<p><strong>ಬೆಂಗಳೂರು</strong>: ಮಳೆ ಸುರಿಯುವ ಸಂದರ್ಭದಲ್ಲಿ ಕೆಳಸೇತುವೆಗಳಲ್ಲಿ ವಾಹನ ನಿಲುಗಡೆಯನ್ನು ಸಂಚಾರ ಪೊಲೀಸರು ನಿರ್ಬಂಧಿಸಿದ್ದು, ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವುದಾಗಿ ಎಚ್ಚರಿಸಿದ್ದಾರೆ.</p>.<p>ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ, ‘ನಗರದಲ್ಲಿ ಸಂಚಾರ ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಕೆಳಸೇತುವೆಯಲ್ಲಿ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ’ ಎಂದಿದ್ದಾರೆ.</p>.<p>‘ಮಳೆ ಸುರಿಯುವ ವೇಳೆ ಸಾರ್ವಜನಿಕರು ತಮ್ಮ ದ್ವಿಚಕ್ರ ವಾಹನಗಳನ್ನು ಕೆಳಸೇತುವೆಗಳಲ್ಲಿ ನಿಲ್ಲಿಸಿ ಆಶ್ರಯ ಪಡೆಯುತ್ತಿದ್ದಾರೆ. ಇದರ ಜೊತೆಯಲ್ಲೇ ಪಾದಚಾರಿಗಳು ಕೆಳಸೇತುವೆಯಲ್ಲಿ ನಿಲ್ಲುತ್ತಿದ್ದಾರೆ. ಇದರಿಂದಾಗಿ ಕೆಳಸೇತುವೆ ಮೂಲಕ ಸಾಗುವ ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿ ಆಗುತ್ತಿದೆ. ಹಲವೆಡೆ ಅಪಘಾತಗಳೂ ಸಂಭವಿಸುತ್ತಿವೆ.’</p>.<p>‘ಹೈಗ್ರೌಂಡ್ಸ್, ಕುಮಾರಸ್ವಾಮಿ ಲೇಔಟ್, ಕೆ.ಆರ್.ಪುರ ಹಾಗೂ ಜೀವನ್ ಬಿಮಾ ನಗರ ಸಂಚಾರ ಠಾಣೆ ವ್ಯಾಪ್ತಿಯ ಕೆಳ ಸೇತುವೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸಿವೆ. ಇಂಥ ಕೆಳಸೇತುವೆಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಿ, ವಾಹನಗಳನ್ನು ನಿಲ್ಲಿಸದಂತೆ ಜನರಿಗೆ ಸೂಚನೆ ನೀಡಲಾಗುತ್ತಿದೆ’ ಎಂದು ಹೇಳಿದ್ದಾರೆ.</p>.<p>‘ಮಳೆ ಸುರಿಯುವ ವೇಳೆಯಲ್ಲಿ ನಗರದ ಯಾವುದೇ ಕೆಳಸೇತುವೆಯಲ್ಲೂ ವಾಹನಗಳನ್ನು ನಿಲ್ಲಿಸಲು ಅವಕಾಶವಿಲ್ಲ. ಆಕಸ್ಮಾತ್ ಯಾರಾದರೂ ವಾಹನ ನಿಲ್ಲಿಸಿದರೆ ಅಂಥವರಿಗೆ ದಂಡ ವಿಧಿಸಲಾಗುವುದು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಳೆ ಸುರಿಯುವ ಸಂದರ್ಭದಲ್ಲಿ ಕೆಳಸೇತುವೆಗಳಲ್ಲಿ ವಾಹನ ನಿಲುಗಡೆಯನ್ನು ಸಂಚಾರ ಪೊಲೀಸರು ನಿರ್ಬಂಧಿಸಿದ್ದು, ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವುದಾಗಿ ಎಚ್ಚರಿಸಿದ್ದಾರೆ.</p>.<p>ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಜಂಟಿ ಕಮಿಷನರ್ ಬಿ.ಆರ್. ರವಿಕಾಂತೇಗೌಡ, ‘ನಗರದಲ್ಲಿ ಸಂಚಾರ ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ ಕೆಳಸೇತುವೆಯಲ್ಲಿ ವಾಹನಗಳ ನಿಲುಗಡೆ ನಿರ್ಬಂಧಿಸಲಾಗಿದೆ’ ಎಂದಿದ್ದಾರೆ.</p>.<p>‘ಮಳೆ ಸುರಿಯುವ ವೇಳೆ ಸಾರ್ವಜನಿಕರು ತಮ್ಮ ದ್ವಿಚಕ್ರ ವಾಹನಗಳನ್ನು ಕೆಳಸೇತುವೆಗಳಲ್ಲಿ ನಿಲ್ಲಿಸಿ ಆಶ್ರಯ ಪಡೆಯುತ್ತಿದ್ದಾರೆ. ಇದರ ಜೊತೆಯಲ್ಲೇ ಪಾದಚಾರಿಗಳು ಕೆಳಸೇತುವೆಯಲ್ಲಿ ನಿಲ್ಲುತ್ತಿದ್ದಾರೆ. ಇದರಿಂದಾಗಿ ಕೆಳಸೇತುವೆ ಮೂಲಕ ಸಾಗುವ ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿ ಆಗುತ್ತಿದೆ. ಹಲವೆಡೆ ಅಪಘಾತಗಳೂ ಸಂಭವಿಸುತ್ತಿವೆ.’</p>.<p>‘ಹೈಗ್ರೌಂಡ್ಸ್, ಕುಮಾರಸ್ವಾಮಿ ಲೇಔಟ್, ಕೆ.ಆರ್.ಪುರ ಹಾಗೂ ಜೀವನ್ ಬಿಮಾ ನಗರ ಸಂಚಾರ ಠಾಣೆ ವ್ಯಾಪ್ತಿಯ ಕೆಳ ಸೇತುವೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸಿವೆ. ಇಂಥ ಕೆಳಸೇತುವೆಗಳಲ್ಲಿ ಸಿಬ್ಬಂದಿಯನ್ನು ನಿಯೋಜಿಸಿ, ವಾಹನಗಳನ್ನು ನಿಲ್ಲಿಸದಂತೆ ಜನರಿಗೆ ಸೂಚನೆ ನೀಡಲಾಗುತ್ತಿದೆ’ ಎಂದು ಹೇಳಿದ್ದಾರೆ.</p>.<p>‘ಮಳೆ ಸುರಿಯುವ ವೇಳೆಯಲ್ಲಿ ನಗರದ ಯಾವುದೇ ಕೆಳಸೇತುವೆಯಲ್ಲೂ ವಾಹನಗಳನ್ನು ನಿಲ್ಲಿಸಲು ಅವಕಾಶವಿಲ್ಲ. ಆಕಸ್ಮಾತ್ ಯಾರಾದರೂ ವಾಹನ ನಿಲ್ಲಿಸಿದರೆ ಅಂಥವರಿಗೆ ದಂಡ ವಿಧಿಸಲಾಗುವುದು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>