<p><strong>ಬೆಂಗಳೂರು</strong>: ಬೆಳಗಾವಿ ಭಾಗದ ಜನರ ಬಹುದಿನದ ಬೇಡಿಕೆಯಾಗಿದ್ದ ʼವಂದೇ ಭಾರತ್ʼ ರೈಲು ಇಂದು ಆರಂಭವಾಗಿದೆ.</p><p>ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೆಎಸ್ಆರ್ ನಿಲ್ದಾಣದಿಂದ ಪ್ರಧಾನಿ ಮೋದಿ ಅವರು ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಇಂದು ಬೆಳಿಗ್ಗೆ 11.30 ಕ್ಕೆ ಹಸಿರು ನಿಶಾನೆ ತೋರಿದರು.</p><p>ಈ ವೇಳೆ ರೈಲನ್ನು ಅದ್ಧೂರಿಯಾಗಿ ಸಿಂಗರಿಸಲಾಗಿತ್ತು. ರೈಲಿನ ಒಳ ಹೋಗಿ ಪ್ರಯಾಣಿಕರು, ಮಕ್ಕಳೊಂದಿಗೆ ಮೋದಿ ಕೆಲಕಾಲ ಸಂವಾದ ಮಾಡಿದರು.</p><p>ಪ್ರಧಾನಿ ನರೇಂದ್ರ ಮೋದಿ ಅವರು ಇದೇ ವೇಳೆ ಇವತ್ತಿನಿಂದ ಆರಂಭವಾದ ನಾಗ್ಪುರದ ಅಜ್ನಿ-ಪುಣೆ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೊ ದೇವಿ ಕಾತ್ರಾ ಮಧ್ಯೆ ನೂತನ ವಂದೇ ಭಾರತ್ ರೈಲುಗಳಿಗೂ ಬೆಂಗಳೂರಿನಿಂದಲೇ ಹಸಿರು ನಿಶಾನೆ ತೋರಿದರು.</p><p>ಬೆಳಿಗ್ಗೆ 11.15 ಕ್ಕೆ ವಂದೇ ಭಾರತ ರೈಲು ಬೆಂಗಳೂರಿನಿಂದ–ಬೆಳಗಾವಿಗೆ ಉದ್ಘಾಟನಾರ್ಥ ಸಂಚಾರ ಆರಂಭಿಸಲಿದ್ದು ಆಗಸ್ಟ್ 11ರಿಂದ ಅಂದರೆ ನಾಳೆಯಿಂದ ನಿಯಮಿತ ಸಂಚಾರ ಆರಂಭಿಸಲಿದೆ. ಟ್ರೈನ್ ನಂಬರ್ 26751/ 26752</p>.<p><strong>ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲು ಸಂಚಾರದ ವೇಳಾಪಟ್ಟಿ ಹೀಗಿದೆ..</strong></p><p>ಬುಧವಾರ ಹೊರತುಪಡಿಸಿ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲು ಬೆಂಗಳೂರಿನಿಂದ 11.15ಕ್ಕೆ ಹೊರಟು, ಯಶವಂತಪುರ, ತುಮಕೂರು, ದಾವಣಗೆರೆ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ಧಾರವಾಡ ನಿಲ್ದಾಣಗಳಲ್ಲಿ ನಿಲುಗಡೆಯಾಗಿ, ರಾತ್ರಿ 8 ಗಂಟೆಗೆ ಬೆಳಗಾವಿ ತಲುಪಲಿದೆ.</p><p>26751 ಸಂಖ್ಯೆಯ ರೈಲು ಬೆಳಗಾವಿಯಿಂದ ಬೆಳಿಗ್ಗೆ 5.20ಕ್ಕೆ ಹೊರಟು, ಮಧ್ಯಾಹ್ನ 1.50ಕ್ಕೆ ಬೆಂಗಳೂರು ತಲುಪಲಿದೆ. ಧಾರವಾಡ (ಬೆಳಿಗ್ಗೆ 7.08/7:10), ಎಸ್ಎಸ್ಎಸ್ ಹುಬ್ಬಳ್ಳಿ (7.30/7.35), ಎಸ್ಎಂಎಂ ಹಾವೇರಿ (8.35/8.37), ದಾವಣಗೆರೆ (9.25/9.27), ತುಮಕೂರು (ಮಧ್ಯಾಹ್ನ 12.15/12.17) ಯಶವಂತಪುರ (1.03/1.05) ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.</p><p>ಬೆಂಗಳೂರಿನ ಕೆಎಸ್ಆರ್ ನಿಲ್ದಾಣದಿಂದ ಮಧ್ಯಾಹ್ನ 2.20ಕ್ಕೆ ಹೊರಡುವ ರೈಲು (26752), ರಾತ್ರಿ 10.40ಕ್ಕೆ ಬೆಳಗಾವಿ ತಲುಪಲಿದೆ. ಯಶವಂತಪುರ (ಮಧ್ಯಾಹ್ನ 2.28/2.30), ತುಮಕೂರು (3.03/3.05), ದಾವಣಗೆರೆ (5.48/5.50), ಎಸ್ಎಂಎಂ ಹಾವೇರಿ (6.48/6.50), ಎಸ್ಎಸ್ಎಸ್ ಹುಬ್ಬಳ್ಳಿ (ರಾತ್ರಿ 8/8.05) ಮತ್ತು ಧಾರವಾಡ (8.25/8.27) ನಿಲ್ದಾಣಗಳಲ್ಲಿ ನಿಲುಗಡೆ ಆಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.</p>.ನಮ್ಮ ಮೆಟ್ರೊ ಹಳದಿ ಮಾರ್ಗ ಉದ್ಘಾಟನೆಗೆ ಕ್ಷಣಗಣನೆ: ಪಿಎಂ ಮೋದಿ ಹೇಳಿದ್ದೇನು?.ನಮ್ಮ ಮೆಟ್ರೊ ಹಳದಿ ಮಾರ್ಗ: ಪ್ರಧಾನಿಗೆ ಆಹ್ವಾನ ನೀಡಿದ್ದು ನಾವೇ- ಡಿಕೆಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಳಗಾವಿ ಭಾಗದ ಜನರ ಬಹುದಿನದ ಬೇಡಿಕೆಯಾಗಿದ್ದ ʼವಂದೇ ಭಾರತ್ʼ ರೈಲು ಇಂದು ಆರಂಭವಾಗಿದೆ.</p><p>ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೆಎಸ್ಆರ್ ನಿಲ್ದಾಣದಿಂದ ಪ್ರಧಾನಿ ಮೋದಿ ಅವರು ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಇಂದು ಬೆಳಿಗ್ಗೆ 11.30 ಕ್ಕೆ ಹಸಿರು ನಿಶಾನೆ ತೋರಿದರು.</p><p>ಈ ವೇಳೆ ರೈಲನ್ನು ಅದ್ಧೂರಿಯಾಗಿ ಸಿಂಗರಿಸಲಾಗಿತ್ತು. ರೈಲಿನ ಒಳ ಹೋಗಿ ಪ್ರಯಾಣಿಕರು, ಮಕ್ಕಳೊಂದಿಗೆ ಮೋದಿ ಕೆಲಕಾಲ ಸಂವಾದ ಮಾಡಿದರು.</p><p>ಪ್ರಧಾನಿ ನರೇಂದ್ರ ಮೋದಿ ಅವರು ಇದೇ ವೇಳೆ ಇವತ್ತಿನಿಂದ ಆರಂಭವಾದ ನಾಗ್ಪುರದ ಅಜ್ನಿ-ಪುಣೆ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೊ ದೇವಿ ಕಾತ್ರಾ ಮಧ್ಯೆ ನೂತನ ವಂದೇ ಭಾರತ್ ರೈಲುಗಳಿಗೂ ಬೆಂಗಳೂರಿನಿಂದಲೇ ಹಸಿರು ನಿಶಾನೆ ತೋರಿದರು.</p><p>ಬೆಳಿಗ್ಗೆ 11.15 ಕ್ಕೆ ವಂದೇ ಭಾರತ ರೈಲು ಬೆಂಗಳೂರಿನಿಂದ–ಬೆಳಗಾವಿಗೆ ಉದ್ಘಾಟನಾರ್ಥ ಸಂಚಾರ ಆರಂಭಿಸಲಿದ್ದು ಆಗಸ್ಟ್ 11ರಿಂದ ಅಂದರೆ ನಾಳೆಯಿಂದ ನಿಯಮಿತ ಸಂಚಾರ ಆರಂಭಿಸಲಿದೆ. ಟ್ರೈನ್ ನಂಬರ್ 26751/ 26752</p>.<p><strong>ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲು ಸಂಚಾರದ ವೇಳಾಪಟ್ಟಿ ಹೀಗಿದೆ..</strong></p><p>ಬುಧವಾರ ಹೊರತುಪಡಿಸಿ ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲು ಬೆಂಗಳೂರಿನಿಂದ 11.15ಕ್ಕೆ ಹೊರಟು, ಯಶವಂತಪುರ, ತುಮಕೂರು, ದಾವಣಗೆರೆ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ಧಾರವಾಡ ನಿಲ್ದಾಣಗಳಲ್ಲಿ ನಿಲುಗಡೆಯಾಗಿ, ರಾತ್ರಿ 8 ಗಂಟೆಗೆ ಬೆಳಗಾವಿ ತಲುಪಲಿದೆ.</p><p>26751 ಸಂಖ್ಯೆಯ ರೈಲು ಬೆಳಗಾವಿಯಿಂದ ಬೆಳಿಗ್ಗೆ 5.20ಕ್ಕೆ ಹೊರಟು, ಮಧ್ಯಾಹ್ನ 1.50ಕ್ಕೆ ಬೆಂಗಳೂರು ತಲುಪಲಿದೆ. ಧಾರವಾಡ (ಬೆಳಿಗ್ಗೆ 7.08/7:10), ಎಸ್ಎಸ್ಎಸ್ ಹುಬ್ಬಳ್ಳಿ (7.30/7.35), ಎಸ್ಎಂಎಂ ಹಾವೇರಿ (8.35/8.37), ದಾವಣಗೆರೆ (9.25/9.27), ತುಮಕೂರು (ಮಧ್ಯಾಹ್ನ 12.15/12.17) ಯಶವಂತಪುರ (1.03/1.05) ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.</p><p>ಬೆಂಗಳೂರಿನ ಕೆಎಸ್ಆರ್ ನಿಲ್ದಾಣದಿಂದ ಮಧ್ಯಾಹ್ನ 2.20ಕ್ಕೆ ಹೊರಡುವ ರೈಲು (26752), ರಾತ್ರಿ 10.40ಕ್ಕೆ ಬೆಳಗಾವಿ ತಲುಪಲಿದೆ. ಯಶವಂತಪುರ (ಮಧ್ಯಾಹ್ನ 2.28/2.30), ತುಮಕೂರು (3.03/3.05), ದಾವಣಗೆರೆ (5.48/5.50), ಎಸ್ಎಂಎಂ ಹಾವೇರಿ (6.48/6.50), ಎಸ್ಎಸ್ಎಸ್ ಹುಬ್ಬಳ್ಳಿ (ರಾತ್ರಿ 8/8.05) ಮತ್ತು ಧಾರವಾಡ (8.25/8.27) ನಿಲ್ದಾಣಗಳಲ್ಲಿ ನಿಲುಗಡೆ ಆಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.</p>.ನಮ್ಮ ಮೆಟ್ರೊ ಹಳದಿ ಮಾರ್ಗ ಉದ್ಘಾಟನೆಗೆ ಕ್ಷಣಗಣನೆ: ಪಿಎಂ ಮೋದಿ ಹೇಳಿದ್ದೇನು?.ನಮ್ಮ ಮೆಟ್ರೊ ಹಳದಿ ಮಾರ್ಗ: ಪ್ರಧಾನಿಗೆ ಆಹ್ವಾನ ನೀಡಿದ್ದು ನಾವೇ- ಡಿಕೆಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>