<p><strong>ಬೆಂಗಳೂರು</strong>: ನಗರದ ವಿವಿಧ ದೇವಸ್ಥಾನಗಳಲ್ಲಿ ವೈಕುಂಠ ಏಕಾದಶಿಯ ಅಂಗವಾಗಿ ಶುಕ್ರವಾರ ಮುಂಜಾನೆ 3.30ರಿಂದಲೇ ವಿಶೇಷ ಪೂಜೆ, ಧಾರ್ಮಿಕ ವಿಧಿಗಳು ನಡೆದವು.</p>.<p>ಹಲವು ದೇವಸ್ಥಾನಗಳಲ್ಲಿ ವೈಕುಂಠದ ದ್ವಾರಗಳನ್ನು ನಿರ್ಮಿಸಿ, ಭಕ್ತರ ದರ್ಶನಕ್ಕೆ ಅನುವು ಕಲ್ಪಿಸಲಾಗಿತ್ತು. ಮುಂಜಾನೆಯ ಚಳಿಯಲ್ಲಿಯೂ ಭಕ್ತರು ಸಾಲಿನಲ್ಲಿ ನಿಂತು ದರ್ಶನ ಪಡೆದರು.</p>.<p>ನಗರದಲ್ಲಿರುವ ಕೃಷ್ಣ ಹಾಗೂ ವೆಂಕಟೇಶ್ವರ ದೇವಸ್ಥಾನಗಳಲ್ಲಿ ಅತ್ಯಂತ ವಿಶೇಷ ಸಂಭ್ರಮ, ಸಡಗರವಿತ್ತು. ಹಲವು ರೀತಿಯ ಪುಷ್ಪಗಳಿಂದ ಅಲಂಕಾರ ಹಾಗೂ ವಿಶೇಷ ಪೂಜೆ ನಡೆಸಲಾಯಿತು. </p>.<p>ಇಸ್ಕಾನ್ ದೇವಾಲಯದಲ್ಲಿ ಮುಂಜಾನೆ 3.45ರಿಂದ ವಿಶೇಷ ಪೂಜೆ, ಅಭಿಷೇಕ ನಡೆಯಿತು. ಮಲ್ಲೇಶ್ವರದ ವೈಯಾಲಿಕಾವಲ್ನಲ್ಲಿರುವ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ನ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನೆರವೇರಿದವು.</p>.<p>ಜೆ.ಪಿ.ನಗರದಲ್ಲಿರುವ ವೆಂಕಟೇಶ್ವರ ದೇವಾಲಯ, ಆರ್.ಟಿ.ನಗರದ ಮಠದ ಹಳ್ಳಿಯ ಲಕ್ಷ್ಮಿವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ರಾಜಾಜಿನಗರದ 'ಶ್ರೀ ಕೈಲಾಸ ವೈಕುಂಠ ಮಹಾಕ್ಷೇತ್ರ'ದಲ್ಲಿ ಭಕ್ತಾದಿಗಳು ದೇವರ ದರ್ಶನಕ್ಕೆ ಕೆಲವು ಗಂಟೆ ಸಾಲುಗಟ್ಟಿ ನಿಂತಿದ್ದರು.</p>.<p>ಕೆಲವು ದೇವಸ್ಥಾನಗಳಲ್ಲಿ ರಾಜಕಾರಣಿಗಳು ಹಾಗೂ ಸ್ಥಳೀಯ ಮುಖಂಡರ ಆಗಮನದಿಂದ ಸಾಮಾನ್ಯ ಭಕ್ತರು ದರ್ಶನಕ್ಕಾಗಿ ಕಾಯುವ ಪರಿಸ್ಥಿತಿ ಉಂಟಾಗಿತ್ತು. ವಿವಿಧ ದೇವಸ್ಥಾನಗಳಲ್ಲಿ ನಿರ್ಮಿಸಲಾಗಿದ್ದ ವೈಕುಂಠದ ದ್ವಾರ ಹಾದುಸಾಗುವ ಸಂಭ್ರಮದಲ್ಲಿ ‘ಗೋವಿಂದಾ, ಗೋವಿಂದಾ’ ಎಂದು ಸ್ಮರಿಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ವಿವಿಧ ದೇವಸ್ಥಾನಗಳಲ್ಲಿ ವೈಕುಂಠ ಏಕಾದಶಿಯ ಅಂಗವಾಗಿ ಶುಕ್ರವಾರ ಮುಂಜಾನೆ 3.30ರಿಂದಲೇ ವಿಶೇಷ ಪೂಜೆ, ಧಾರ್ಮಿಕ ವಿಧಿಗಳು ನಡೆದವು.</p>.<p>ಹಲವು ದೇವಸ್ಥಾನಗಳಲ್ಲಿ ವೈಕುಂಠದ ದ್ವಾರಗಳನ್ನು ನಿರ್ಮಿಸಿ, ಭಕ್ತರ ದರ್ಶನಕ್ಕೆ ಅನುವು ಕಲ್ಪಿಸಲಾಗಿತ್ತು. ಮುಂಜಾನೆಯ ಚಳಿಯಲ್ಲಿಯೂ ಭಕ್ತರು ಸಾಲಿನಲ್ಲಿ ನಿಂತು ದರ್ಶನ ಪಡೆದರು.</p>.<p>ನಗರದಲ್ಲಿರುವ ಕೃಷ್ಣ ಹಾಗೂ ವೆಂಕಟೇಶ್ವರ ದೇವಸ್ಥಾನಗಳಲ್ಲಿ ಅತ್ಯಂತ ವಿಶೇಷ ಸಂಭ್ರಮ, ಸಡಗರವಿತ್ತು. ಹಲವು ರೀತಿಯ ಪುಷ್ಪಗಳಿಂದ ಅಲಂಕಾರ ಹಾಗೂ ವಿಶೇಷ ಪೂಜೆ ನಡೆಸಲಾಯಿತು. </p>.<p>ಇಸ್ಕಾನ್ ದೇವಾಲಯದಲ್ಲಿ ಮುಂಜಾನೆ 3.45ರಿಂದ ವಿಶೇಷ ಪೂಜೆ, ಅಭಿಷೇಕ ನಡೆಯಿತು. ಮಲ್ಲೇಶ್ವರದ ವೈಯಾಲಿಕಾವಲ್ನಲ್ಲಿರುವ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ನ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನೆರವೇರಿದವು.</p>.<p>ಜೆ.ಪಿ.ನಗರದಲ್ಲಿರುವ ವೆಂಕಟೇಶ್ವರ ದೇವಾಲಯ, ಆರ್.ಟಿ.ನಗರದ ಮಠದ ಹಳ್ಳಿಯ ಲಕ್ಷ್ಮಿವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ರಾಜಾಜಿನಗರದ 'ಶ್ರೀ ಕೈಲಾಸ ವೈಕುಂಠ ಮಹಾಕ್ಷೇತ್ರ'ದಲ್ಲಿ ಭಕ್ತಾದಿಗಳು ದೇವರ ದರ್ಶನಕ್ಕೆ ಕೆಲವು ಗಂಟೆ ಸಾಲುಗಟ್ಟಿ ನಿಂತಿದ್ದರು.</p>.<p>ಕೆಲವು ದೇವಸ್ಥಾನಗಳಲ್ಲಿ ರಾಜಕಾರಣಿಗಳು ಹಾಗೂ ಸ್ಥಳೀಯ ಮುಖಂಡರ ಆಗಮನದಿಂದ ಸಾಮಾನ್ಯ ಭಕ್ತರು ದರ್ಶನಕ್ಕಾಗಿ ಕಾಯುವ ಪರಿಸ್ಥಿತಿ ಉಂಟಾಗಿತ್ತು. ವಿವಿಧ ದೇವಸ್ಥಾನಗಳಲ್ಲಿ ನಿರ್ಮಿಸಲಾಗಿದ್ದ ವೈಕುಂಠದ ದ್ವಾರ ಹಾದುಸಾಗುವ ಸಂಭ್ರಮದಲ್ಲಿ ‘ಗೋವಿಂದಾ, ಗೋವಿಂದಾ’ ಎಂದು ಸ್ಮರಿಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>