<p><strong>ಬೆಂಗಳೂರು:</strong> ನಗರದ ವಾಣಿ ವಿಲಾಸ ಆಸ್ಪತ್ರೆಯಲ್ಲಿದ್ದ ಎರಡು ದಿನದ ಮಗುವನ್ನು ಅಪರಿಚಿತರು ಅಪಹರಣ ಮಾಡಿದ್ದು, ಈ ಸಂಬಂಧ ವಿ.ವಿ. ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ನ. 11ರಂದು ಮಗು ಅಪಹರಣವಾಗಿದ್ದು, ಈ ಬಗ್ಗೆ ತಂದೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದ್ದು, ಕೆಲ ಸುಳಿವುಗಳು ಸಿಕ್ಕಿವೆ. ಅದನ್ನು ಆಧರಿಸಿ ಮಗುವನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>‘ವಿಜಿನಾಪುರದ ನಿವಾಸಿಯಾದ 27 ವರ್ಷದ ಮಹಿಳೆ, ಹೆರಿಗೆಗೆಂದು ಇತ್ತೀಚೆಗೆ ವಾಣಿ ವಿಲಾಸ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಹೆಣ್ಣು ಮಗು ಹುಟ್ಟಿತ್ತು. ಎರಡು ದಿನಗಳ ಮಗುವಿನ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು.’</p>.<p>‘ಘಟಕಕ್ಕೆ ನುಗ್ಗಿದ್ದ ಅಪರಿಚಿತರು ಮಗು ಅಪಹರಿಸಿಕೊಂಡು ಹೋಗಿದ್ದಾರೆ. ಆತಂಕಗೊಂಡ ಪೋಷಕರು, ಆಸ್ಪತ್ರೆಯವರನ್ನು ವಿಚಾರಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನೊಂದ ತಂದೆ ಠಾಣೆಗೆ ಬಂದು ದೂರು ನೀಡಿದ್ದಾರೆ’ ಎಂದೂ ಪೊಲೀಸರು ಹೇಳಿದರು.</p>.<p>‘ಸಿಬ್ಬಂದಿ ಘಟಕದಲ್ಲಿ ಇಲ್ಲದಿರುವಾಗ ಮಗು ಅಪಹರಣ ಆಗಿರುವುದಾಗಿ ಆಸ್ಪತ್ರೆಯವರು ಹೇಳಿದ್ದಾರೆ. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ’ ಎಂದೂ ತಿಳಿಸಿದರು.</p>.<p class="Subhead">ಆಸ್ಪತ್ರೆಯಿಂದ ಹೋಗುವಂತೆ ಒತ್ತಾಯ: ಮಗು ಅಪಹರಣ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಇದರ ನಡುವೆಯೇ ಆಸ್ಪತ್ರೆಯಿಂದ ಹೋಗುವಂತೆ ಮಗುವಿನ ಪೋಷಕರನ್ನು ಒತ್ತಾಯಿಸಲಾಗುತ್ತಿದೆ.</p>.<p>‘ತೀವ್ರ ನಿಗಾ ಘಟಕದಲ್ಲೇ ಮಗು ಕಳವಾಗಿದ್ದು, ಇದಕ್ಕೆ ಆಸ್ಪತ್ರೆಯವರ ನಿರ್ಲಕ್ಷ್ಯ ಕಾರಣ. ಮಗು ಸಿಗುವವರೆಗೂ ಆಸ್ಪತ್ರೆಯಿಂದ ಹೋಗುವುದಿಲ್ಲ. ನಮಗೆ ನಮ್ಮ ಮಗು ಬೇಕು. ಆದರೆ, ಆಸ್ಪತ್ರೆಯವರು ಆಸ್ಪತ್ರೆಯಿಂದ ಹೊರಡುವಂತೆ ಹೇಳುತ್ತಿದ್ದಾರೆ’ ಎಂದು ಮಗುವಿನ ಸಂಬಂಧಿಕರು ದೂರಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಲು ಆಸ್ಪತ್ರೆಯವರು ಸಂಪರ್ಕಕ್ಕೆ ಸಿಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ವಾಣಿ ವಿಲಾಸ ಆಸ್ಪತ್ರೆಯಲ್ಲಿದ್ದ ಎರಡು ದಿನದ ಮಗುವನ್ನು ಅಪರಿಚಿತರು ಅಪಹರಣ ಮಾಡಿದ್ದು, ಈ ಸಂಬಂಧ ವಿ.ವಿ. ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ನ. 11ರಂದು ಮಗು ಅಪಹರಣವಾಗಿದ್ದು, ಈ ಬಗ್ಗೆ ತಂದೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದ್ದು, ಕೆಲ ಸುಳಿವುಗಳು ಸಿಕ್ಕಿವೆ. ಅದನ್ನು ಆಧರಿಸಿ ಮಗುವನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.</p>.<p>‘ವಿಜಿನಾಪುರದ ನಿವಾಸಿಯಾದ 27 ವರ್ಷದ ಮಹಿಳೆ, ಹೆರಿಗೆಗೆಂದು ಇತ್ತೀಚೆಗೆ ವಾಣಿ ವಿಲಾಸ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಹೆಣ್ಣು ಮಗು ಹುಟ್ಟಿತ್ತು. ಎರಡು ದಿನಗಳ ಮಗುವಿನ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು.’</p>.<p>‘ಘಟಕಕ್ಕೆ ನುಗ್ಗಿದ್ದ ಅಪರಿಚಿತರು ಮಗು ಅಪಹರಿಸಿಕೊಂಡು ಹೋಗಿದ್ದಾರೆ. ಆತಂಕಗೊಂಡ ಪೋಷಕರು, ಆಸ್ಪತ್ರೆಯವರನ್ನು ವಿಚಾರಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನೊಂದ ತಂದೆ ಠಾಣೆಗೆ ಬಂದು ದೂರು ನೀಡಿದ್ದಾರೆ’ ಎಂದೂ ಪೊಲೀಸರು ಹೇಳಿದರು.</p>.<p>‘ಸಿಬ್ಬಂದಿ ಘಟಕದಲ್ಲಿ ಇಲ್ಲದಿರುವಾಗ ಮಗು ಅಪಹರಣ ಆಗಿರುವುದಾಗಿ ಆಸ್ಪತ್ರೆಯವರು ಹೇಳಿದ್ದಾರೆ. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ’ ಎಂದೂ ತಿಳಿಸಿದರು.</p>.<p class="Subhead">ಆಸ್ಪತ್ರೆಯಿಂದ ಹೋಗುವಂತೆ ಒತ್ತಾಯ: ಮಗು ಅಪಹರಣ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಇದರ ನಡುವೆಯೇ ಆಸ್ಪತ್ರೆಯಿಂದ ಹೋಗುವಂತೆ ಮಗುವಿನ ಪೋಷಕರನ್ನು ಒತ್ತಾಯಿಸಲಾಗುತ್ತಿದೆ.</p>.<p>‘ತೀವ್ರ ನಿಗಾ ಘಟಕದಲ್ಲೇ ಮಗು ಕಳವಾಗಿದ್ದು, ಇದಕ್ಕೆ ಆಸ್ಪತ್ರೆಯವರ ನಿರ್ಲಕ್ಷ್ಯ ಕಾರಣ. ಮಗು ಸಿಗುವವರೆಗೂ ಆಸ್ಪತ್ರೆಯಿಂದ ಹೋಗುವುದಿಲ್ಲ. ನಮಗೆ ನಮ್ಮ ಮಗು ಬೇಕು. ಆದರೆ, ಆಸ್ಪತ್ರೆಯವರು ಆಸ್ಪತ್ರೆಯಿಂದ ಹೊರಡುವಂತೆ ಹೇಳುತ್ತಿದ್ದಾರೆ’ ಎಂದು ಮಗುವಿನ ಸಂಬಂಧಿಕರು ದೂರಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಲು ಆಸ್ಪತ್ರೆಯವರು ಸಂಪರ್ಕಕ್ಕೆ ಸಿಗಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>