<p><strong>ಕೆ.ಆರ್.ಪುರ:</strong> ಭೂಸ್ವಾಧೀನ ಪ್ರಕ್ರಿಯೆಯಲ್ಲಿ ತೊಡಕುಂಟಾಗಿ ನನೆಗುದಿಗೆ ಬಿದ್ದಿದ್ದ ವರ್ತೂರು ಕೋಡಿಯಿಂದ ವರ್ತೂರುವರೆಗಿನ ಎಲಿವೆಟೆಡ್ ಕಾರಿಡಾರ್ ಕಾಮಗಾರಿ ಪುನರ್ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್ಡಿಸಿಎಲ್) ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.</p>.<p>ಮಹದೇವಪುರ ಟಾಸ್ಕ್ ಫೋರ್ಸ್ ತಂಡ ಹಾಗೂ ಸ್ಥಳೀಯ ಮುಖಂಡರೊಂದಿಗೆ ಯೋಜನೆ ಸ್ಥಳ ಪರಿಶೀಲನೆ ನಡೆಸಲಾಗಿದೆ. ಜಮೀನು ಮಾಲೀಕರೊಂದಿಗಿನ ಸಂಧಾನ ಪ್ರಕ್ರಿಯೆ ಪೂರ್ಣಗೊಳಿಸಿ ಶೀಘ್ರ ಕಾಮಗಾರಿ ಆರಂಭಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.</p>.<p>ಮಹದೇವಪುರ ಟಾಸ್ಕ್ ಫೋರ್ಸ್ ತಂಡದ ಉಪಾಧ್ಯಕ್ಷ ಎಲ್.ರಾಜೇಶ್ ಮಾತನಾಡಿ, ‘ಮಾಜಿ ಸಚಿವ ಅರವಿಂದ ಲಿಂಬಾವಳಿ ಹಾಗೂ ಶಾಸಕಿ ಮಂಜುಳಾ ಲಿಂಬಾವಳಿ ಅವರು ಭೂಮಾಲೀಕರೊಂದಿಗೆ ನಿರಂತರ ಸಂಧಾನ ಪ್ರಕ್ರಿಯೆ ನಡೆಸಿ ಸರ್ಕಾರದಿಂದ ದೊರೆಯಬೇಕಾದ ಪರಿಹಾರವನ್ನು ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ’ ಎಂದರು.</p>.<p>‘ಈಗ ಜಮೀನು ಮಾಲೀಕರು ಜಾಗ ಬಿಟ್ಟು ಕೊಡಲು ಒಪ್ಪಿದ್ದರಿಂದ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿ ಅತಿಶೀಘ್ರದಲ್ಲಿ ಎಲಿವೆಟೆಡ್ ಕಾರಿಡಾರ್ ರಸ್ತೆ ಮತ್ತು ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>ಕೆಆರ್ಡಿಸಿಎಲ್ ವ್ಯವಸ್ಥಾಪಕ ನಿರ್ದೇಶಕಿ ಎನ್.ಸುಶೀಲಮ್ಮ, ಮುಖ್ಯ ಎಂಜಿನಿಯರ್ ವಸಂತ್ ನಾಯಕ್, ಭೂ ಸ್ವಾಧೀನ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು, ಮಹದೇವಪುರ ಟಾಸ್ಕ್ ಫೋರ್ಸ್ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಭೂಸ್ವಾಧೀನ ಪ್ರಕ್ರಿಯೆಯಲ್ಲಿ ತೊಡಕುಂಟಾಗಿ ನನೆಗುದಿಗೆ ಬಿದ್ದಿದ್ದ ವರ್ತೂರು ಕೋಡಿಯಿಂದ ವರ್ತೂರುವರೆಗಿನ ಎಲಿವೆಟೆಡ್ ಕಾರಿಡಾರ್ ಕಾಮಗಾರಿ ಪುನರ್ ಆರಂಭಿಸಲು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ (ಕೆಆರ್ಡಿಸಿಎಲ್) ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.</p>.<p>ಮಹದೇವಪುರ ಟಾಸ್ಕ್ ಫೋರ್ಸ್ ತಂಡ ಹಾಗೂ ಸ್ಥಳೀಯ ಮುಖಂಡರೊಂದಿಗೆ ಯೋಜನೆ ಸ್ಥಳ ಪರಿಶೀಲನೆ ನಡೆಸಲಾಗಿದೆ. ಜಮೀನು ಮಾಲೀಕರೊಂದಿಗಿನ ಸಂಧಾನ ಪ್ರಕ್ರಿಯೆ ಪೂರ್ಣಗೊಳಿಸಿ ಶೀಘ್ರ ಕಾಮಗಾರಿ ಆರಂಭಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.</p>.<p>ಮಹದೇವಪುರ ಟಾಸ್ಕ್ ಫೋರ್ಸ್ ತಂಡದ ಉಪಾಧ್ಯಕ್ಷ ಎಲ್.ರಾಜೇಶ್ ಮಾತನಾಡಿ, ‘ಮಾಜಿ ಸಚಿವ ಅರವಿಂದ ಲಿಂಬಾವಳಿ ಹಾಗೂ ಶಾಸಕಿ ಮಂಜುಳಾ ಲಿಂಬಾವಳಿ ಅವರು ಭೂಮಾಲೀಕರೊಂದಿಗೆ ನಿರಂತರ ಸಂಧಾನ ಪ್ರಕ್ರಿಯೆ ನಡೆಸಿ ಸರ್ಕಾರದಿಂದ ದೊರೆಯಬೇಕಾದ ಪರಿಹಾರವನ್ನು ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ’ ಎಂದರು.</p>.<p>‘ಈಗ ಜಮೀನು ಮಾಲೀಕರು ಜಾಗ ಬಿಟ್ಟು ಕೊಡಲು ಒಪ್ಪಿದ್ದರಿಂದ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿ ಅತಿಶೀಘ್ರದಲ್ಲಿ ಎಲಿವೆಟೆಡ್ ಕಾರಿಡಾರ್ ರಸ್ತೆ ಮತ್ತು ಸರ್ವೀಸ್ ರಸ್ತೆಗಳನ್ನು ನಿರ್ಮಾಣ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>ಕೆಆರ್ಡಿಸಿಎಲ್ ವ್ಯವಸ್ಥಾಪಕ ನಿರ್ದೇಶಕಿ ಎನ್.ಸುಶೀಲಮ್ಮ, ಮುಖ್ಯ ಎಂಜಿನಿಯರ್ ವಸಂತ್ ನಾಯಕ್, ಭೂ ಸ್ವಾಧೀನ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು, ಮಹದೇವಪುರ ಟಾಸ್ಕ್ ಫೋರ್ಸ್ ಸದಸ್ಯರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>