<p><strong>ಬೆಂಗಳೂರು: </strong>ನಗರದ ವಸಂತಪುರ ಕೆರೆಯ (ಜನಾರ್ದನ ಕೆರೆ) ಅಭಿವೃದ್ಧಿ ಕಾಮಗಾರಿಗಳು ಕೊನೆಗೂ ಆರಂಭವಾಗಿದ್ದು, ಜಲಕಾಯವು ಕೆಲವೇ ತಿಂಗಳಲ್ಲಿ ಹೊಸ ರೂಪ ಪಡೆಯುವ ಆಶಾಭಾವ ವ್ಯಕ್ತವಾಗಿದೆ.</p>.<p>ವಸಂತಪುರ ವಾರ್ಡ್ನಲ್ಲಿರುವ ಈ ಕೆರೆ ಅಕ್ಷರಶಃ ಕಸದ ತೊಟ್ಟಿಯಾಗಿತ್ತು. ಕಳೆದ ವರ್ಷವೇ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳ್ಳಬೇಕಿತ್ತು. ಆದರೆ, ಸ್ಥಳೀಯ ಪ್ರಭಾವಿಗಳು ಕಾಮಗಾರಿ ನಡೆಸಲು ಅಡ್ಡಿಪಡಿಸಿದ್ದರು. ಕೆರೆ ಅಭಿವೃದ್ಧಿ ಪ್ರಾಧಿಕಾರವು ಪೊಲೀಸರ ಸುಪರ್ದಿಯಲ್ಲಿ ಕೊನೆಗೂಕೆರೆಯ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಿದೆ. ಅಭಿವೃದ್ಧಿ ಕಾಮಗಾರಿಗೆ ₹3 ಕೋಟಿ ವೆಚ್ಚ ಮಾಡಲಾಗುತ್ತಿದೆ.</p>.<p>‘ನಗರದ ಬೇರೆ ಕೆರೆಗಳು ಕನಿಷ್ಠ ವಾಯುವಿಹಾರ ಮಾರ್ಗ ಹಾಗೂ ಮೂಲ ಸೌಕರ್ಯಗಳಿಂದ ಕೂಡಿವೆ. ಆದರೆ, ಇಲ್ಲಿ ಕೆರೆಯ ಲಕ್ಷಣಗಳೇ ಮರೆಯಾಗಿವೆ. ಜಲಮೂಲದಲ್ಲಿ ಭಾರಿ ಪ್ರಮಾಣದ ಹೂಳು ತುಂಬಿದೆ. ಬದಿಗಳಲ್ಲಿ ವಲಸೆ ಕಾರ್ಮಿಕರು ಮಲ-ಮೂತ್ರ ವಿಸರ್ಜನೆ ಮಾಡುತ್ತಾರೆ. ಇದರಿಂದ ಕೆರೆಯ ಹತ್ತಿರ ಸುಳಿಯಲು ಸ್ಥಳೀಯ ನಿವಾಸಿಗಳು ಹಿಂದೇಟು ಹಾಕುತ್ತಾರೆ’ ಎಂದು ಸ್ಥಳೀಯರೊಬ್ಬರು ವಿವರಿಸಿದರು.</p>.<p>‘ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಲಮೂಲದ ಅಭಿವೃದ್ಧಿಗೆ ಚಾಲನೆ ಸಿಕ್ಕಿತು. ಆದರೆ, ಸ್ಥಳೀಯ ಕೆಲ ಪ್ರಭಾವಿಗಳು ಕೋರ್ಟ್ ಮೆಟ್ಟಿಲೇರಿದ್ದರಿಂದ ಕಾಮಗಾರಿಗೆ ಹಿನ್ನಡೆಯಾಗಿತ್ತು. ಒತ್ತುವರಿಯಿಂದ ಜಲಕಾಯದ ಜಾಗ 7 ಎಕರೆಯಿಂದ 4 ಎಕರೆಗೆ ಇಳಿದಿದೆ. ಎಲ್ಲ ಅಂದುಕೊಂಡಂತೆ ನಡೆದಿದ್ದರೆ, ಜಲಮೂಲದ ಚಿತ್ರಣ ಈಗಾಗಲೇ ಬದಲಾಗಬೇಕಿತ್ತು’ ಎಂದು ಪಾಲಿಕೆ ಸದಸ್ಯೆ ಶೋಭಾ ಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ವಾಯುವಿಹಾರ ಮಾರ್ಗ, ಕೆರೆಯ ಸುತ್ತ ಬೇಲಿ ಹಾಗೂ ಏರಿ ನಿರ್ಮಿಸಲಾಗುವುದು. ಹೂಳು ಎತ್ತಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ವಸಂತಪುರ ಕೆರೆಯ (ಜನಾರ್ದನ ಕೆರೆ) ಅಭಿವೃದ್ಧಿ ಕಾಮಗಾರಿಗಳು ಕೊನೆಗೂ ಆರಂಭವಾಗಿದ್ದು, ಜಲಕಾಯವು ಕೆಲವೇ ತಿಂಗಳಲ್ಲಿ ಹೊಸ ರೂಪ ಪಡೆಯುವ ಆಶಾಭಾವ ವ್ಯಕ್ತವಾಗಿದೆ.</p>.<p>ವಸಂತಪುರ ವಾರ್ಡ್ನಲ್ಲಿರುವ ಈ ಕೆರೆ ಅಕ್ಷರಶಃ ಕಸದ ತೊಟ್ಟಿಯಾಗಿತ್ತು. ಕಳೆದ ವರ್ಷವೇ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳ್ಳಬೇಕಿತ್ತು. ಆದರೆ, ಸ್ಥಳೀಯ ಪ್ರಭಾವಿಗಳು ಕಾಮಗಾರಿ ನಡೆಸಲು ಅಡ್ಡಿಪಡಿಸಿದ್ದರು. ಕೆರೆ ಅಭಿವೃದ್ಧಿ ಪ್ರಾಧಿಕಾರವು ಪೊಲೀಸರ ಸುಪರ್ದಿಯಲ್ಲಿ ಕೊನೆಗೂಕೆರೆಯ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಿದೆ. ಅಭಿವೃದ್ಧಿ ಕಾಮಗಾರಿಗೆ ₹3 ಕೋಟಿ ವೆಚ್ಚ ಮಾಡಲಾಗುತ್ತಿದೆ.</p>.<p>‘ನಗರದ ಬೇರೆ ಕೆರೆಗಳು ಕನಿಷ್ಠ ವಾಯುವಿಹಾರ ಮಾರ್ಗ ಹಾಗೂ ಮೂಲ ಸೌಕರ್ಯಗಳಿಂದ ಕೂಡಿವೆ. ಆದರೆ, ಇಲ್ಲಿ ಕೆರೆಯ ಲಕ್ಷಣಗಳೇ ಮರೆಯಾಗಿವೆ. ಜಲಮೂಲದಲ್ಲಿ ಭಾರಿ ಪ್ರಮಾಣದ ಹೂಳು ತುಂಬಿದೆ. ಬದಿಗಳಲ್ಲಿ ವಲಸೆ ಕಾರ್ಮಿಕರು ಮಲ-ಮೂತ್ರ ವಿಸರ್ಜನೆ ಮಾಡುತ್ತಾರೆ. ಇದರಿಂದ ಕೆರೆಯ ಹತ್ತಿರ ಸುಳಿಯಲು ಸ್ಥಳೀಯ ನಿವಾಸಿಗಳು ಹಿಂದೇಟು ಹಾಕುತ್ತಾರೆ’ ಎಂದು ಸ್ಥಳೀಯರೊಬ್ಬರು ವಿವರಿಸಿದರು.</p>.<p>‘ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಜಲಮೂಲದ ಅಭಿವೃದ್ಧಿಗೆ ಚಾಲನೆ ಸಿಕ್ಕಿತು. ಆದರೆ, ಸ್ಥಳೀಯ ಕೆಲ ಪ್ರಭಾವಿಗಳು ಕೋರ್ಟ್ ಮೆಟ್ಟಿಲೇರಿದ್ದರಿಂದ ಕಾಮಗಾರಿಗೆ ಹಿನ್ನಡೆಯಾಗಿತ್ತು. ಒತ್ತುವರಿಯಿಂದ ಜಲಕಾಯದ ಜಾಗ 7 ಎಕರೆಯಿಂದ 4 ಎಕರೆಗೆ ಇಳಿದಿದೆ. ಎಲ್ಲ ಅಂದುಕೊಂಡಂತೆ ನಡೆದಿದ್ದರೆ, ಜಲಮೂಲದ ಚಿತ್ರಣ ಈಗಾಗಲೇ ಬದಲಾಗಬೇಕಿತ್ತು’ ಎಂದು ಪಾಲಿಕೆ ಸದಸ್ಯೆ ಶೋಭಾ ಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ವಾಯುವಿಹಾರ ಮಾರ್ಗ, ಕೆರೆಯ ಸುತ್ತ ಬೇಲಿ ಹಾಗೂ ಏರಿ ನಿರ್ಮಿಸಲಾಗುವುದು. ಹೂಳು ಎತ್ತಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>