<p><strong>ಬೆಂಗಳೂರು: </strong>ಕಬ್ಬನ್ ಉದ್ಯಾನದಲ್ಲಿ ವಾಹನಗಳ ನಿಲುಗಡೆ ಹಾಗೂ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ತೋಟಗಾರಿಕೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಪಾಲಿಕೆ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರಿಗೆ ಕೌನ್ಸಿಲ್ ಸಭೆಯಲ್ಲಿ ಸೂಚಿಸಲಾಯಿತು.</p>.<p>ಉದ್ಯಾನದಲ್ಲಿ ವಾಹನ ಸಂಚಾರದಿಂದ ಹೆಚ್ಚುತ್ತಿರುವ ವಾಯುಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಪಾಲಿಕೆ ಈ ಕ್ರಮಕ್ಕೆ ಮುಂದಾಗಿದೆ. ಲಾಲ್ಬಾಗ್ ಉದ್ಯಾನದ ಮಾದರಿಯಲ್ಲಿ ಕಬ್ಬನ್ ಉದ್ಯಾನದಲ್ಲೂ ವಾಹನ ಸಂಚಾರ ಸಂಪೂರ್ಣವಾಗಿ ನಿಷೇಧಿಸಿ, ವಾಯುವಿಹಾರಿಗಳು, ಸೈಕಲ್ ಹಾಗೂ ವಿದ್ಯುತ್ಚಾಲಿತ ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲು ಯೋಜಿಸಲಾಗಿದೆ.</p>.<p>ಉದ್ಯಾನದಲ್ಲಿ ರಸ್ತೆಯುದ್ದಕ್ಕೂ ವಾಹನಗಳನ್ನು ನಿಲ್ಲಿಸಲಾಗುತ್ತಿತ್ತು. ಇದರಿಂದ ಉದ್ಯಾನದಲ್ಲಿ ಆಗಾಗ ವಾಹನ ದಟ್ಟಣೆಯಾಗಿ ಸಂಚಾರಕ್ಕೂ ಅಡ್ಡಿಯಾಗಿತ್ತು. ಹೀಗಾಗಿ ಉದ್ಯಾನದಲ್ಲಿ ವಾಹನಗಳ ನಿಲುಗಡೆಗೂ ತಡೆ ನೀಡಲು ಪಾಲಿಕೆ ನಿರ್ಣಯಿಸಿದೆ.</p>.<p>'ಭಾನುವಾರ, ಎರಡು ಮತ್ತು ನಾಲ್ಕನೇ ಶನಿವಾರ ಹಾಗೂ ಸರ್ಕಾರಿ ರಜೆ ದಿನಗಳಂದು ಉದ್ಯಾನದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಸಂಪೂರ್ಣವಾಗಿ ವಾಹನ ನಿಷೇಧಿಸುವ ಇಲಾಖೆಯ ಉದ್ದೇಶಕ್ಕೆ ಈಗ ಪಾಲಿಕೆಯೂ ಬೆಂಬಲ ನೀಡಿರುವುದು ಸಂತಸ ತಂದಿದೆ. ವಾಹನಗಳನ್ನು ನಿಷೇಧಿಸುವುದರಿಂದ ಉದ್ಯಾನದ ಹಸಿರು ಸಿರಿಯ ಸಂರಕ್ಷಣೆಯಾಗಲಿದೆ' ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಎಂ.ಜಗದೀಶ್ 'ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಬ್ಬನ್ ಉದ್ಯಾನದಲ್ಲಿ ವಾಹನಗಳ ನಿಲುಗಡೆ ಹಾಗೂ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ತೋಟಗಾರಿಕೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಪಾಲಿಕೆ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರಿಗೆ ಕೌನ್ಸಿಲ್ ಸಭೆಯಲ್ಲಿ ಸೂಚಿಸಲಾಯಿತು.</p>.<p>ಉದ್ಯಾನದಲ್ಲಿ ವಾಹನ ಸಂಚಾರದಿಂದ ಹೆಚ್ಚುತ್ತಿರುವ ವಾಯುಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಪಾಲಿಕೆ ಈ ಕ್ರಮಕ್ಕೆ ಮುಂದಾಗಿದೆ. ಲಾಲ್ಬಾಗ್ ಉದ್ಯಾನದ ಮಾದರಿಯಲ್ಲಿ ಕಬ್ಬನ್ ಉದ್ಯಾನದಲ್ಲೂ ವಾಹನ ಸಂಚಾರ ಸಂಪೂರ್ಣವಾಗಿ ನಿಷೇಧಿಸಿ, ವಾಯುವಿಹಾರಿಗಳು, ಸೈಕಲ್ ಹಾಗೂ ವಿದ್ಯುತ್ಚಾಲಿತ ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲು ಯೋಜಿಸಲಾಗಿದೆ.</p>.<p>ಉದ್ಯಾನದಲ್ಲಿ ರಸ್ತೆಯುದ್ದಕ್ಕೂ ವಾಹನಗಳನ್ನು ನಿಲ್ಲಿಸಲಾಗುತ್ತಿತ್ತು. ಇದರಿಂದ ಉದ್ಯಾನದಲ್ಲಿ ಆಗಾಗ ವಾಹನ ದಟ್ಟಣೆಯಾಗಿ ಸಂಚಾರಕ್ಕೂ ಅಡ್ಡಿಯಾಗಿತ್ತು. ಹೀಗಾಗಿ ಉದ್ಯಾನದಲ್ಲಿ ವಾಹನಗಳ ನಿಲುಗಡೆಗೂ ತಡೆ ನೀಡಲು ಪಾಲಿಕೆ ನಿರ್ಣಯಿಸಿದೆ.</p>.<p>'ಭಾನುವಾರ, ಎರಡು ಮತ್ತು ನಾಲ್ಕನೇ ಶನಿವಾರ ಹಾಗೂ ಸರ್ಕಾರಿ ರಜೆ ದಿನಗಳಂದು ಉದ್ಯಾನದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಸಂಪೂರ್ಣವಾಗಿ ವಾಹನ ನಿಷೇಧಿಸುವ ಇಲಾಖೆಯ ಉದ್ದೇಶಕ್ಕೆ ಈಗ ಪಾಲಿಕೆಯೂ ಬೆಂಬಲ ನೀಡಿರುವುದು ಸಂತಸ ತಂದಿದೆ. ವಾಹನಗಳನ್ನು ನಿಷೇಧಿಸುವುದರಿಂದ ಉದ್ಯಾನದ ಹಸಿರು ಸಿರಿಯ ಸಂರಕ್ಷಣೆಯಾಗಲಿದೆ' ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಎಂ.ಜಗದೀಶ್ 'ಪ್ರಜಾವಾಣಿ'ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>