<p><strong>ಬೆಂಗಳೂರು:</strong> ಇತ್ತೀಚಿಗೆ ಸುರಿದ ಸತತ ಮಳೆಗೆ ಸೊಪ್ಪು ಮತ್ತು ತರಕಾರಿ ಬೆಳೆಗಳಿಗೆ ಹಾನಿಯಾಗಿದ್ದು, ಅದರ ಪರಿಣಾಮ ಗ್ರಾಹಕರನ್ನು ಬಾಧಿಸತೊಡಗಿದೆ. ಕೊತ್ತಂಬರಿ ಕಟ್ಟಿಗೆ ₹60ರಂತೆ ಮಾರಾಟವಾಗುತ್ತಿದೆ. ಕೆಲ ತರಕಾರಿ ದರಗಳಲ್ಲಿ ಏರಳಿತವಾಗಿದೆ.</p>.<p>ಕೆಲ ದಿನಗಳ ಹಿಂದೆ ಕೊತ್ತಂಬರಿ ಪ್ರತಿ ಕಟ್ಟಿಗೆ ₹20ರಂತೆ ಮಾರಾಟವಾಗುತ್ತಿತ್ತು. ಮಾರುಕಟ್ಟೆಗೆ ಉತ್ಪನ್ನಗಳ ಆವಕದಲ್ಲಿ ವ್ಯತ್ಯಾಸ ಆಗಿರುವುದು ದಿಢೀರನೇ ಬೆಲೆ ಏರಿಕೆಗೆ ಕಾರಣ ಎಂದು ಎಪಿಎಂಸಿ ವರ್ತಕರು ಮತ್ತು ಕೆ. ಆರ್. ಮಾರ್ಕೆಟ್ ಸೊಪ್ಪುಗಳ ವ್ಯಾಪಾರಿ ಸೊಪ್ಪುಕುಮಾರ್ ತಿಳಿಸಿದರು.</p>.<p><strong>ಸೊಪ್ಪು ತುಟ್ಟಿ: </strong>’ಮಳೆಯ ಕಾರಣಕ್ಕೆ ಸೊಪ್ಪಿನ ಬೆಲೆ ಏರಿಕೆಯಾಗಿದೆ. ಅದರಲ್ಲೂ ನಾಟಿ ಕೊತ್ತಂಬರಿ ಆವಕ ಕಡಿಮೆಯಾಗಿದೆ. ದಪ್ಪನೆಯ ಕಟ್ಟು ₹50–60ವರೆಗೂ ಮಾರಾಟವಾಗುತ್ತಿದೆ. ಸಬ್ಬಸ್ಸಿಗೆ ಪ್ರತಿ ಕಟ್ಟಿಗೆ ₹40ರಂತೆ ಮಾರಾಟವಾಗುತ್ತಿದೆ. ಮೆಂತೆ, ಪಾಲಾಕ್ ದರದಲ್ಲೂ ಏರಿಕೆ ಆಗಿದ್ದು, ಇನ್ನೂ ಕೆಲವು ದಿನ ಈ ಪರಿಸ್ಥಿತಿ ಮುಂದುವರಿಯಲಿದೆ’ ಎಂದರು.</p>.<p>ಬೀಟ್ರೂಟ್, ಮೆಣಸಿನಕಾಯಿ, ಅವರೆಕಾಯಿ ದರಗಳೂ ಕೆ.ಜಿ.ಗೆ ₹50ಕ್ಕಿಂತ ಹೆಚ್ಚಳ ಕಂಡಿವೆ. ಈ ತರಕಾರಿಗಳ ದರ ಕಳೆದ ವಾರ ಕಡಿಮೆ ಇತ್ತು. ಪ್ರತಿ ತರಕಾರಿ ದರ ಕೆ.ಜಿಗೆ ₹20ರಿಂದ ₹30 ಹೆಚ್ಚಳವಾಗಿದೆ.</p>.<p>‘ಪ್ರತಿ ಕೆ.ಜಿ. ಕ್ಯಾರೆಟ್ ₹80, ಪಡವಲಕಾಯಿ ₹80, ಬೀನ್ಸ್ ₹100 ಬಟಾಣಿ ₹120ರಂತೆ ಮಾರಾಟವಾಗುತ್ತಿದೆ. ಟೊಮೊಟೊ, ಬದನೆ, ಆಲೂಗೆಡ್ಡೆ, ಈರುಳ್ಳಿ, ಹಾಗಲಕಾಯಿ ದರಗಳು ಸ್ಥಿರವಾಗಿವೆ. ಟೊಮೆಟೊ ಕೆ.ಜಿ.ಗೆ ₹20ರಿಂದ ₹30ರವರೆಗೆ ಮಾರಾಟವಾಗುತ್ತಿದೆ’ ಎನ್ನುತ್ತಾರೆ ಕೆ.ಆರ್. ಮಾರುಕಟ್ಟೆಯ ತರಕಾರಿ ವ್ಯಾಪಾರಿಗಳಾದ ವೆಂಕಟೇಶ್ ಮತ್ತು ತಬ್ರೇಜ್.</p>.<p>‘ಮೊದಲಿನಂತೆ ಅಗತ್ಯ ಪ್ರಮಾಣದ ತರಕಾರಿಗಳು ಮಾರುಕಟ್ಟೆಗೆ ಪೂರೈಕೆ ಯಾಗಲು ತಿಂಗಳುಗಟ್ಟಲೆ ಸಮಯ ಬೇಕು. ಅಲ್ಲಿಯವರೆಗೆ ದರ ಏರಿಕೆ ತಪ್ಪಿದ್ದಲ್ಲ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇತ್ತೀಚಿಗೆ ಸುರಿದ ಸತತ ಮಳೆಗೆ ಸೊಪ್ಪು ಮತ್ತು ತರಕಾರಿ ಬೆಳೆಗಳಿಗೆ ಹಾನಿಯಾಗಿದ್ದು, ಅದರ ಪರಿಣಾಮ ಗ್ರಾಹಕರನ್ನು ಬಾಧಿಸತೊಡಗಿದೆ. ಕೊತ್ತಂಬರಿ ಕಟ್ಟಿಗೆ ₹60ರಂತೆ ಮಾರಾಟವಾಗುತ್ತಿದೆ. ಕೆಲ ತರಕಾರಿ ದರಗಳಲ್ಲಿ ಏರಳಿತವಾಗಿದೆ.</p>.<p>ಕೆಲ ದಿನಗಳ ಹಿಂದೆ ಕೊತ್ತಂಬರಿ ಪ್ರತಿ ಕಟ್ಟಿಗೆ ₹20ರಂತೆ ಮಾರಾಟವಾಗುತ್ತಿತ್ತು. ಮಾರುಕಟ್ಟೆಗೆ ಉತ್ಪನ್ನಗಳ ಆವಕದಲ್ಲಿ ವ್ಯತ್ಯಾಸ ಆಗಿರುವುದು ದಿಢೀರನೇ ಬೆಲೆ ಏರಿಕೆಗೆ ಕಾರಣ ಎಂದು ಎಪಿಎಂಸಿ ವರ್ತಕರು ಮತ್ತು ಕೆ. ಆರ್. ಮಾರ್ಕೆಟ್ ಸೊಪ್ಪುಗಳ ವ್ಯಾಪಾರಿ ಸೊಪ್ಪುಕುಮಾರ್ ತಿಳಿಸಿದರು.</p>.<p><strong>ಸೊಪ್ಪು ತುಟ್ಟಿ: </strong>’ಮಳೆಯ ಕಾರಣಕ್ಕೆ ಸೊಪ್ಪಿನ ಬೆಲೆ ಏರಿಕೆಯಾಗಿದೆ. ಅದರಲ್ಲೂ ನಾಟಿ ಕೊತ್ತಂಬರಿ ಆವಕ ಕಡಿಮೆಯಾಗಿದೆ. ದಪ್ಪನೆಯ ಕಟ್ಟು ₹50–60ವರೆಗೂ ಮಾರಾಟವಾಗುತ್ತಿದೆ. ಸಬ್ಬಸ್ಸಿಗೆ ಪ್ರತಿ ಕಟ್ಟಿಗೆ ₹40ರಂತೆ ಮಾರಾಟವಾಗುತ್ತಿದೆ. ಮೆಂತೆ, ಪಾಲಾಕ್ ದರದಲ್ಲೂ ಏರಿಕೆ ಆಗಿದ್ದು, ಇನ್ನೂ ಕೆಲವು ದಿನ ಈ ಪರಿಸ್ಥಿತಿ ಮುಂದುವರಿಯಲಿದೆ’ ಎಂದರು.</p>.<p>ಬೀಟ್ರೂಟ್, ಮೆಣಸಿನಕಾಯಿ, ಅವರೆಕಾಯಿ ದರಗಳೂ ಕೆ.ಜಿ.ಗೆ ₹50ಕ್ಕಿಂತ ಹೆಚ್ಚಳ ಕಂಡಿವೆ. ಈ ತರಕಾರಿಗಳ ದರ ಕಳೆದ ವಾರ ಕಡಿಮೆ ಇತ್ತು. ಪ್ರತಿ ತರಕಾರಿ ದರ ಕೆ.ಜಿಗೆ ₹20ರಿಂದ ₹30 ಹೆಚ್ಚಳವಾಗಿದೆ.</p>.<p>‘ಪ್ರತಿ ಕೆ.ಜಿ. ಕ್ಯಾರೆಟ್ ₹80, ಪಡವಲಕಾಯಿ ₹80, ಬೀನ್ಸ್ ₹100 ಬಟಾಣಿ ₹120ರಂತೆ ಮಾರಾಟವಾಗುತ್ತಿದೆ. ಟೊಮೊಟೊ, ಬದನೆ, ಆಲೂಗೆಡ್ಡೆ, ಈರುಳ್ಳಿ, ಹಾಗಲಕಾಯಿ ದರಗಳು ಸ್ಥಿರವಾಗಿವೆ. ಟೊಮೆಟೊ ಕೆ.ಜಿ.ಗೆ ₹20ರಿಂದ ₹30ರವರೆಗೆ ಮಾರಾಟವಾಗುತ್ತಿದೆ’ ಎನ್ನುತ್ತಾರೆ ಕೆ.ಆರ್. ಮಾರುಕಟ್ಟೆಯ ತರಕಾರಿ ವ್ಯಾಪಾರಿಗಳಾದ ವೆಂಕಟೇಶ್ ಮತ್ತು ತಬ್ರೇಜ್.</p>.<p>‘ಮೊದಲಿನಂತೆ ಅಗತ್ಯ ಪ್ರಮಾಣದ ತರಕಾರಿಗಳು ಮಾರುಕಟ್ಟೆಗೆ ಪೂರೈಕೆ ಯಾಗಲು ತಿಂಗಳುಗಟ್ಟಲೆ ಸಮಯ ಬೇಕು. ಅಲ್ಲಿಯವರೆಗೆ ದರ ಏರಿಕೆ ತಪ್ಪಿದ್ದಲ್ಲ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>