<p><strong>ಬೆಂಗಳೂರು</strong>: ‘ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆಯಲ್ಲಿ ವ್ಯತ್ಯಯವಾದರೆ ಜೀವಕ್ಕೇ ಅಪಾಯ ಎದುರಾಗಲಿದೆ. ಆದ್ದರಿಂದ ರಕ್ತನಾಳಗಳಲ್ಲಿನ ಅಡಚಣೆ ಪತ್ತೆಗೆ ಆದ್ಯತೆ ನೀಡಬೇಕಿದೆ’ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ಅಭಿಪ್ರಾಯಪಟ್ಟರು.</p>.<p>ವ್ಯಾಸ್ಕುಲರ್ ಸರ್ಜನ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಹಾಗೂ ವ್ಯಾಸ್ಕುಲರ್ ಸೊಸೈಟಿ ಆಫ್ ಇಂಡಿಯಾ ಜಂಟಿಯಾಗಿ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಕ್ತನಾಳದ ಸಮಸ್ಯೆ ಹಾಗೂ ಚಿಕಿತ್ಸೆಯ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>‘ಧೂಮಪಾನ, ಮಾದಕ ವಸ್ತುಗಳ ಸೇವನೆ, ಅನುವಂಶೀಯತೆ ಸೇರಿ ವಿವಿಧ ಕಾರಣಗಳಿಂದ ರಕ್ತನಾಳದ ಸಮಸ್ಯೆಗಳು ಹೆಚ್ಚಿನವರಲ್ಲಿ ಕಾಣಿಸಿಕೊಳ್ಳುತ್ತಿದೆ. ಈ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ನಿಯಂತ್ರಣಕ್ಕೆ ಆದ್ಯತೆ ನೀಡಲಾಗಿದೆ. ಹುಬ್ಬಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಸಂಸ್ಥೆಯ ಶಾಖೆಯಲ್ಲಿ ರಕ್ತನಾಳ ವಿಭಾಗ ಪ್ರಾರಂಭ ಮಾಡಲಾಗುತ್ತಿದೆ’ ಎಂದರು.</p>.<p>‘ಈಗಾಗಲೇ ಬೆಂಗಳೂರು, ಮೈಸೂರು ಹಾಗೂ ಕಲಬುರಗಿಯಲ್ಲಿ ರಕ್ತನಾಳ ವಿಭಾಗ ಕಾರ್ಯಾರಂಭಿಸಿದೆ. ಅತ್ಯಾಧುನಿಕ ಚಿಕಿತ್ಸಾ ಸೌಕರ್ಯಗಳನ್ನು ಬಳಸಲಾಗುತ್ತಿದೆ. ಉತ್ತಮ ಜೀವನಶೈಲಿಯಿಂದ ರಕ್ತನಾಳದ ಸಮಸ್ಯೆ ನಿಯಂತ್ರಿಸಬಹುದು‘ ಎಂದು ಹೇಳಿದರು.</p>.<p>ರಕ್ತನಾಳದ ಶಸ್ತ್ರಚಿಕಿತ್ಸಕ ಡಾ.ಕೆ.ಆರ್.ಸುರೇಶ್, ‘ದೇಹ ರಕ್ತನಾಳಗಳಿಂದ ಕೂಡಿದ ಸಂಕೀರ್ಣ ವ್ಯವಸ್ಥೆಯಾಗಿದೆ. ಶೇ 80ರಷ್ಟು ರಕ್ತನಾಳದ ಸಮಸ್ಯೆಗಳನ್ನು ಔಷಧ, ಜೀವನಶೈಲಿ ಬದಲಾವಣೆಯಂತಹ ಕ್ರಮಗಳಿಂದ ತಪ್ಪಿಸಬಹುದಾಗಿದೆ‘ ಎಂದರು.</p>.<p>ಜಯದೇವ ಹೃದ್ರೋಗ ಸಂಸ್ಥೆಯ ರಕ್ತನಾಳದ ವಿಭಾಗದ ಮುಖ್ಯಸ್ಥ ಡಾ.ಮುರಳಿಕೃಷ್ಣ ನೆಕ್ಕಂಟಿ, ‘ರಕ್ತನಾಳದ ಸಮಸ್ಯೆಯಿಂದ ಗ್ಯಾಂಗ್ರಿನ್ ಕೂಡಾ ಕಾಡಬಹುದು. ಈ ರೀತಿ ಸಮಸ್ಯೆಗೆ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಒಳಗಾಗುತ್ತಿದ್ದಾರೆ. ರಕ್ತನಾಳದ ಸಮಸ್ಯೆ ಪತ್ತೆಗೆ ಸಂಬಂಧಿಸಿದಂತೆ ವೈದ್ಯರಿಗೂ ಅಗತ್ಯ ತರಬೇತಿ ನೀಡಲಾಗುತ್ತಿದೆ’ ಎಂದು ತಿಳಿಸಿದರು. </p>.<p>ವ್ಯಾಸ್ಕುಲರ್ ಸೊಸೈಟಿ ಆಫ್ ಇಂಡಿಯಾದ ಅಧ್ಯಕ್ಷ ಡಾ.ವೆಂಕಟೇಶ್ ರೆಡ್ಡಿ, ಕಾರ್ಯದರ್ಶಿ ಡಾ.ವಿಷ್ಣು ಎಂ., ಶಸ್ತ್ರಚಿಕಿತ್ಸಕ ಡಾ.ಆಂಜಿನಪ್ಪ, ರಕ್ತನಾಳೀಯ ಶಸ್ತ್ರಚಿಕಿತ್ಸಕರಾದ ಡಾ.ಚಂದ್ರಶೇಖರ್, ಡಾ.ವಿನಯ್ ಕೆ.ಎಸ್., ಡಾ.ಶ್ರವಣ್, ಡಾ.ಪೂರ್ಣಿಮಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆಯಲ್ಲಿ ವ್ಯತ್ಯಯವಾದರೆ ಜೀವಕ್ಕೇ ಅಪಾಯ ಎದುರಾಗಲಿದೆ. ಆದ್ದರಿಂದ ರಕ್ತನಾಳಗಳಲ್ಲಿನ ಅಡಚಣೆ ಪತ್ತೆಗೆ ಆದ್ಯತೆ ನೀಡಬೇಕಿದೆ’ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ಅಭಿಪ್ರಾಯಪಟ್ಟರು.</p>.<p>ವ್ಯಾಸ್ಕುಲರ್ ಸರ್ಜನ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಹಾಗೂ ವ್ಯಾಸ್ಕುಲರ್ ಸೊಸೈಟಿ ಆಫ್ ಇಂಡಿಯಾ ಜಂಟಿಯಾಗಿ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಕ್ತನಾಳದ ಸಮಸ್ಯೆ ಹಾಗೂ ಚಿಕಿತ್ಸೆಯ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>‘ಧೂಮಪಾನ, ಮಾದಕ ವಸ್ತುಗಳ ಸೇವನೆ, ಅನುವಂಶೀಯತೆ ಸೇರಿ ವಿವಿಧ ಕಾರಣಗಳಿಂದ ರಕ್ತನಾಳದ ಸಮಸ್ಯೆಗಳು ಹೆಚ್ಚಿನವರಲ್ಲಿ ಕಾಣಿಸಿಕೊಳ್ಳುತ್ತಿದೆ. ಈ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ನಿಯಂತ್ರಣಕ್ಕೆ ಆದ್ಯತೆ ನೀಡಲಾಗಿದೆ. ಹುಬ್ಬಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಸಂಸ್ಥೆಯ ಶಾಖೆಯಲ್ಲಿ ರಕ್ತನಾಳ ವಿಭಾಗ ಪ್ರಾರಂಭ ಮಾಡಲಾಗುತ್ತಿದೆ’ ಎಂದರು.</p>.<p>‘ಈಗಾಗಲೇ ಬೆಂಗಳೂರು, ಮೈಸೂರು ಹಾಗೂ ಕಲಬುರಗಿಯಲ್ಲಿ ರಕ್ತನಾಳ ವಿಭಾಗ ಕಾರ್ಯಾರಂಭಿಸಿದೆ. ಅತ್ಯಾಧುನಿಕ ಚಿಕಿತ್ಸಾ ಸೌಕರ್ಯಗಳನ್ನು ಬಳಸಲಾಗುತ್ತಿದೆ. ಉತ್ತಮ ಜೀವನಶೈಲಿಯಿಂದ ರಕ್ತನಾಳದ ಸಮಸ್ಯೆ ನಿಯಂತ್ರಿಸಬಹುದು‘ ಎಂದು ಹೇಳಿದರು.</p>.<p>ರಕ್ತನಾಳದ ಶಸ್ತ್ರಚಿಕಿತ್ಸಕ ಡಾ.ಕೆ.ಆರ್.ಸುರೇಶ್, ‘ದೇಹ ರಕ್ತನಾಳಗಳಿಂದ ಕೂಡಿದ ಸಂಕೀರ್ಣ ವ್ಯವಸ್ಥೆಯಾಗಿದೆ. ಶೇ 80ರಷ್ಟು ರಕ್ತನಾಳದ ಸಮಸ್ಯೆಗಳನ್ನು ಔಷಧ, ಜೀವನಶೈಲಿ ಬದಲಾವಣೆಯಂತಹ ಕ್ರಮಗಳಿಂದ ತಪ್ಪಿಸಬಹುದಾಗಿದೆ‘ ಎಂದರು.</p>.<p>ಜಯದೇವ ಹೃದ್ರೋಗ ಸಂಸ್ಥೆಯ ರಕ್ತನಾಳದ ವಿಭಾಗದ ಮುಖ್ಯಸ್ಥ ಡಾ.ಮುರಳಿಕೃಷ್ಣ ನೆಕ್ಕಂಟಿ, ‘ರಕ್ತನಾಳದ ಸಮಸ್ಯೆಯಿಂದ ಗ್ಯಾಂಗ್ರಿನ್ ಕೂಡಾ ಕಾಡಬಹುದು. ಈ ರೀತಿ ಸಮಸ್ಯೆಗೆ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಒಳಗಾಗುತ್ತಿದ್ದಾರೆ. ರಕ್ತನಾಳದ ಸಮಸ್ಯೆ ಪತ್ತೆಗೆ ಸಂಬಂಧಿಸಿದಂತೆ ವೈದ್ಯರಿಗೂ ಅಗತ್ಯ ತರಬೇತಿ ನೀಡಲಾಗುತ್ತಿದೆ’ ಎಂದು ತಿಳಿಸಿದರು. </p>.<p>ವ್ಯಾಸ್ಕುಲರ್ ಸೊಸೈಟಿ ಆಫ್ ಇಂಡಿಯಾದ ಅಧ್ಯಕ್ಷ ಡಾ.ವೆಂಕಟೇಶ್ ರೆಡ್ಡಿ, ಕಾರ್ಯದರ್ಶಿ ಡಾ.ವಿಷ್ಣು ಎಂ., ಶಸ್ತ್ರಚಿಕಿತ್ಸಕ ಡಾ.ಆಂಜಿನಪ್ಪ, ರಕ್ತನಾಳೀಯ ಶಸ್ತ್ರಚಿಕಿತ್ಸಕರಾದ ಡಾ.ಚಂದ್ರಶೇಖರ್, ಡಾ.ವಿನಯ್ ಕೆ.ಎಸ್., ಡಾ.ಶ್ರವಣ್, ಡಾ.ಪೂರ್ಣಿಮಾ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>