ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಿಂದ ಆಯ್ಕೆಯಾದ ಸಂಸದರು ಕಾವೇರಿ, ಬೆಳಗಾವಿ, ಮಹಾದಾಯಿ, ಹಿಂದಿ ಹೇರಿಕೆಯ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಆದ್ದರಿಂದ, ಕನ್ನಡದ ಅಸ್ಮಿತೆಯನ್ನು ಸಂಸತ್ತಿನಲ್ಲಿ ಸಾರಲು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದೇನೆ. ಇದೇ 04ರಂದು (ಗುರುವಾರ) ಮಧ್ಯಾಹ್ನ 1.30ಕ್ಕೆ ನಾಮಪತ್ರ ಸಲ್ಲಿಸುತ್ತೇನೆ’ ಎಂದು ಮಾಹಿತಿ ನೀಡಿದರು.