ಈ ವೇಳೆ ಮಾತನಾಡಿದ ಕಾಂಗ್ರೆಸ್ ಮುಖಂಡ ಎನ್.ಕೆ. ಮಹೇಶ್ ಕುಮಾರ್, ‘ಸರ್ಕಾರ ಮೂರು ವರ್ಷಗಳ ಹಿಂದೆಯೇ ಪರಿಶಿಷ್ಟ ಜಾತಿ-ವರ್ಗಗಳಿಗೆ ಮೀಸಲಾತಿ ಹೆಚ್ಚಿಸುವುದಾಗಿ ಮಾತು ನೀಡಿದ್ದರೂ ಇದುವರೆಗೂ ಈಡೇರಿರಲಿಲ್ಲ. ಈ ವಿಚಾರವಾಗಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಶ್ರೀಗಳು 241 ದಿನಗಳ ಕಾಲ ಸತ್ಯಾಗ್ರಹ ನಡೆಸಿ, ಸರ್ಕಾರದ ಗಮನ ಸೆಳೆದಿದ್ದರು. ಸರ್ಕಾರ ಈಗ ಮೀಸಲಾತಿ ಹೆಚ್ಚಿಸಿದ್ದು, ಇದಕ್ಕಾಗಿ ಸ್ವಾಮೀಜಿ ಮತ್ತು ಸರ್ಕಾರಕ್ಕೆ ಸಮುದಾಯದ ಪರವಾಗಿ
ಧನ್ಯವಾದಗಳನ್ನು ಅರ್ಪಿಸಲಾಗುತ್ತಿದೆ’ ಎಂದು ತಿಳಿಸಿದರು.