ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜರಾಜೇಶ್ವರಿನಗರ: ಕನ್ನಲ್ಲಿಯಲ್ಲಿ ವಿಜೃಂಭಣೆಯ ವೀರಭದ್ರಸ್ವಾಮಿ ರಥೋತ್ಸವ

Published 1 ಮೇ 2024, 16:02 IST
Last Updated 1 ಮೇ 2024, 16:02 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: ಇತಿಹಾಸ ಪ್ರಸಿದ್ಧ ಕನ್ನಲ್ಲಿಯಲ್ಲಿ ಶ್ರೀ ವೀರಭದ್ರಸ್ವಾಮಿ ದೇವರ ಬ್ರಹ್ಮರಥೋತ್ಸವ, ಗ್ರಾಮೀಣ ಸೊಗಡಿನ ಸಾಂಸ್ಕೃತಿಕ ಉತ್ಸವ, ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು.

ಮಾಗಡಿ ಮುಖ್ಯರಸ್ತೆಯ ಕನ್ನಲ್ಲಿಯಲ್ಲಿ ನಡೆದ ಬ್ರಹ್ಮರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರು, ರಥೋತ್ಸವಕ್ಕೆ ಬಾಳೆಹಣ್ಣು-ದವನ ಎಸೆಯುವ ಮೂಲಕ ಭಕ್ತಿಭಾವ ಮೆರೆದರು. ‌

ವೀರಭದ್ರಸ್ವಾಮಿ ದೇವರನ್ನು ಹೊತ್ತ ರಥವನ್ನು ಭಕ್ತರು ಎಳೆದು ಧನ್ಯತಾ ಭಾವ ತೋರಿದರು. ವೀರಭದ್ರನ ಕುಣಿತ, ಡೊಳ್ಳು ಕುಣಿತ, ತಮಟೆ, ನಗಾರಿ, ವಾದ್ಯಮೇಳದೊಂದಿಗೆ ನಡೆದ ಜನಪದ ಉತ್ಸವದಲ್ಲಿ ವಯೋ ಭೇದವಿಲ್ಲದೆ ಎಲ್ಲರೂ ಕುಣಿದು ಕುಪ್ಪಳಿಸಿದರು. ರಥೋತ್ಸವಕ್ಕೂ ಮುನ್ನ ದೇವಸ್ಥಾನದಲ್ಲಿ ಹೋಮ-ಹವನ, ವಿಶೇಷ ಪೂಜೆಗಳು ನೆರವೇರಿದವು.

ಕನ್ನಲ್ಲಿ ವೀರಭದ್ರಸ್ವಾಮಿ ದೇವಸ್ಥಾನದ ದಾಸೋಹ ಸಮಿತಿ ಅಧ್ಯಕ್ಷ ಶಾಂತರಾಜು ಮಾತನಾಡಿ, ‘ರಾಜ-ಮಹಾರಾಜರ ಕಾಲದಿಂದಲೂ ಜಾತ್ರಾ ಮಹೋತ್ಸವ ನಡೆಯುತ್ತಿದೆ. ದೇವಸ್ಥಾನ ಆಡಳಿತ ಮಂಡಳಿ, ಗ್ರಾಮಸ್ಥರು ಸೇರಿ ಉತ್ಸವ, ರಥೋತ್ಸವ ನಡೆಸುತ್ತಿದ್ದಾರೆ‘ ಎಂದು ತಿಳಿಸಿದರು.

ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ  ಕೆ.ವಿ.ನಾಗರಾಜಮೂರ್ತಿ ಅವರ ನೇತೃತ್ವದಲ್ಲಿ ಅಲ್ಲಮಪ್ರಭು ಕಲಾ ಶಾಲಾ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಹಾಸ್ಯಕಲಾವಿದ ತುಕಾಲಿ ಸಂತೋಷ್ ತಂಡದವರಿಂದ ಹಾಸ್ಯ ನಾಟಕ ನಡೆಯಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT