<p><strong>ಬೆಂಗಳೂರು:</strong> ಶ್ರೀವಸಿಷ್ಠ ಕೋ–ಆಪ ರೇಟಿವ್ ಕ್ರೆಡಿಟ್ ಸೊಸೈಟಿ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಅಧ್ಯಕ್ಷ ವೇಂಕಟ ನಾರಾ ಯಣ ಹಾಗೂ ನಿರ್ದೇಶಕ ಕೃಷ್ಣಪ್ರಸಾದ್, ಹನುಮಂತ ನಗರ ಠಾಣೆಗೆ ಶುಕ್ರವಾರ ರಾತ್ರಿ ದಿಢೀರ್ ಹಾಜರಾದರು.</p>.<p>ಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಠೇವಣಿದಾರರಿಂದ ಹಣ ಸಂಗ್ರಹಿಸಿ ವಂಚಿಸಿದ್ದ ಆರೋಪದಡಿ ಪ್ರಕರಣ ದಾಖಲಾಗು ತ್ತಿದ್ದಂತೆ ವೇಂಕಟನಾರಾಯಣ ಹಾಗೂ ಅವರ ಮಗ ಕೃಷ್ಣಪ್ರಸಾದ್ ತಲೆ ಮರೆಸಿ ಕೊಂಡು ಓಡಾಡುತ್ತಿದ್ದರು.</p>.<p>ಬಂಧನ ಭೀತಿಯಿಂದ ಅವರಿಬ್ಬರು, ನಿರೀಕ್ಷಣಾ ಜಾಮೀನು ಕೋರಿ ಸಿಸಿಎಚ್ 56ನೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆ ಸಿದ ನ್ಯಾಯಾಲಯ, ಅರ್ಜಿಯನ್ನು ತಿರ ಸ್ಕರಿಸಿದೆ. ಇದರ ಬೆನ್ನಲ್ಲೇ ಇಬ್ಬರೂ ಆರೋಪಿಗಳು, ತನಿಖಾಧಿಕಾರಿ ಎದುರು ಹಾಜರಾಗಿ ಹೇಳಿಕೆ ದಾಖಲಿಸಿದರು.</p>.<p>‘ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ವಿಚಾರಣೆಗೆ ಬರುವಂತೆಯೂ ಆರೋಪಿಗಳ ವಿಳಾಸಕ್ಕೆ ನೋಟಿಸ್ ಕಳುಹಿಸಲಾಗಿತ್ತು. ಅದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದ ಆರೋಪಿಗಳು, ಜಾಮೀನು ಕೋರಿದ್ದರು. ಅವರಿಬ್ಬರ ಅರ್ಜಿ ತಿರಸ್ಕೃತವಾಗಿದ್ದರಿಂದ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಠಾಣೆಗೆ ಬಂದಿದ್ದರು. ಇಬ್ಬರಿಂದಲೂ ಹೇಳಿಕೆ ಪಡೆಯಲಾಗಿದೆ. ಶನಿವಾರ ಬೆಳಿಗ್ಗೆ ಪುನಃ ವಿಚಾರಣೆಗಾಗಿ ಠಾಣೆಗೆ ಬರು ವಂತೆಯೂ ಸೂಚಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>ಈ ನಡುವೆ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ವೇಂಕಟನಾರಾಯಣ ರಾಜೀನಾಮೆ ಸಲ್ಲಿಸಿದ್ದಾರೆ.</p>.<p><strong>‘₹ 7 ಕೋಟಿ ವಂಚನೆಗೆ ಪುರಾವೆ’</strong><br />‘ಆರೋಪಿಗಳಿಂದ ಆಗಿರುವ ವಂಚನೆ ಬಗ್ಗೆ ಇದುವರೆಗೂ 50 ಠೇವಣಿದಾರರು ದೂರು ನೀಡಿದ್ದಾರೆ. ಸುಮಾರು ₹ 7 ಕೋಟಿ ವಂಚನೆ ಆಗಿರುವುದಕ್ಕೆ ಪುರಾವೆ ಗಳನ್ನು ಒದಗಿಸಿದ್ದಾರೆ. ವಂಚನೆ ಮೊತ್ತ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ’ ಎಂದೂ ಪೊಲೀಸ್ ಮೂಲಗಳು ಹೇಳಿವೆ.</p>.<p>‘ವಂಚನೆಗೀಡಾದವರು ಠಾಣೆಗೆ ಬಂದು ದೂರು ನೀಡಬಹುದು’ ಎಂದೂ ಮೂಲಗಳು ಕೋರಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶ್ರೀವಸಿಷ್ಠ ಕೋ–ಆಪ ರೇಟಿವ್ ಕ್ರೆಡಿಟ್ ಸೊಸೈಟಿ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಅಧ್ಯಕ್ಷ ವೇಂಕಟ ನಾರಾ ಯಣ ಹಾಗೂ ನಿರ್ದೇಶಕ ಕೃಷ್ಣಪ್ರಸಾದ್, ಹನುಮಂತ ನಗರ ಠಾಣೆಗೆ ಶುಕ್ರವಾರ ರಾತ್ರಿ ದಿಢೀರ್ ಹಾಜರಾದರು.</p>.<p>ಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಠೇವಣಿದಾರರಿಂದ ಹಣ ಸಂಗ್ರಹಿಸಿ ವಂಚಿಸಿದ್ದ ಆರೋಪದಡಿ ಪ್ರಕರಣ ದಾಖಲಾಗು ತ್ತಿದ್ದಂತೆ ವೇಂಕಟನಾರಾಯಣ ಹಾಗೂ ಅವರ ಮಗ ಕೃಷ್ಣಪ್ರಸಾದ್ ತಲೆ ಮರೆಸಿ ಕೊಂಡು ಓಡಾಡುತ್ತಿದ್ದರು.</p>.<p>ಬಂಧನ ಭೀತಿಯಿಂದ ಅವರಿಬ್ಬರು, ನಿರೀಕ್ಷಣಾ ಜಾಮೀನು ಕೋರಿ ಸಿಸಿಎಚ್ 56ನೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆ ಸಿದ ನ್ಯಾಯಾಲಯ, ಅರ್ಜಿಯನ್ನು ತಿರ ಸ್ಕರಿಸಿದೆ. ಇದರ ಬೆನ್ನಲ್ಲೇ ಇಬ್ಬರೂ ಆರೋಪಿಗಳು, ತನಿಖಾಧಿಕಾರಿ ಎದುರು ಹಾಜರಾಗಿ ಹೇಳಿಕೆ ದಾಖಲಿಸಿದರು.</p>.<p>‘ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ವಿಚಾರಣೆಗೆ ಬರುವಂತೆಯೂ ಆರೋಪಿಗಳ ವಿಳಾಸಕ್ಕೆ ನೋಟಿಸ್ ಕಳುಹಿಸಲಾಗಿತ್ತು. ಅದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದ ಆರೋಪಿಗಳು, ಜಾಮೀನು ಕೋರಿದ್ದರು. ಅವರಿಬ್ಬರ ಅರ್ಜಿ ತಿರಸ್ಕೃತವಾಗಿದ್ದರಿಂದ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಠಾಣೆಗೆ ಬಂದಿದ್ದರು. ಇಬ್ಬರಿಂದಲೂ ಹೇಳಿಕೆ ಪಡೆಯಲಾಗಿದೆ. ಶನಿವಾರ ಬೆಳಿಗ್ಗೆ ಪುನಃ ವಿಚಾರಣೆಗಾಗಿ ಠಾಣೆಗೆ ಬರು ವಂತೆಯೂ ಸೂಚಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>ಈ ನಡುವೆ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ವೇಂಕಟನಾರಾಯಣ ರಾಜೀನಾಮೆ ಸಲ್ಲಿಸಿದ್ದಾರೆ.</p>.<p><strong>‘₹ 7 ಕೋಟಿ ವಂಚನೆಗೆ ಪುರಾವೆ’</strong><br />‘ಆರೋಪಿಗಳಿಂದ ಆಗಿರುವ ವಂಚನೆ ಬಗ್ಗೆ ಇದುವರೆಗೂ 50 ಠೇವಣಿದಾರರು ದೂರು ನೀಡಿದ್ದಾರೆ. ಸುಮಾರು ₹ 7 ಕೋಟಿ ವಂಚನೆ ಆಗಿರುವುದಕ್ಕೆ ಪುರಾವೆ ಗಳನ್ನು ಒದಗಿಸಿದ್ದಾರೆ. ವಂಚನೆ ಮೊತ್ತ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ’ ಎಂದೂ ಪೊಲೀಸ್ ಮೂಲಗಳು ಹೇಳಿವೆ.</p>.<p>‘ವಂಚನೆಗೀಡಾದವರು ಠಾಣೆಗೆ ಬಂದು ದೂರು ನೀಡಬಹುದು’ ಎಂದೂ ಮೂಲಗಳು ಕೋರಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>