‘ಪಾಲಾರ್ನಲ್ಲಿ 1993ರಲ್ಲಿ ವೀರಪ್ಪನ್ ಹಾಗೂ ಆತನ ಸಹಚರರು ನಡೆಸಿದ್ದ ಬಾಂಬ್ ಸ್ಫೋಟದಲ್ಲಿ ವಿಶೇಷ ಕಾರ್ಯಪಡೆಯ ಅಧಿಕಾರಿ ಗೋಪಾಲಕೃಷ್ಣನ್ ಸೇರಿದಂತೆ 22 ಮಂದಿ ಮೃತಪಟ್ಟಿದ್ದರು. ಇದೇ ಪ್ರಕರಣದಲ್ಲಿ ಮೀಸೆಕಾರ್ ಮಾದಯ್ಯನನ್ನು ಬಂಧಿಸಲಾಗಿತ್ತು. ಈತನಿಗೆ ಗಲ್ಲು ಶಿಕ್ಷೆಯಾಗಿತ್ತು. ಇದನ್ನು ಪ್ರಶ್ನಿಸಿ ಮಾದಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಜೀವಾವಧಿ ಶಿಕ್ಷೆಯಾಗಿ ಮಾರ್ಪಡಿಸಿತ್ತು’ ಎಂದು ಹೇಳಿವೆ.