ನಂತರ ಮಾತನಾಡಿದ ಅವರು, ‘ಈ ರಸ್ತೆಯು ಕೊಡಿಗೇಹಳ್ಳಿ ಮುಖ್ಯರಸ್ತೆಯಿಂದ ಮುನೇಶ್ವರ ಲೇಔಟ್, ಕಣ್ಣೂರಮ್ಮ ಬಡಾವಣೆ, ಭದ್ರಪ್ಪ ಬಡಾವಣೆ, ದೇವಿನಗರ ಸುತ್ತಮುತ್ತಲ ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಾಗಿದ್ದು, ಕಳೆದ ಬಾರಿ ಸುರಿದ ಭಾರಿ ಮಳೆಯಿಂದ ರಸ್ತೆಯು ಹಾಳಾಗಿತ್ತು. ಪರಿಶೀಲನೆ ನಡೆಸಿ, ನೀರು ನಿಲ್ಲುತ್ತಿದ್ದ ಸ್ಥಳಗಳನ್ನು ಗುರುತಿಸಿ, ಮತ್ತೆ ರಸ್ತೆಯನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇದರಿಂದ ಈ ಭಾಗದ ಹಲವು ಬಡಾವಣೆಗಳ ನಿವಾಸಿಗಳಿಗೆ ಅನುಕೂಲವಾಗಲಿದೆ’ ಎಂದು ತಿಳಿಸಿದರು.