<p><strong>ಬೆಂಗಳೂರು:</strong> ಪ್ರಕರಣವೊಂದರಲ್ಲಿ ನ್ಯಾಯಾಲಯವು ಬಂಧನ ವಾರಂಟ್ ಆದೇಶ ಹೊರಡಿಸಿದ್ದರಿಂದ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಬಸವೇಶ್ವರನಗರ ಠಾಣೆಯ ಪೊಲೀಸರು ಬುಧವಾರ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.</p><p>ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಎದುರು ನಾಗರಾಜ್ ಅವರನ್ನು ಪೊಲೀಸರು ಹಾಜರು ಪಡಿಸಿದರು. ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದರಿಂದ ಬಿಡುಗಡೆ ಮಾಡಲಾಯಿತು.</p><p>ರಾಜಾಜಿನಗರದ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ಮನೆ ಎದುರು 2021ರಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದರು. ವಾಟಾಳ್ ನಾಗರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ 42ನೇ ಎಸಿಜೆಎಂ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿತ್ತು.</p><p><strong>ಆಕ್ಷೇಪ:</strong> ಇಂಗ್ಲಿಷ್ನಲ್ಲಿ ಬಂಧನ ವಾರಂಟ್ ತಂದಿದ್ದಕ್ಕೆ ನಾಗರಾಜ್ ಆಕ್ಷೇಪ ವ್ಯಕ್ತಪಡಿಸಿದರು.</p><p>‘ಕನ್ನಡದಲ್ಲಿ ವಾರಂಟ್ ನೀಡಿದರೆ ಮಾತ್ರ ಬರುತ್ತೇನೆ. ಇಲ್ಲದಿದ್ದರೆ ಬರುವುದಿಲ್ಲ’ ಎಂದು ಪಟ್ಟು ಹಿಡಿದರು. ಪೊಲೀಸ್ ಜೀಪನ್ನು ಹತ್ತುವುದಕ್ಕೂ ನಿರಾಕರಿಸಿದ್ದರು. ಕೊನೆಗೆ ಆಟೊದಲ್ಲಿ ಬರುವುದಾಗಿ ಹೇಳಿದರು. ಅದಕ್ಕೆ ಪೊಲೀಸರು ಒಪ್ಪಿದರು. ಆಟೊದಲ್ಲಿ ನಾಗರಾಜ್ ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು. ಪೊಲೀಸ್ ವಾಹನವು ಆಟೊ ಹಿಂಬಾಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಕರಣವೊಂದರಲ್ಲಿ ನ್ಯಾಯಾಲಯವು ಬಂಧನ ವಾರಂಟ್ ಆದೇಶ ಹೊರಡಿಸಿದ್ದರಿಂದ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಬಸವೇಶ್ವರನಗರ ಠಾಣೆಯ ಪೊಲೀಸರು ಬುಧವಾರ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಿದರು.</p><p>ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಎದುರು ನಾಗರಾಜ್ ಅವರನ್ನು ಪೊಲೀಸರು ಹಾಜರು ಪಡಿಸಿದರು. ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದರಿಂದ ಬಿಡುಗಡೆ ಮಾಡಲಾಯಿತು.</p><p>ರಾಜಾಜಿನಗರದ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ಮನೆ ಎದುರು 2021ರಲ್ಲಿ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದರು. ವಾಟಾಳ್ ನಾಗರಾಜ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ 42ನೇ ಎಸಿಜೆಎಂ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿತ್ತು.</p><p><strong>ಆಕ್ಷೇಪ:</strong> ಇಂಗ್ಲಿಷ್ನಲ್ಲಿ ಬಂಧನ ವಾರಂಟ್ ತಂದಿದ್ದಕ್ಕೆ ನಾಗರಾಜ್ ಆಕ್ಷೇಪ ವ್ಯಕ್ತಪಡಿಸಿದರು.</p><p>‘ಕನ್ನಡದಲ್ಲಿ ವಾರಂಟ್ ನೀಡಿದರೆ ಮಾತ್ರ ಬರುತ್ತೇನೆ. ಇಲ್ಲದಿದ್ದರೆ ಬರುವುದಿಲ್ಲ’ ಎಂದು ಪಟ್ಟು ಹಿಡಿದರು. ಪೊಲೀಸ್ ಜೀಪನ್ನು ಹತ್ತುವುದಕ್ಕೂ ನಿರಾಕರಿಸಿದ್ದರು. ಕೊನೆಗೆ ಆಟೊದಲ್ಲಿ ಬರುವುದಾಗಿ ಹೇಳಿದರು. ಅದಕ್ಕೆ ಪೊಲೀಸರು ಒಪ್ಪಿದರು. ಆಟೊದಲ್ಲಿ ನಾಗರಾಜ್ ಅವರನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಯಿತು. ಪೊಲೀಸ್ ವಾಹನವು ಆಟೊ ಹಿಂಬಾಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>