ವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನ ಮಠ ನಗರದಲ್ಲಿ ಹಮ್ಮಿಕೊಂಡ ವೇದ ಸಂಸ್ಕೃತ ಪಾಠಶಾಲೆ ಕಟ್ಟಡದ ಉದ್ಘಾಟನೆ, ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಬ್ರಹ್ಮರಥೋತ್ಸವ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. ‘ಈ ಸಮಾಜಕ್ಕೆ ದೊಡ್ಡ ಮಟ್ಟದ ಸೇವೆ ಸಲ್ಲಿಸುತ್ತಿರುವ ಮಠಗಳು ಯಾರ ಕಣ್ಣಿಗೂ ಅಷ್ಟಾಗಿ ಬೀಳುವುದಿಲ್ಲ. ಅನಾಥ ಮಕ್ಕಳ ಅಭಿವೃದ್ಧಿಯ ಜೊತೆಗೆ ಸಮಾಜವನ್ನು ಮುನ್ನಡೆಸುವಲ್ಲಿ ಮಠಗಳ ಪಾತ್ರ ಬಹುಮುಖ್ಯವಾದದ್ದು.ಸಮಾಜಕ್ಕೆ ದಿಕ್ಸೂಚಿಯಾಗಿ ಮಠಗಳು ಇರಬೇಕು. ಆ ಹಾದಿಯಲ್ಲಿ ವನಕಲ್ಲು ಮಠ ಸಾಗುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.