‘ಬಂಧನ ಭೀತಿ: ನಿರೀಕ್ಷಣಾ ಜಾಮೀನಿಗೆ ಅರ್ಜಿ’
‘ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿಗಳಾಗಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಸಿಇಒ ಮಣಿಮೇಖಲೈ ನಿತೇಶ್ ರಂಜನ್ ರಾಮಸುಬ್ರಹ್ಮಣ್ಯಂ ಸಂಜಯ್ ರುದ್ರ ಪಂಕಜ್ ದ್ವಿವೇದಿ ಹಾಗೂ ಬ್ಯಾಂಕ್ನ ಮುಖ್ಯ ವ್ಯವಸ್ಥಾಪಕಿ ಸುಚಿಸ್ಮಿತಾ ರಾವಲ್ ಅವರಿಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಗೈರಾಗಿರುವ ಹಲವರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ’ ಎಂದು ಮೂಲಗಳು ಹೇಳಿವೆ. ‘ಬ್ಯಾಂಕ್ ಅಧಿಕಾರಿಗಳ ಮಧ್ಯಸ್ಥಿಕೆಯಲ್ಲಿಯೇ ಹಣ ಅಕ್ರಮವಾಗಿ ವರ್ಗಾವಣೆ ಆಗಿದೆ. ಹೀಗಾಗಿ ಆರೋಪಿಗಳು ಬಂಧನ ಭೀತಿಯಲ್ಲಿದ್ದಾರೆ’ ಎಂದು ಮೂಲಗಳು ತಿಳಿಸಿವೆ.