<p><strong>ಬೆಂಗಳೂರು:</strong> ‘ನಗರದ ಅಡಿಷನಲ್ ಚೀಫ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ಕೋರ್ಟ್ ಹಿಂಭಾಗದ ಕಬ್ಬನ್ ಪಾರ್ಕ್ ಪ್ರದೇಶದಲ್ಲಿ ವಕೀಲರ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡುವ ವಿಷಯವನ್ನು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು’ ಎಂದು ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ ತಿಳಿಸಿದರು.</p>.<p>ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಆಯೋಜಿಸಿದ್ದ ಹಾಪ್ಕಾಮ್ಸ್ ಮಳಿಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಈ ಸಂಬಂಧ ವಕೀಲರ ನಿಯೋಗ ಬಂದರೆ ಅದನ್ನು ಮುಖ್ಯಮಂತ್ರಿಗಳ ಬಳಿ ಕರೆದುಕೊಂಡು ಹೋಗಿ ಮನವಿ ಈಡೇರಿಸಲು ವಿಶ್ವಪ್ರಯತ್ನ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಮನವಿ ಸಲ್ಲಿಸಿದರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶ ಶಿವಶಂಕರ ಬಿ. ಅಮರಣ್ಣವರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಎನ್.ಗಂಗಾಧರಯ್ಯ, ಖಜಾಂಚಿ ಶಿವಮೂರ್ತಿ, ಹಾಪ್ಕಾಮ್ಸ್ ಅಧ್ಯಕ್ಷ ಎ.ಎಸ್.ಚಂದ್ರೇಗೌಡ, ವ್ಯವಸ್ಥಾಪಕ ನಿರ್ದೇಶಕ ಬಿ.ಎನ್.ಪ್ರಸಾದ್ ಇದ್ದರು.</p>.<p>ಹಾಪ್ಕಾಮ್ಸ್ನ ಈ ಮಳಿಗೆ ನಗರದಲ್ಲಿನ 286ನೇ ಮಳಿಗೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಗರದ ಅಡಿಷನಲ್ ಚೀಫ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ಕೋರ್ಟ್ ಹಿಂಭಾಗದ ಕಬ್ಬನ್ ಪಾರ್ಕ್ ಪ್ರದೇಶದಲ್ಲಿ ವಕೀಲರ ವಾಹನ ನಿಲುಗಡೆಗೆ ಅವಕಾಶ ಮಾಡಿಕೊಡುವ ವಿಷಯವನ್ನು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು’ ಎಂದು ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ ತಿಳಿಸಿದರು.</p>.<p>ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಆಯೋಜಿಸಿದ್ದ ಹಾಪ್ಕಾಮ್ಸ್ ಮಳಿಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಈ ಸಂಬಂಧ ವಕೀಲರ ನಿಯೋಗ ಬಂದರೆ ಅದನ್ನು ಮುಖ್ಯಮಂತ್ರಿಗಳ ಬಳಿ ಕರೆದುಕೊಂಡು ಹೋಗಿ ಮನವಿ ಈಡೇರಿಸಲು ವಿಶ್ವಪ್ರಯತ್ನ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಮನವಿ ಸಲ್ಲಿಸಿದರು.</p>.<p>ಪ್ರಧಾನ ಸಿವಿಲ್ ನ್ಯಾಯಾಧೀಶ ಶಿವಶಂಕರ ಬಿ. ಅಮರಣ್ಣವರ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಎನ್.ಗಂಗಾಧರಯ್ಯ, ಖಜಾಂಚಿ ಶಿವಮೂರ್ತಿ, ಹಾಪ್ಕಾಮ್ಸ್ ಅಧ್ಯಕ್ಷ ಎ.ಎಸ್.ಚಂದ್ರೇಗೌಡ, ವ್ಯವಸ್ಥಾಪಕ ನಿರ್ದೇಶಕ ಬಿ.ಎನ್.ಪ್ರಸಾದ್ ಇದ್ದರು.</p>.<p>ಹಾಪ್ಕಾಮ್ಸ್ನ ಈ ಮಳಿಗೆ ನಗರದಲ್ಲಿನ 286ನೇ ಮಳಿಗೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>