ಬೆಂಗಳೂರು:ಬೆಳ್ಳಂದೂರು ಮತ್ತು ವರ್ತೂರು ಕೆರೆ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒಂದೇ ಕಂತಿನಲ್ಲಿ ₹450 ಕೋಟಿ ಅನುದಾನ ಬಿಡುಗಡೆ ಮಾಡಿದೆ.
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಸೂಚನೆ ನಂತರ, ಸರ್ಕಾರ ಹಣ ಮಂಜೂರು ಮಾಡಿದೆ. ಎರಡೂ ಕೆರೆಯಲ್ಲಿ ಬೆಳೆದಿರುವ ಕಳೆ ಹಾಗೂ ಜೊಂಡನ್ನು ಹೊರಹಾಕಿ ಹೂಳೆತ್ತುವ ಕಾಮಗಾರಿ ಮತ್ತು ಅಭಿವೃದ್ಧಿ ಕಾಮಗಾರಿಯನ್ನು ಈ ಅನುದಾನದಲ್ಲಿ ಕೈಗೆತ್ತಿಕೊಳ್ಳಲಾಗುವುದು.
‘ಈ ಅನುದಾನವನ್ನು ಬಳಸಿಕೊಳ್ಳಲು ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ಕಾಮಗಾರಿ ಆರಂಭಿಸಲಾಗುವುದು’ ಎಂದು ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧಿಕಾರಿಗಳು ಹೇಳಿದ್ದಾರೆ.