ಶಾಸಕ ಶಾಮನೂರು ಶಿವಶಂಕರಪ್ಪ, ‘ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದ ಹೆಸರಿನಲ್ಲಿ ಅಲ್ಪ ಮೊತ್ತ ನೀಡಲಾಗುವುದು. ಆದರೆ, ಅದು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಷ್ಟರಮಟ್ಟಿಗೆ ಸಹಕಾರಿಯಾಗುವುದಿಲ್ಲ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚ ಹಾಗೂ ಪೂರ್ಣ ಶುಲ್ಕ ಭರಿಸುವ ವ್ಯವಸ್ಥೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.