<p><strong>ಬೆಂಗಳೂರು:</strong> ವೈಂಕುಠ ಏಕಾದಶಿ ಪ್ರಯುಕ್ತ ನಗರದ ವೆಂಕಟೇಶ್ವರ ದೇವಾಲಯಗಳಲ್ಲಿ ನಾಳೆವಿಶೇಷ ಪೂಜೆ ಹಾಗೂ ಉತ್ಸವಗಳು ನಡೆಯಲಿವೆ.</p>.<p>ಈ ಪ್ರಯುಕ್ತ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ ಮಾಡಲಾಗುತ್ತದೆ.ವೈಕುಂಠ ದ್ವಾರಗಳನ್ನು ನಿರ್ಮಿಸಿ, ದೇವರ ಮೂರ್ತಿಗಳಿಗೆ ಹೂವು ಹಾಗೂ ಆಭರಣಗಳಿಂದ ಸಿಂಗರಿಸಿ,ಲಡ್ಡು, ಪಾಯಸವನ್ನು ಪ್ರಸಾದ ರೂಪದಲ್ಲಿ ವಿತರಿಸಲಾಗುತ್ತದೆ.</p>.<p>ಇಸ್ಕಾನ್ ದೇವಸ್ಥಾನ,ಶ್ರೀನಿವಾಸನಗರದ ಲಕ್ಷ್ಮೀ ವೆಂಕಟೇಶ್ವರ ದೇವಾಲಯ,ಮಹಾಲಕ್ಷ್ಮೀಪುರದ ಶ್ರೀನಿವಾಸ ದೇವಸ್ಥಾನ,ಕೋಟೆ ವೆಂಕಟೇಶ್ವರಸ್ವಾಮಿ, ಜೆ.ಪಿ.ನಗರ ತಿರುಮಲಗಿರಿ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ, ಮಾಗಡಿ ರಸ್ತೆಯ ಎಂ.ಜಿ. ರೈಲ್ವೆ ಕಾಲೊನಿಯ ವೆಂಕಟೇಶ್ವರ ಸ್ವಾಮಿ ದೇವಸ್ಥಾನ, ಕೆಂಗೇರಿಯ ಬೆಟ್ಟನಪಾಳ್ಯದ ಸ್ತಂಭದ ಲಕ್ಷ್ಮೀ ರಂಗನಾಥಸ್ವಾಮಿ ದೇವಾಲಯಗಳಲ್ಲಿವಿಶೇಷ ಪೂಜೆ ಮಾಡಲಾಗುವುದು.</p>.<p>ದೇವರಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ವೈಕುಂಠ ದ್ವಾರದ ಪೂಜೆ, ಅಷ್ಟೋತ್ತರ ಶತನಾಮಾವಳಿ ಸೇವೆ, ಮಂತ್ರ ಪುಷ್ಪ ಸೇವೆ, ಅಷ್ಟಾವಧಾನ ಸೇವೆಗಳನ್ನು ಮಾಡಲಾಗುತ್ತದೆ.ವೆಂಕಟರಮಣನ ಕುರಿತು ಕೀರ್ತನೆ, ದೇವರನಾಮ ಗಾಯನ ಕಾರ್ಯಕ್ರಮಗಳು ನಡೆಯಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವೈಂಕುಠ ಏಕಾದಶಿ ಪ್ರಯುಕ್ತ ನಗರದ ವೆಂಕಟೇಶ್ವರ ದೇವಾಲಯಗಳಲ್ಲಿ ನಾಳೆವಿಶೇಷ ಪೂಜೆ ಹಾಗೂ ಉತ್ಸವಗಳು ನಡೆಯಲಿವೆ.</p>.<p>ಈ ಪ್ರಯುಕ್ತ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ ಮಾಡಲಾಗುತ್ತದೆ.ವೈಕುಂಠ ದ್ವಾರಗಳನ್ನು ನಿರ್ಮಿಸಿ, ದೇವರ ಮೂರ್ತಿಗಳಿಗೆ ಹೂವು ಹಾಗೂ ಆಭರಣಗಳಿಂದ ಸಿಂಗರಿಸಿ,ಲಡ್ಡು, ಪಾಯಸವನ್ನು ಪ್ರಸಾದ ರೂಪದಲ್ಲಿ ವಿತರಿಸಲಾಗುತ್ತದೆ.</p>.<p>ಇಸ್ಕಾನ್ ದೇವಸ್ಥಾನ,ಶ್ರೀನಿವಾಸನಗರದ ಲಕ್ಷ್ಮೀ ವೆಂಕಟೇಶ್ವರ ದೇವಾಲಯ,ಮಹಾಲಕ್ಷ್ಮೀಪುರದ ಶ್ರೀನಿವಾಸ ದೇವಸ್ಥಾನ,ಕೋಟೆ ವೆಂಕಟೇಶ್ವರಸ್ವಾಮಿ, ಜೆ.ಪಿ.ನಗರ ತಿರುಮಲಗಿರಿ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ, ಮಾಗಡಿ ರಸ್ತೆಯ ಎಂ.ಜಿ. ರೈಲ್ವೆ ಕಾಲೊನಿಯ ವೆಂಕಟೇಶ್ವರ ಸ್ವಾಮಿ ದೇವಸ್ಥಾನ, ಕೆಂಗೇರಿಯ ಬೆಟ್ಟನಪಾಳ್ಯದ ಸ್ತಂಭದ ಲಕ್ಷ್ಮೀ ರಂಗನಾಥಸ್ವಾಮಿ ದೇವಾಲಯಗಳಲ್ಲಿವಿಶೇಷ ಪೂಜೆ ಮಾಡಲಾಗುವುದು.</p>.<p>ದೇವರಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ವೈಕುಂಠ ದ್ವಾರದ ಪೂಜೆ, ಅಷ್ಟೋತ್ತರ ಶತನಾಮಾವಳಿ ಸೇವೆ, ಮಂತ್ರ ಪುಷ್ಪ ಸೇವೆ, ಅಷ್ಟಾವಧಾನ ಸೇವೆಗಳನ್ನು ಮಾಡಲಾಗುತ್ತದೆ.ವೆಂಕಟರಮಣನ ಕುರಿತು ಕೀರ್ತನೆ, ದೇವರನಾಮ ಗಾಯನ ಕಾರ್ಯಕ್ರಮಗಳು ನಡೆಯಲಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>