<p><strong>ಯಲಹಂಕ: </strong>ಬಿಜೆಪಿ ನಗರಮಂಡಲ ಹಾಗೂ ಸಂಘಪರಿವಾರದ ಸಹಯೋಗದೊಂದಿಗೆ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ 142ನೇ ಜಯಂತ್ಯುತ್ಸವವನ್ನು ಉಪನಗರದಲ್ಲಿ ಬುಧವಾರ ಆಚರಿಸಲಾಯಿತು. </p>.<p>ವೀರಸಾವರ್ಕರ್ ಅವರ ಭಾವಚಿತ್ರವನ್ನು ರಥದಲ್ಲಿಟ್ಟು ಪೂಜೆ ನೆರವೇರಿದ ಬಳಿಕ ಜ್ಞಾನಜ್ಯೋತಿ ಕಾಲೇಜಿನಿಂದ ಆರಂಭವಾದ ಮೆರವಣಿಗೆಯು, ಚಿಕ್ಕಬೊಮ್ಮಸಂದ್ರ ಕ್ರಾಸ್ ಹಾಗೂ ಮದರ್ ಡೈರಿ ಕ್ರಾಸ್ ಮೂಲಕ ವೀರ ಸಾವರ್ಕರ್ ಮೇಲ್ಸೇತುವೆಯವರೆಗೆ ಸಾಗಿತು. </p>.<p>ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ಬಾಲ್ಯದಲ್ಲಿಯೇ ಬಾಲಗಂಗಾಧರ ತಿಲಕ್ ಅವರ ಪ್ರೇರಣೆಯಿಂದ ಸ್ವಾತಂತ್ರ್ಯ ಹೋರಾಟದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಸಾವರ್ಕರ್ ಅವರು, ತಮ್ಮ ಕ್ರಾಂತಿಕಾರಿ ಹೋರಾಟದ ಮೂಲಕ ಬ್ರಿಟಿಷರನ್ನು ದೇಶದಿಂದ ತೊಲಗಿಸಲು ಮಾಡಿದ್ದ ಸಂಕಲ್ಪ ಸದಾ ಸ್ಫೂರ್ತಿಯಾಗಿದೆ’ ಎಂದರು.</p>.<p>ಬಿಜೆಪಿ ಮುಖಂಡರಾದ ಎಸ್.ಎನ್.ರಾಜಣ್ಣ, ದಿಬ್ಬೂರು ಜಯಣ್ಣ, ಸತೀಶ್ ಕಡತನಮಲೆ, ಚೊಕ್ಕನಹಳ್ಳಿ ವೆಂಕಟೇಶ್, ಅಲೋಕ್ ವಿಶ್ವನಾಥ್, ಡಿ.ಜಿ.ಅಪ್ಪಯಣ್ಣ, ಈಶ್ವರ್, ಎಂ.ಮಂಜುನಾಥ್, ಎಂ.ಮುನಿರಾಜು, ಪವನ್ಕುಮಾರ್.ವಿ, ಮಧುಸೂದನ್, ಮುರಾರಿರಾಮು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: </strong>ಬಿಜೆಪಿ ನಗರಮಂಡಲ ಹಾಗೂ ಸಂಘಪರಿವಾರದ ಸಹಯೋಗದೊಂದಿಗೆ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ 142ನೇ ಜಯಂತ್ಯುತ್ಸವವನ್ನು ಉಪನಗರದಲ್ಲಿ ಬುಧವಾರ ಆಚರಿಸಲಾಯಿತು. </p>.<p>ವೀರಸಾವರ್ಕರ್ ಅವರ ಭಾವಚಿತ್ರವನ್ನು ರಥದಲ್ಲಿಟ್ಟು ಪೂಜೆ ನೆರವೇರಿದ ಬಳಿಕ ಜ್ಞಾನಜ್ಯೋತಿ ಕಾಲೇಜಿನಿಂದ ಆರಂಭವಾದ ಮೆರವಣಿಗೆಯು, ಚಿಕ್ಕಬೊಮ್ಮಸಂದ್ರ ಕ್ರಾಸ್ ಹಾಗೂ ಮದರ್ ಡೈರಿ ಕ್ರಾಸ್ ಮೂಲಕ ವೀರ ಸಾವರ್ಕರ್ ಮೇಲ್ಸೇತುವೆಯವರೆಗೆ ಸಾಗಿತು. </p>.<p>ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ಬಾಲ್ಯದಲ್ಲಿಯೇ ಬಾಲಗಂಗಾಧರ ತಿಲಕ್ ಅವರ ಪ್ರೇರಣೆಯಿಂದ ಸ್ವಾತಂತ್ರ್ಯ ಹೋರಾಟದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಸಾವರ್ಕರ್ ಅವರು, ತಮ್ಮ ಕ್ರಾಂತಿಕಾರಿ ಹೋರಾಟದ ಮೂಲಕ ಬ್ರಿಟಿಷರನ್ನು ದೇಶದಿಂದ ತೊಲಗಿಸಲು ಮಾಡಿದ್ದ ಸಂಕಲ್ಪ ಸದಾ ಸ್ಫೂರ್ತಿಯಾಗಿದೆ’ ಎಂದರು.</p>.<p>ಬಿಜೆಪಿ ಮುಖಂಡರಾದ ಎಸ್.ಎನ್.ರಾಜಣ್ಣ, ದಿಬ್ಬೂರು ಜಯಣ್ಣ, ಸತೀಶ್ ಕಡತನಮಲೆ, ಚೊಕ್ಕನಹಳ್ಳಿ ವೆಂಕಟೇಶ್, ಅಲೋಕ್ ವಿಶ್ವನಾಥ್, ಡಿ.ಜಿ.ಅಪ್ಪಯಣ್ಣ, ಈಶ್ವರ್, ಎಂ.ಮಂಜುನಾಥ್, ಎಂ.ಮುನಿರಾಜು, ಪವನ್ಕುಮಾರ್.ವಿ, ಮಧುಸೂದನ್, ಮುರಾರಿರಾಮು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>