<p><strong>ಕೆ.ಆರ್.ಪುರ:</strong> ‘ನಮ್ಮ ಪರಂಪರೆಯ ಸಂಕೇತಗಳಾದ ಹಬ್ಬಗಳು, ಜಾತ್ರೆ, ಉತ್ಸವಗಳನ್ನು ಆಚರಿಸುವುದರಿಂದ ದೇಶದ ಸಂಸ್ಕೃತಿ ಮತ್ತು ಭಾಷೆ ಉಳಿಯುತ್ತದೆ’ ಎಂದು ನಟ ಡಾಲಿ ಧನಂಜಯ್ ಹೇಳಿದರು.</p>.<p>ಕೆ.ಆರ್.ಪುರ ಸಮೀಪದ ವರ್ತೂರಿನಲ್ಲಿ ವರ್ತೂರು ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಏರ್ಪಡಿಸಿದ್ದ ವರ್ತೂರು ಸಂಕ್ರಾಂತಿ ಉತ್ಸವ-2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ನಮ್ಮ ಪೂರ್ವಜರ ಆಚರಣೆಗಳಿಗೆ ತನ್ನದೆಯಾದ ಅರ್ಥ ಮಹತ್ವ, ಹಿನ್ನೆಲೆಯಿದೆ. ಆಚರಣೆಗಳು ನಮ್ಮ ಶಿಸ್ತುಬದ್ಧ ಜೀವನಕ್ಕೆ ದಾರಿದೀಪಗಳಾಗಿವೆ. ಸಂಕ್ರಾಂತಿ ಉತ್ಸವದಂತಹ ಕಾರ್ಯಕ್ರಮಗಳು ಹೆಚ್ಚಾಗಬೇಕು. ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕು. ಹೆಚ್ಚಾಗಿ ಕನ್ನಡ ಸಿನಿಮಾವನ್ನು ಚಿತ್ರಮಂದಿರಗಳಲ್ಲಿಯೇ ನೋಡಿ ಪ್ರೋತ್ಸಾಹ ನೀಡಬೇಕು’ ಎಂದರು.</p>.<p>ವರ್ತೂರು ಕ್ರೀಡಾ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಮಹೇಂದ್ರ ಮೋದಿ ಮಾತನಾಡಿ, ನಶಿಸಿ ಹೋಗುತ್ತಿರುವ ಗೋವು ಉಳಿಸುವ ಉದ್ದೇಶದಿಂದ ಸತತವಾಗಿ ಹದಿನಾಲ್ಕು ವರ್ಷಗಳಿಂದ ಸಂಕ್ರಾಂತಿ ಉತ್ಸವ ಕಾರ್ಯಕ್ರಮ ಹಮ್ಮಿಕೊಂಡು ಬರಲಾಗುತ್ತಿದೆ ಎಂದರು.</p>.<p>ಉತ್ಸವದಲ್ಲಿ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ವಿವಿಧ ನೃತ್ಯ, ಭರತನಾಟ್ಯ, ನಗೆಹಬ್ಬ ಹಾಗೂ ಸಾಧಕರಿಗೆ ವರ್ತೂರು ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಶಾಸಕಿ ಮಂಜುಳಾ ಲಿಂಬಾವಳಿ, ಮಾಜಿ ಶಾಸಕ ಅರವಿಂದ ಲಿಂಬಾವಳಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಎನ್.ಆರ್.ಶ್ರೀಧರ್ ರೆಡ್ಡಿ, ಮುಖಂಡರಾದ ಮನೋಹರ್ ರೆಡ್ಡಿ, ಎಲ್.ರಾಜೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ‘ನಮ್ಮ ಪರಂಪರೆಯ ಸಂಕೇತಗಳಾದ ಹಬ್ಬಗಳು, ಜಾತ್ರೆ, ಉತ್ಸವಗಳನ್ನು ಆಚರಿಸುವುದರಿಂದ ದೇಶದ ಸಂಸ್ಕೃತಿ ಮತ್ತು ಭಾಷೆ ಉಳಿಯುತ್ತದೆ’ ಎಂದು ನಟ ಡಾಲಿ ಧನಂಜಯ್ ಹೇಳಿದರು.</p>.<p>ಕೆ.ಆರ್.ಪುರ ಸಮೀಪದ ವರ್ತೂರಿನಲ್ಲಿ ವರ್ತೂರು ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಏರ್ಪಡಿಸಿದ್ದ ವರ್ತೂರು ಸಂಕ್ರಾಂತಿ ಉತ್ಸವ-2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ನಮ್ಮ ಪೂರ್ವಜರ ಆಚರಣೆಗಳಿಗೆ ತನ್ನದೆಯಾದ ಅರ್ಥ ಮಹತ್ವ, ಹಿನ್ನೆಲೆಯಿದೆ. ಆಚರಣೆಗಳು ನಮ್ಮ ಶಿಸ್ತುಬದ್ಧ ಜೀವನಕ್ಕೆ ದಾರಿದೀಪಗಳಾಗಿವೆ. ಸಂಕ್ರಾಂತಿ ಉತ್ಸವದಂತಹ ಕಾರ್ಯಕ್ರಮಗಳು ಹೆಚ್ಚಾಗಬೇಕು. ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕು. ಹೆಚ್ಚಾಗಿ ಕನ್ನಡ ಸಿನಿಮಾವನ್ನು ಚಿತ್ರಮಂದಿರಗಳಲ್ಲಿಯೇ ನೋಡಿ ಪ್ರೋತ್ಸಾಹ ನೀಡಬೇಕು’ ಎಂದರು.</p>.<p>ವರ್ತೂರು ಕ್ರೀಡಾ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಮಹೇಂದ್ರ ಮೋದಿ ಮಾತನಾಡಿ, ನಶಿಸಿ ಹೋಗುತ್ತಿರುವ ಗೋವು ಉಳಿಸುವ ಉದ್ದೇಶದಿಂದ ಸತತವಾಗಿ ಹದಿನಾಲ್ಕು ವರ್ಷಗಳಿಂದ ಸಂಕ್ರಾಂತಿ ಉತ್ಸವ ಕಾರ್ಯಕ್ರಮ ಹಮ್ಮಿಕೊಂಡು ಬರಲಾಗುತ್ತಿದೆ ಎಂದರು.</p>.<p>ಉತ್ಸವದಲ್ಲಿ ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ವಿವಿಧ ನೃತ್ಯ, ಭರತನಾಟ್ಯ, ನಗೆಹಬ್ಬ ಹಾಗೂ ಸಾಧಕರಿಗೆ ವರ್ತೂರು ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ಶಾಸಕಿ ಮಂಜುಳಾ ಲಿಂಬಾವಳಿ, ಮಾಜಿ ಶಾಸಕ ಅರವಿಂದ ಲಿಂಬಾವಳಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಎನ್.ಆರ್.ಶ್ರೀಧರ್ ರೆಡ್ಡಿ, ಮುಖಂಡರಾದ ಮನೋಹರ್ ರೆಡ್ಡಿ, ಎಲ್.ರಾಜೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>