ಹೊಸಕೋಟೆಯ ಗಾಣಿಗರ ಪೇಟೆಯಲ್ಲಿನ ಸುಮಾರು 400 ವರ್ಷಗಳ ಇತಿಹಾಸವಿರುವ ಶ್ರೀಲಕ್ಷ್ಮಿನಾರಾಯಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಸತ್ಯನಾರಾಯಣ ಪೂಜೆ ಹಮ್ಮಿಕೊಳ್ಳಲಾಗಿದೆ.
ಜತೆಗೆ ಸಂಕಷ್ಟಹರ ಗಣಪತಿ ಪೂಜೆ, ಲಕ್ಷ ದೀಪೋತ್ಸವ ಮತ್ತಿತರ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿವೆ. ಪೂಜಾ ಮಹೋತ್ಸವದಲ್ಲಿ ಸುತ್ತಮುತ್ತಲಿನ ಹಳ್ಳಿಗಳಿಂದ ಸಹಸ್ರಾರು ಭಕ್ತರು ಪಾಲ್ಗೊಳ್ಳುವರು.
ಶಿಥಿಲಗೊಂಡಿದ್ದ ಈ ದೇವಾಲಯವನ್ನು 2011ರಲ್ಲಿ ದುರಸ್ತಿ ಮಾಡಲಾಗಿದೆ. ಜ್ಯೋತಿನಗರ ವೈಶ್ಯ ಗಾಣಿಗ ಸಮುದಾಯದ ಮುಖಂಡರು ಹಾಗೂ ಯುವಕರು ಈ ದೇವಾಲಯವನ್ನು ಸಂಪೂರ್ಣವಾಗಿ ನವೀಕರಿಸಿದ್ದಾರೆ.