<p><strong>ಬೆಂಗಳೂರು:</strong> ಮಳೆ ಕೊರತೆಯಿಂದಾಗಿ ಸೊಪ್ಪು, ತರಕಾರಿ ಬೆಳೆಯುವ ಪ್ರಮಾಣ ಕಡಿಮೆಯಾಗಿದೆ. ಅಲ್ಲದೆ ಸರಿಯಾದ ಇಳುವರಿ ಬಾರದ ಕಾರಣ ಮಾರುಕಟ್ಟೆಗೆ ಪೂರೈಕೆಯಾಗುವ ಪ್ರಮಾಣ ಕಡಿಮೆಯಾಗಿದೆ. ಕೆಲ ತರಕಾರಿ, ಸೊಪ್ಪಿನ ದರ ಹೆಚ್ಚಾಗಿದ್ದು, ಅದರಲ್ಲೂ ಬೀನ್ಸ್ ದರ ₹165ರ ಗಡಿ ದಾಟಿದೆ. ಕೊತ್ತಂಬರಿ ಒಂದು ಕಂತೆಗೆ ₹40ರಂತೆ ಮಾರಾಟ ಆಗುತ್ತಿದೆ. </p>.<p>ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಿದ್ದರೂ, ಬಿಸಿಲಿನ ತಾಪ ಕಡಿಮೆಯಾಗಿಲ್ಲ. ನೀರಿನ ಕೊರತೆ ಮುಂದುವರಿದಿದೆ. ಮಾರುಕಟ್ಟೆಯಲ್ಲಿನ ಬೇಡಿಕೆಗೆ ತಕ್ಕಂತೆ ತರಕಾರಿ ಪೂರೈಕೆಯಾಗುತ್ತಿಲ್ಲ. ಜೊತೆಗೆ, ಬೇಡಿಕೆಯೂ ಹೆಚ್ಚಾದ ಕಾರಣ ಸಹಜವಾಗಿಯೇ ಕೆಲ ತರಕಾರಿಗಳ ಬೆಲೆ ಏರಿಕೆಯಾಗಿದೆ.</p>.<p>‘ಚಿಕ್ಕಬಳ್ಳಾಪುರ, ಕೋಲಾರ, ಕುಣಿಗಲ್, ತುಮಕೂರು ಮತ್ತು ತಮಿಳುನಾಡಿನಿಂದ ಮಾರುಕಟ್ಟೆಗೆ ಬರುತ್ತಿದ್ದ ಬೀನ್ಸ್ ಪ್ರಮಾಣ ಕಡಿಮೆಯಾಗಿದೆ. ಇದರಿಂದ ಬೆಲೆಯೂ ಹೆಚ್ಚಾಗಿದೆ. ಗ್ರಾಹಕರಿಗೆ ಮತ್ತು ಮದುವೆ ಮತ್ತಿತರ ಸಮಾರಂಭ ಆಯೋಜಿಸುವವರಿಗೆ ಸ್ವಲ್ಪ ತೊಂದರೆಯಾಗಿದೆ. ಮತ್ತೊಂದೆಡೆ ಸಮರ್ಪಕ ಇಳುವರಿ ಬಾರದ ಕಾರಣ ರೈತರಿಗೂ ಹೆಚ್ಚಿನ ಲಾಭವಾಗುತ್ತಿಲ್ಲ’ ಎನ್ನುತ್ತಾರೆ ನಗರದ ತರಕಾರಿ ವ್ಯಾಪಾರಿಗಳು.</p>.<p>ಕಳೆದ ವಾರ ಕೆ.ಜಿಗೆ ₹60ರಂತೆ ಮಾರಾಟವಾಗುತ್ತಿದ್ದ ಬೀನ್ಸ್ ಈಗ ₹165ರ ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಹೊರೆಯಾಗಿದೆ. ಪ್ರತಿ ಕೆ.ಜಿ ಕ್ಯಾರೆಟ್ ಹಾಗೂ ಹಿರೇಕಾಯಿ ₹70, ಕ್ಯಾಪ್ಸಿಕಮ್ ₹60, ಮೆಣಸಿನಕಾಯಿ ₹85, ಹೂಕೋಸು ₹50, ಬದನೆಕಾಯಿ ₹40ರಂತೆ ಮಾರಾಟವಾಗುತ್ತಿದೆ.</p>.<p>ಕಳೆದ ವಾರದಂತೆ ಅಗತ್ಯ ಪ್ರಮಾಣದ ತರಕಾರಿಗಳು ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ. ಸರಿಯಾಗಿ ಮಳೆಯಾಗುವವರೆಗೂ ತರಕಾರಿ ದರ ಇಳಿಯುವ ಸಾಧ್ಯತೆ ಕಡಿಮೆ’ ಎನ್ನುತ್ತಾರೆ ಗಾಯತ್ರಿನಗರದ ತರಕಾರಿ ವ್ಯಾಪಾರಿಗಳಾದ ಸಾದಿಕ್, ಸಂತೋಷ್.</p>.<p>‘ಮಳೆ ಕೊರತೆಯಿಂದಾಗಿ ತರಕಾರಿ ಬೆಳೆಯುವ ರೈತರ ಸಂಖ್ಯೆ ಕಡಿಮೆಯಾಗಿದೆ. ಆದ್ದರಿಂದ, ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ತರಕಾರಿ ಪೂರೈಕೆ ಆಗುತ್ತಿಲ್ಲ. ತರಕಾರಿ ಮತ್ತು ಸೊಪ್ಪಿನ ಬೆಲೆ ಏರಿಕೆಗೆ ಇದೂ ಒಂದು ಕಾರಣ. ಗ್ರಾಹಕರು ತರಕಾರಿ ದರ ಕೇಳಿ ಖರೀದಿಸಲು ಹಿಂದೇಟು ಹಾಕುವ ಪರಿಸ್ಥಿತಿ ಬಂದಿದೆ’ ಎಂದರು. </p>.<p>ಸೊಪ್ಪಿನ ದರ ಹೆಚ್ಚಳ: ಕಳೆದ ವಾರ ಒಂದು ಕಂತೆ ಕೊತ್ತಂಬರಿ ₹20ರಂತೆ ಮಾರಾಟವಾಗುತ್ತಿತ್ತು. ಈಗ ₹40ಕ್ಕೆ ಏರಿದೆ. ಮೆಂತೆ ₹30, ಸಬ್ಬಸಿಗೆ ₹30ರಂತೆ ಮಾರಾಟವಾಗುತ್ತಿದೆ.</p>.<div><blockquote>ಎಲ್ಪಿಜಿ ಸಿಲಿಂಡರ್ ದರ ಹಾಗೂ ದಿನಬಳಕೆ ವಸ್ತುಗಳ ಏರಿಕೆಯಿಂದ ಕಂಗೆಟ್ಟಿದ್ದ ಸಾರ್ವಜನಿಕರಿಗೆ ಈಗ ತರಕಾರಿ ದರ ಹೆಚ್ಚಳವು ಗಾಯದ ಮೇಲೆ ಬರೆ ಎಳೆದಂತಾಗಿದೆ</blockquote><span class="attribution">ಗೀತಾ ಗೃಹಿಣಿ ಗಾಯತ್ರಿನಗರ</span></div>.<h2>‘ಎಳನೀರು ಕಲ್ಲಂಗಡಿಗೆ ಹೆಚ್ಚಿದ ಬೇಡಿಕೆ’ </h2>.<p>ನಗರದಲ್ಲಿ ತಾಪಮಾನ ಹೆಚ್ಚಾಗಿರುವ ಕಾರಣ ಸಾರ್ವಜನಿಕರು ತಂಪು ಪಾನೀಯಗಳ ಮೊರೆಹೋಗಿದ್ದಾರೆ. ಇದರಿಂದ ಕಲ್ಲಂಗಡಿ ಹಣ್ಣಿನ ಬೆಲೆ ಹೆಚ್ಚಾಗಿದೆ. ಕಳೆದವಾರ ಕೆ.ಜಿಗೆ ₹30ಕ್ಕೆ ಮಾರಾಟವಾಗುತ್ತಿದ್ದ ಕಲ್ಲಂಗಡಿ ಪ್ರಸ್ತುತ ₹40ರಂತೆ ಮಾರಾಟವಾಗುತ್ತಿದೆ. ದಾಹ ತಣಿಸುವ ಹಣ್ಣಿನ ರಸಗಳ ಪೈಕಿ ಕಲ್ಲಂಗಡಿ ಗ್ರಾಹಕರ ಮೊದಲ ಆಯ್ಕೆಯಾಗಿದೆ. ನೈಸರ್ಗಿಕ ಹಾಗೂ ಆರೋಗ್ಯಕರ ಪೇಯವಾಗಿರುವ ಎಳನೀರಿಗೆ ಭಾರಿ ಬೇಡಿಕೆ ಬಂದಿದೆ. ಒಂದು ಎಳನೀರು ₹70ರಂತೆ ಮಾರಾಟವಾಗುತ್ತಿದೆ. ಮಂಡ್ಯ ತುಮಕೂರು ಸೇರಿದಂತೆ ವಿವಿಧ ಪ್ರದೇಶಗಳಿಂದ ನಗರಕ್ಕೆ ಎಳನೀರು ಪೂರೈಕೆ ಆಗುತ್ತಿದೆ. ಬೇಸಿಲು ಹೆಚ್ಚಾಗಿರುವ ಕಾರಣ ಬೆಲೆಯೂ ಏರಿಕೆಯಾಗಿದೆ ಎಂದು ಗಾಯತ್ರಿನಗರದ ಎಳನೀರು ವ್ಯಾಪಾರಿಯೊಬ್ಬರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಳೆ ಕೊರತೆಯಿಂದಾಗಿ ಸೊಪ್ಪು, ತರಕಾರಿ ಬೆಳೆಯುವ ಪ್ರಮಾಣ ಕಡಿಮೆಯಾಗಿದೆ. ಅಲ್ಲದೆ ಸರಿಯಾದ ಇಳುವರಿ ಬಾರದ ಕಾರಣ ಮಾರುಕಟ್ಟೆಗೆ ಪೂರೈಕೆಯಾಗುವ ಪ್ರಮಾಣ ಕಡಿಮೆಯಾಗಿದೆ. ಕೆಲ ತರಕಾರಿ, ಸೊಪ್ಪಿನ ದರ ಹೆಚ್ಚಾಗಿದ್ದು, ಅದರಲ್ಲೂ ಬೀನ್ಸ್ ದರ ₹165ರ ಗಡಿ ದಾಟಿದೆ. ಕೊತ್ತಂಬರಿ ಒಂದು ಕಂತೆಗೆ ₹40ರಂತೆ ಮಾರಾಟ ಆಗುತ್ತಿದೆ. </p>.<p>ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾಗಿದ್ದರೂ, ಬಿಸಿಲಿನ ತಾಪ ಕಡಿಮೆಯಾಗಿಲ್ಲ. ನೀರಿನ ಕೊರತೆ ಮುಂದುವರಿದಿದೆ. ಮಾರುಕಟ್ಟೆಯಲ್ಲಿನ ಬೇಡಿಕೆಗೆ ತಕ್ಕಂತೆ ತರಕಾರಿ ಪೂರೈಕೆಯಾಗುತ್ತಿಲ್ಲ. ಜೊತೆಗೆ, ಬೇಡಿಕೆಯೂ ಹೆಚ್ಚಾದ ಕಾರಣ ಸಹಜವಾಗಿಯೇ ಕೆಲ ತರಕಾರಿಗಳ ಬೆಲೆ ಏರಿಕೆಯಾಗಿದೆ.</p>.<p>‘ಚಿಕ್ಕಬಳ್ಳಾಪುರ, ಕೋಲಾರ, ಕುಣಿಗಲ್, ತುಮಕೂರು ಮತ್ತು ತಮಿಳುನಾಡಿನಿಂದ ಮಾರುಕಟ್ಟೆಗೆ ಬರುತ್ತಿದ್ದ ಬೀನ್ಸ್ ಪ್ರಮಾಣ ಕಡಿಮೆಯಾಗಿದೆ. ಇದರಿಂದ ಬೆಲೆಯೂ ಹೆಚ್ಚಾಗಿದೆ. ಗ್ರಾಹಕರಿಗೆ ಮತ್ತು ಮದುವೆ ಮತ್ತಿತರ ಸಮಾರಂಭ ಆಯೋಜಿಸುವವರಿಗೆ ಸ್ವಲ್ಪ ತೊಂದರೆಯಾಗಿದೆ. ಮತ್ತೊಂದೆಡೆ ಸಮರ್ಪಕ ಇಳುವರಿ ಬಾರದ ಕಾರಣ ರೈತರಿಗೂ ಹೆಚ್ಚಿನ ಲಾಭವಾಗುತ್ತಿಲ್ಲ’ ಎನ್ನುತ್ತಾರೆ ನಗರದ ತರಕಾರಿ ವ್ಯಾಪಾರಿಗಳು.</p>.<p>ಕಳೆದ ವಾರ ಕೆ.ಜಿಗೆ ₹60ರಂತೆ ಮಾರಾಟವಾಗುತ್ತಿದ್ದ ಬೀನ್ಸ್ ಈಗ ₹165ರ ಗಡಿ ದಾಟಿದ್ದು, ಗ್ರಾಹಕರ ಜೇಬಿಗೆ ಹೊರೆಯಾಗಿದೆ. ಪ್ರತಿ ಕೆ.ಜಿ ಕ್ಯಾರೆಟ್ ಹಾಗೂ ಹಿರೇಕಾಯಿ ₹70, ಕ್ಯಾಪ್ಸಿಕಮ್ ₹60, ಮೆಣಸಿನಕಾಯಿ ₹85, ಹೂಕೋಸು ₹50, ಬದನೆಕಾಯಿ ₹40ರಂತೆ ಮಾರಾಟವಾಗುತ್ತಿದೆ.</p>.<p>ಕಳೆದ ವಾರದಂತೆ ಅಗತ್ಯ ಪ್ರಮಾಣದ ತರಕಾರಿಗಳು ಮಾರುಕಟ್ಟೆಗೆ ಪೂರೈಕೆಯಾಗುತ್ತಿಲ್ಲ. ಸರಿಯಾಗಿ ಮಳೆಯಾಗುವವರೆಗೂ ತರಕಾರಿ ದರ ಇಳಿಯುವ ಸಾಧ್ಯತೆ ಕಡಿಮೆ’ ಎನ್ನುತ್ತಾರೆ ಗಾಯತ್ರಿನಗರದ ತರಕಾರಿ ವ್ಯಾಪಾರಿಗಳಾದ ಸಾದಿಕ್, ಸಂತೋಷ್.</p>.<p>‘ಮಳೆ ಕೊರತೆಯಿಂದಾಗಿ ತರಕಾರಿ ಬೆಳೆಯುವ ರೈತರ ಸಂಖ್ಯೆ ಕಡಿಮೆಯಾಗಿದೆ. ಆದ್ದರಿಂದ, ಮಾರುಕಟ್ಟೆಯ ಬೇಡಿಕೆಗೆ ತಕ್ಕಂತೆ ತರಕಾರಿ ಪೂರೈಕೆ ಆಗುತ್ತಿಲ್ಲ. ತರಕಾರಿ ಮತ್ತು ಸೊಪ್ಪಿನ ಬೆಲೆ ಏರಿಕೆಗೆ ಇದೂ ಒಂದು ಕಾರಣ. ಗ್ರಾಹಕರು ತರಕಾರಿ ದರ ಕೇಳಿ ಖರೀದಿಸಲು ಹಿಂದೇಟು ಹಾಕುವ ಪರಿಸ್ಥಿತಿ ಬಂದಿದೆ’ ಎಂದರು. </p>.<p>ಸೊಪ್ಪಿನ ದರ ಹೆಚ್ಚಳ: ಕಳೆದ ವಾರ ಒಂದು ಕಂತೆ ಕೊತ್ತಂಬರಿ ₹20ರಂತೆ ಮಾರಾಟವಾಗುತ್ತಿತ್ತು. ಈಗ ₹40ಕ್ಕೆ ಏರಿದೆ. ಮೆಂತೆ ₹30, ಸಬ್ಬಸಿಗೆ ₹30ರಂತೆ ಮಾರಾಟವಾಗುತ್ತಿದೆ.</p>.<div><blockquote>ಎಲ್ಪಿಜಿ ಸಿಲಿಂಡರ್ ದರ ಹಾಗೂ ದಿನಬಳಕೆ ವಸ್ತುಗಳ ಏರಿಕೆಯಿಂದ ಕಂಗೆಟ್ಟಿದ್ದ ಸಾರ್ವಜನಿಕರಿಗೆ ಈಗ ತರಕಾರಿ ದರ ಹೆಚ್ಚಳವು ಗಾಯದ ಮೇಲೆ ಬರೆ ಎಳೆದಂತಾಗಿದೆ</blockquote><span class="attribution">ಗೀತಾ ಗೃಹಿಣಿ ಗಾಯತ್ರಿನಗರ</span></div>.<h2>‘ಎಳನೀರು ಕಲ್ಲಂಗಡಿಗೆ ಹೆಚ್ಚಿದ ಬೇಡಿಕೆ’ </h2>.<p>ನಗರದಲ್ಲಿ ತಾಪಮಾನ ಹೆಚ್ಚಾಗಿರುವ ಕಾರಣ ಸಾರ್ವಜನಿಕರು ತಂಪು ಪಾನೀಯಗಳ ಮೊರೆಹೋಗಿದ್ದಾರೆ. ಇದರಿಂದ ಕಲ್ಲಂಗಡಿ ಹಣ್ಣಿನ ಬೆಲೆ ಹೆಚ್ಚಾಗಿದೆ. ಕಳೆದವಾರ ಕೆ.ಜಿಗೆ ₹30ಕ್ಕೆ ಮಾರಾಟವಾಗುತ್ತಿದ್ದ ಕಲ್ಲಂಗಡಿ ಪ್ರಸ್ತುತ ₹40ರಂತೆ ಮಾರಾಟವಾಗುತ್ತಿದೆ. ದಾಹ ತಣಿಸುವ ಹಣ್ಣಿನ ರಸಗಳ ಪೈಕಿ ಕಲ್ಲಂಗಡಿ ಗ್ರಾಹಕರ ಮೊದಲ ಆಯ್ಕೆಯಾಗಿದೆ. ನೈಸರ್ಗಿಕ ಹಾಗೂ ಆರೋಗ್ಯಕರ ಪೇಯವಾಗಿರುವ ಎಳನೀರಿಗೆ ಭಾರಿ ಬೇಡಿಕೆ ಬಂದಿದೆ. ಒಂದು ಎಳನೀರು ₹70ರಂತೆ ಮಾರಾಟವಾಗುತ್ತಿದೆ. ಮಂಡ್ಯ ತುಮಕೂರು ಸೇರಿದಂತೆ ವಿವಿಧ ಪ್ರದೇಶಗಳಿಂದ ನಗರಕ್ಕೆ ಎಳನೀರು ಪೂರೈಕೆ ಆಗುತ್ತಿದೆ. ಬೇಸಿಲು ಹೆಚ್ಚಾಗಿರುವ ಕಾರಣ ಬೆಲೆಯೂ ಏರಿಕೆಯಾಗಿದೆ ಎಂದು ಗಾಯತ್ರಿನಗರದ ಎಳನೀರು ವ್ಯಾಪಾರಿಯೊಬ್ಬರು ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>