ಮಹಾಪ್ರಧಾನ ಕಾರ್ಯದರ್ಶಿ ಈಶ್ವರ ಬಿ. ಖಂಡ್ರೆ ಮಾತನಾಡಿ, ‘ಕರ್ನಾಟಕ ಶಿಕ್ಷಣದಲ್ಲಿ ಮುಂದೆ ಇರಲು ವೀರಶೈವ ಲಿಂಗಾಯತ ಮಠಗಳು ಕಾರಣ. ನಮ್ಮ ಮಠಗಳು ಜಾತಿ, ಧರ್ಮ ನೋಡದೇ ಎಲ್ಲರಿಗೂ ಶಿಕ್ಷಣ ನೀಡುತ್ತಾ ಬಂದಿವೆ. ನಮ್ಮ ಸಮಾಜ ಒಡೆದರೆ ಕರ್ನಾಟಕ ಚೂರಾಗುತ್ತದೆ. ನಾವು ಒಂದಾಗಿದ್ದರೆ, ರಾಜ್ಯ ಅಭಿವೃದ್ಧಿಯಾಗುತ್ತದೆ’ ಎಂದು ತಿಳಿಸಿದರು.