:</strong> ಮಾರತ್ಹಳ್ಳಿಯ ವಾಗ್ದೇವಿ ವಿಲಾಸ ಸೂಪರ್ ಶಾಲೆಯಲ್ಲಿ ‘ಪುಟಾಣಿ ಪ್ರಪಂಚ’ ಮಕ್ಕಳ ಉತ್ಸವವನ್ನು ವಿಶಿಷ್ಟವಾಗಿ ಆಯೋಜಿಸಲಾಗಿತ್ತು.</p>.<p>ಶಿಕ್ಷಣದ ಜತೆಗೆ ಸಾಂಸ್ಕೃತಿಕ ಮೌಲ್ಯಗಳು ಹಾಗೂ ದೇಶಭಕ್ತಿಯ ಭಾವನೆಗಳನ್ನು ಮಕ್ಕಳ ಮನಸ್ಸಿನಲ್ಲಿ ಬಿತ್ತುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಪೋಷಕರಿಂದ ಉತ್ತಮ ಸ್ಪಂದನೆ ದೊರಕಿತು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.</p>.<p>ಮುಖ್ಯ ಅತಿಥಿಯಾಗಿದ್ದ ನಿವೃತ್ತ ಮೇಜರ್ ಜನರಲ್ ಜಿ.ಡಿ.ಭಕ್ಷಿ ಅವರು, ತಮ್ಮ ಸೇವಾವಧಿಯಲ್ಲಿ ನಡೆದ ಯುದ್ಧ, ಹೋರಾಟಗಳ ನೆನಪುಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.</p>.<p>‘ದೇಶಪ್ರೇಮ ಎಂದರೆ ಕೇವಲ ಮಾತಲ್ಲ. ಅದು ಜೀವನ ಮೌಲ್ಯವಾಗಬೇಕು. ದೇಶಭಕ್ತಿಯನ್ನು ಎಂದಿಗೂ ಮರೆಯಬಾರದು’ ಎಂದು ಕಿವಿಮಾತು ಹೇಳಿದರು.</p>.<p>ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ರೂಪಿಸಿದ ಶ್ರೀಕೃಷ್ಣ ಹಾಗೂ ಮೇಜರ್ ಜನರಲ್ ಭಕ್ಷಿ ಅವರ ಸುಂದರ ಮರಳು ಶಿಲ್ಪ ಮನಸೂರೆಗೊಂಡವು.</p>.<p>ವಾಗ್ದೇವಿ ವಿಲಾಸ ಸಂಸ್ಥೆಯ ಅಧ್ಯಕ್ಷ ಕೆ ಹರೀಶ್, ಸಿಇಒ ಶ್ಯಾಲೆಟ್, ಪ್ರಾಂಶುಪಾಲರು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾರತ್ಹಳ್ಳಿಯ ವಾಗ್ದೇವಿ ವಿಲಾಸ ಸೂಪರ್ ಶಾಲೆಯಲ್ಲಿ ‘ಪುಟಾಣಿ ಪ್ರಪಂಚ’ ಮಕ್ಕಳ ಉತ್ಸವವನ್ನು ವಿಶಿಷ್ಟವಾಗಿ ಆಯೋಜಿಸಲಾಗಿತ್ತು.</p>.<p>ಶಿಕ್ಷಣದ ಜತೆಗೆ ಸಾಂಸ್ಕೃತಿಕ ಮೌಲ್ಯಗಳು ಹಾಗೂ ದೇಶಭಕ್ತಿಯ ಭಾವನೆಗಳನ್ನು ಮಕ್ಕಳ ಮನಸ್ಸಿನಲ್ಲಿ ಬಿತ್ತುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಪೋಷಕರಿಂದ ಉತ್ತಮ ಸ್ಪಂದನೆ ದೊರಕಿತು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.</p>.<p>ಮುಖ್ಯ ಅತಿಥಿಯಾಗಿದ್ದ ನಿವೃತ್ತ ಮೇಜರ್ ಜನರಲ್ ಜಿ.ಡಿ.ಭಕ್ಷಿ ಅವರು, ತಮ್ಮ ಸೇವಾವಧಿಯಲ್ಲಿ ನಡೆದ ಯುದ್ಧ, ಹೋರಾಟಗಳ ನೆನಪುಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.</p>.<p>‘ದೇಶಪ್ರೇಮ ಎಂದರೆ ಕೇವಲ ಮಾತಲ್ಲ. ಅದು ಜೀವನ ಮೌಲ್ಯವಾಗಬೇಕು. ದೇಶಭಕ್ತಿಯನ್ನು ಎಂದಿಗೂ ಮರೆಯಬಾರದು’ ಎಂದು ಕಿವಿಮಾತು ಹೇಳಿದರು.</p>.<p>ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ರೂಪಿಸಿದ ಶ್ರೀಕೃಷ್ಣ ಹಾಗೂ ಮೇಜರ್ ಜನರಲ್ ಭಕ್ಷಿ ಅವರ ಸುಂದರ ಮರಳು ಶಿಲ್ಪ ಮನಸೂರೆಗೊಂಡವು.</p>.<p>ವಾಗ್ದೇವಿ ವಿಲಾಸ ಸಂಸ್ಥೆಯ ಅಧ್ಯಕ್ಷ ಕೆ ಹರೀಶ್, ಸಿಇಒ ಶ್ಯಾಲೆಟ್, ಪ್ರಾಂಶುಪಾಲರು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>