<p><strong>ಬೆಂಗಳೂರು</strong>: ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಗೆರೆ ರಸ್ತೆಯಲ್ಲಿ ಎಸ್ಎಸ್ವಿಆರ್ ಕನ್ಸ್ಸ್ಟ್ರಕ್ಷನ್ ನಿರ್ಮಿಸುತ್ತಿರುವ ಅಪಾರ್ಟ್ಮೆಂಟ್ ಕಾಮಗಾರಿ ಸ್ಥಳದಲ್ಲಿ ಸರಕು ಸಾಗಣೆಯ ಲಿಫ್ಟ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.</p>.<p>ಲಿಫ್ಟ್ ಆಪರೇಟರ್ ಸತ್ಯಕುಮಾರ್ ಹಾಗೂ ಲಿಫ್ಟ್ ಮೆಕಾನಿಕ್ ಮುತ್ತಪ್ಪ ಮೃತ ಕಾರ್ಮಿಕರು.</p>.<p>ಬುಧವಾರ ಸಂಜೆ ಕೆಲಸ ಮಾಡುತ್ತಿದ್ದ ವೇಳೆ ಲಿಫ್ಟ್ ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.</p>.<p>ಸತ್ಯಕುಮಾರ್ ಅವರ ಪತ್ನಿ ದೂರು ನೀಡಿದ್ದಾರೆ. ಗುತ್ತಿಗೆದಾರ ಸುಧೀರ್ ಹಾಗೂ ಎಂಜಿನಿಯರ್ ವಿರುದ್ಧ ನಿರ್ಲಕ್ಷ್ಯ ಆರೋಪದ ಅಡಿ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 106(1) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಶುಕ್ರವಾರ ಬೆಳಿಗ್ಗೆ ವೈದೇಹಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುವುದು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಗೆರೆ ರಸ್ತೆಯಲ್ಲಿ ಎಸ್ಎಸ್ವಿಆರ್ ಕನ್ಸ್ಸ್ಟ್ರಕ್ಷನ್ ನಿರ್ಮಿಸುತ್ತಿರುವ ಅಪಾರ್ಟ್ಮೆಂಟ್ ಕಾಮಗಾರಿ ಸ್ಥಳದಲ್ಲಿ ಸರಕು ಸಾಗಣೆಯ ಲಿಫ್ಟ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.</p>.<p>ಲಿಫ್ಟ್ ಆಪರೇಟರ್ ಸತ್ಯಕುಮಾರ್ ಹಾಗೂ ಲಿಫ್ಟ್ ಮೆಕಾನಿಕ್ ಮುತ್ತಪ್ಪ ಮೃತ ಕಾರ್ಮಿಕರು.</p>.<p>ಬುಧವಾರ ಸಂಜೆ ಕೆಲಸ ಮಾಡುತ್ತಿದ್ದ ವೇಳೆ ಲಿಫ್ಟ್ ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.</p>.<p>ಸತ್ಯಕುಮಾರ್ ಅವರ ಪತ್ನಿ ದೂರು ನೀಡಿದ್ದಾರೆ. ಗುತ್ತಿಗೆದಾರ ಸುಧೀರ್ ಹಾಗೂ ಎಂಜಿನಿಯರ್ ವಿರುದ್ಧ ನಿರ್ಲಕ್ಷ್ಯ ಆರೋಪದ ಅಡಿ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 106(1) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>ಶುಕ್ರವಾರ ಬೆಳಿಗ್ಗೆ ವೈದೇಹಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುವುದು ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>