<p><strong>ಬೆಂಗಳೂರು:</strong> ‘ರಾಷ್ಟ್ರಗೀತೆ ವಂದೇ ಮಾತರಂ ಅನ್ನು ಎಲ್ಲರೂ ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.</p><p>ವಂದೇ ಮಾತರಂ ಗೀತೆ ರಚನೆಯ 150ನೇ ವರ್ಷಾಚರಣೆಯ ಅಂಗವಾಗಿ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ಗಾಯನ ಕಾರ್ಯಕ್ರಮದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು. </p>.VandeMatram150 | ವಂದೇ ಮಾತರಂ ಗೀತೆ ಭಾರತೀಯರ ಆತ್ಮದ ಧ್ವನಿ: ಅಮಿತ್ ಶಾ. <p>‘ರಾಷ್ಟ್ರಗೀತೆ ವಂದೇ ಮಾತರಂ, ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಚ್ಚಿತ್ತು. ದೇಶದ ಪ್ರತಿಯೊಬ್ಬ ಸ್ವಾಭಿಮಾನಿ ದೇಶಭಕ್ತರೂ ವಂದೇ ಮಾತರಂ ಅನ್ನು ಪ್ರೇರಣೆಯಾಗಿ ತೆಗೆದುಕೊಳ್ಳಬೇಕು. 2047ರ ವೇಳೆಗೆ ಶಕ್ತಿಯುತ ಭಾರತವನ್ನು ನಿರ್ಮಿಸಲು ಈ ರಾಷ್ಟ್ರಗೀತೆ ವಂದೇ ಮಾತರಂ ಅನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು’ ಎಂದರು.</p><p>ಇದಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕ ಸಿ.ಎನ್.ಅಶ್ವತ್ಥನಾರಾಯಣ್ ಅವರು ವಂದೇ ಮಾತರಂ ಸಾಮೂಹಿಕ ಗಾಯನದಲ್ಲಿ ದನಿಗೂಡಿಸಿದರು.</p>.VandeMataram150: ನಾಣ್ಯ, ಅಂಚೆ ಚೀಟಿ ಬಿಡುಗಡೆ ಮಾಡಿದ PM ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಷ್ಟ್ರಗೀತೆ ವಂದೇ ಮಾತರಂ ಅನ್ನು ಎಲ್ಲರೂ ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.</p><p>ವಂದೇ ಮಾತರಂ ಗೀತೆ ರಚನೆಯ 150ನೇ ವರ್ಷಾಚರಣೆಯ ಅಂಗವಾಗಿ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ಗಾಯನ ಕಾರ್ಯಕ್ರಮದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು. </p>.VandeMatram150 | ವಂದೇ ಮಾತರಂ ಗೀತೆ ಭಾರತೀಯರ ಆತ್ಮದ ಧ್ವನಿ: ಅಮಿತ್ ಶಾ. <p>‘ರಾಷ್ಟ್ರಗೀತೆ ವಂದೇ ಮಾತರಂ, ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಚ್ಚಿತ್ತು. ದೇಶದ ಪ್ರತಿಯೊಬ್ಬ ಸ್ವಾಭಿಮಾನಿ ದೇಶಭಕ್ತರೂ ವಂದೇ ಮಾತರಂ ಅನ್ನು ಪ್ರೇರಣೆಯಾಗಿ ತೆಗೆದುಕೊಳ್ಳಬೇಕು. 2047ರ ವೇಳೆಗೆ ಶಕ್ತಿಯುತ ಭಾರತವನ್ನು ನಿರ್ಮಿಸಲು ಈ ರಾಷ್ಟ್ರಗೀತೆ ವಂದೇ ಮಾತರಂ ಅನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು’ ಎಂದರು.</p><p>ಇದಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕ ಸಿ.ಎನ್.ಅಶ್ವತ್ಥನಾರಾಯಣ್ ಅವರು ವಂದೇ ಮಾತರಂ ಸಾಮೂಹಿಕ ಗಾಯನದಲ್ಲಿ ದನಿಗೂಡಿಸಿದರು.</p>.VandeMataram150: ನಾಣ್ಯ, ಅಂಚೆ ಚೀಟಿ ಬಿಡುಗಡೆ ಮಾಡಿದ PM ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>