<p>ರಾಜರಾಜೇಶ್ವರಿನಗರ: ಇತಿಹಾಸ ಪ್ರಸಿದ್ಧ ಕನ್ನಲ್ಲಿಯಲ್ಲಿ ಶ್ರೀ ವೀರಭದ್ರಸ್ವಾಮಿ ದೇವರ ಬ್ರಹ್ಮರಥೋತ್ಸವ, ಗ್ರಾಮೀಣ ಸೊಗಡಿನ ಸಾಂಸ್ಕೃತಿಕ ಉತ್ಸವ, ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು.</p>.<p>ಮಾಗಡಿ ಮುಖ್ಯರಸ್ತೆಯ ಕನ್ನಲ್ಲಿಯಲ್ಲಿ ನಡೆದ ಬ್ರಹ್ಮರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರು, ರಥೋತ್ಸವಕ್ಕೆ ಬಾಳೆಹಣ್ಣು-ದವನ ಎಸೆಯುವ ಮೂಲಕ ಭಕ್ತಿಭಾವ ಮೆರೆದರು. </p>.<p>ವೀರಭದ್ರಸ್ವಾಮಿ ದೇವರನ್ನು ಹೊತ್ತ ರಥವನ್ನು ಭಕ್ತರು ಎಳೆದು ಧನ್ಯತಾ ಭಾವ ತೋರಿದರು. ವೀರಭದ್ರನ ಕುಣಿತ, ಡೊಳ್ಳು ಕುಣಿತ, ತಮಟೆ, ನಗಾರಿ, ವಾದ್ಯಮೇಳದೊಂದಿಗೆ ನಡೆದ ಜನಪದ ಉತ್ಸವದಲ್ಲಿ ವಯೋ ಭೇದವಿಲ್ಲದೆ ಎಲ್ಲರೂ ಕುಣಿದು ಕುಪ್ಪಳಿಸಿದರು. ರಥೋತ್ಸವಕ್ಕೂ ಮುನ್ನ ದೇವಸ್ಥಾನದಲ್ಲಿ ಹೋಮ-ಹವನ, ವಿಶೇಷ ಪೂಜೆಗಳು ನೆರವೇರಿದವು.</p>.<p>ಕನ್ನಲ್ಲಿ ವೀರಭದ್ರಸ್ವಾಮಿ ದೇವಸ್ಥಾನದ ದಾಸೋಹ ಸಮಿತಿ ಅಧ್ಯಕ್ಷ ಶಾಂತರಾಜು ಮಾತನಾಡಿ, ‘ರಾಜ-ಮಹಾರಾಜರ ಕಾಲದಿಂದಲೂ ಜಾತ್ರಾ ಮಹೋತ್ಸವ ನಡೆಯುತ್ತಿದೆ. ದೇವಸ್ಥಾನ ಆಡಳಿತ ಮಂಡಳಿ, ಗ್ರಾಮಸ್ಥರು ಸೇರಿ ಉತ್ಸವ, ರಥೋತ್ಸವ ನಡೆಸುತ್ತಿದ್ದಾರೆ‘ ಎಂದು ತಿಳಿಸಿದರು.</p>.<p>ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ ಅವರ ನೇತೃತ್ವದಲ್ಲಿ ಅಲ್ಲಮಪ್ರಭು ಕಲಾ ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಹಾಸ್ಯಕಲಾವಿದ ತುಕಾಲಿ ಸಂತೋಷ್ ತಂಡದವರಿಂದ ಹಾಸ್ಯ ನಾಟಕ ನಡೆಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜರಾಜೇಶ್ವರಿನಗರ: ಇತಿಹಾಸ ಪ್ರಸಿದ್ಧ ಕನ್ನಲ್ಲಿಯಲ್ಲಿ ಶ್ರೀ ವೀರಭದ್ರಸ್ವಾಮಿ ದೇವರ ಬ್ರಹ್ಮರಥೋತ್ಸವ, ಗ್ರಾಮೀಣ ಸೊಗಡಿನ ಸಾಂಸ್ಕೃತಿಕ ಉತ್ಸವ, ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು.</p>.<p>ಮಾಗಡಿ ಮುಖ್ಯರಸ್ತೆಯ ಕನ್ನಲ್ಲಿಯಲ್ಲಿ ನಡೆದ ಬ್ರಹ್ಮರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರು, ರಥೋತ್ಸವಕ್ಕೆ ಬಾಳೆಹಣ್ಣು-ದವನ ಎಸೆಯುವ ಮೂಲಕ ಭಕ್ತಿಭಾವ ಮೆರೆದರು. </p>.<p>ವೀರಭದ್ರಸ್ವಾಮಿ ದೇವರನ್ನು ಹೊತ್ತ ರಥವನ್ನು ಭಕ್ತರು ಎಳೆದು ಧನ್ಯತಾ ಭಾವ ತೋರಿದರು. ವೀರಭದ್ರನ ಕುಣಿತ, ಡೊಳ್ಳು ಕುಣಿತ, ತಮಟೆ, ನಗಾರಿ, ವಾದ್ಯಮೇಳದೊಂದಿಗೆ ನಡೆದ ಜನಪದ ಉತ್ಸವದಲ್ಲಿ ವಯೋ ಭೇದವಿಲ್ಲದೆ ಎಲ್ಲರೂ ಕುಣಿದು ಕುಪ್ಪಳಿಸಿದರು. ರಥೋತ್ಸವಕ್ಕೂ ಮುನ್ನ ದೇವಸ್ಥಾನದಲ್ಲಿ ಹೋಮ-ಹವನ, ವಿಶೇಷ ಪೂಜೆಗಳು ನೆರವೇರಿದವು.</p>.<p>ಕನ್ನಲ್ಲಿ ವೀರಭದ್ರಸ್ವಾಮಿ ದೇವಸ್ಥಾನದ ದಾಸೋಹ ಸಮಿತಿ ಅಧ್ಯಕ್ಷ ಶಾಂತರಾಜು ಮಾತನಾಡಿ, ‘ರಾಜ-ಮಹಾರಾಜರ ಕಾಲದಿಂದಲೂ ಜಾತ್ರಾ ಮಹೋತ್ಸವ ನಡೆಯುತ್ತಿದೆ. ದೇವಸ್ಥಾನ ಆಡಳಿತ ಮಂಡಳಿ, ಗ್ರಾಮಸ್ಥರು ಸೇರಿ ಉತ್ಸವ, ರಥೋತ್ಸವ ನಡೆಸುತ್ತಿದ್ದಾರೆ‘ ಎಂದು ತಿಳಿಸಿದರು.</p>.<p>ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ ಅವರ ನೇತೃತ್ವದಲ್ಲಿ ಅಲ್ಲಮಪ್ರಭು ಕಲಾ ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಹಾಸ್ಯಕಲಾವಿದ ತುಕಾಲಿ ಸಂತೋಷ್ ತಂಡದವರಿಂದ ಹಾಸ್ಯ ನಾಟಕ ನಡೆಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>