<p><strong>ಬೆಂಗಳೂರು</strong>: 'ಶಾಸಕ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ವಿವಾಹದ ವೇಳೆ ವಾಹನ ಪಾಸ್ ಗಳನ್ನು ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ನೀಡಿದ ಹೇಳಿಕೆಗೆ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.</p>.<p>ಈ ಕುರಿತಂತೆ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಲೇವಾರಿ ಮಾಡಿದೆ.</p>.<p>ವಿಚಾರಣೆ ವೇಳೆ ಸರ್ಕಾರದ ಪರ ಹೆಚ್ಚುವರಿ ವಕೀಲ ವಿಕ್ರಂ ಹುಯಿಲಗೋಳ ಪ್ರಮಾಣ ಪತ್ರ ಸಲ್ಲಿಸಿದರು. ‘ಕುಟುಂಬದ 100 ಸದಸ್ಯರ ಪಾಲ್ಗೊಳ್ಳುವಿಕೆಗೆ ಕುಮಾರಸ್ವಾಮಿ ಅನುಮತಿ ಕೋರಿದ್ದರು. ಇದನ್ನು ಆಧರಿಸಿ ಅನುಮತಿ ನೀಡಲಾಗಿತ್ತು’ ಎಂದು ತಿಳಿಸಿದರು.</p>.<p>ಪ್ರಮಾಣ ಪತ್ರ ಪರಿಶೀಲಿಸಿದ ನ್ಯಾಯಪೀಠ, ‘ಪ್ರಕರಣ ಕೋರ್ಟ್ ಮೆಟ್ಟಿಲೇರಿದ ನಂತರ ಅನುಮತಿ ಪತ್ರ ಪಡೆದಂತಿದೆ’ ಎಂದು ಮೌಖಿಕವಾಗಿ ಅಸಮಾಧಾನ ಹೊರಹಾಕಿತು.</p>.<p>‘ಕೋರ್ಟ್ ನಿರ್ದೇಶನ ನೀಡಿದರೂ ಸರ್ಕಾರ ಸಮರ್ಪಕ ಮಾಹಿತಿ ನೀಡಿಲ್ಲ. ನೀಡಿರುವ ಮಾಹಿತಿಗಳಲ್ಲೂ ಸಾಕಷ್ಟು ಗೊಂದಲಗಳಿವೆ. ಇದು ಗಂಭೀರ ಲೋಪ. ಲಾಕ್ ಡೌನ್ ನಿಯಮ ಉಲ್ಲಂಘಿಸಿ ತಪ್ಪು ಮಾಡಿರುವ ಅಧಿಕಾರಿಗಳ ನಡೆಯನ್ನು ಸರ್ಕಾರ ಸಮರ್ಥಿಸುವಂತಿದೆ’ ಎಂದು ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: 'ಶಾಸಕ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ವಿವಾಹದ ವೇಳೆ ವಾಹನ ಪಾಸ್ ಗಳನ್ನು ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ನೀಡಿದ ಹೇಳಿಕೆಗೆ ಹೈಕೋರ್ಟ್ ಬೇಸರ ವ್ಯಕ್ತಪಡಿಸಿದೆ.</p>.<p>ಈ ಕುರಿತಂತೆ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಲೇವಾರಿ ಮಾಡಿದೆ.</p>.<p>ವಿಚಾರಣೆ ವೇಳೆ ಸರ್ಕಾರದ ಪರ ಹೆಚ್ಚುವರಿ ವಕೀಲ ವಿಕ್ರಂ ಹುಯಿಲಗೋಳ ಪ್ರಮಾಣ ಪತ್ರ ಸಲ್ಲಿಸಿದರು. ‘ಕುಟುಂಬದ 100 ಸದಸ್ಯರ ಪಾಲ್ಗೊಳ್ಳುವಿಕೆಗೆ ಕುಮಾರಸ್ವಾಮಿ ಅನುಮತಿ ಕೋರಿದ್ದರು. ಇದನ್ನು ಆಧರಿಸಿ ಅನುಮತಿ ನೀಡಲಾಗಿತ್ತು’ ಎಂದು ತಿಳಿಸಿದರು.</p>.<p>ಪ್ರಮಾಣ ಪತ್ರ ಪರಿಶೀಲಿಸಿದ ನ್ಯಾಯಪೀಠ, ‘ಪ್ರಕರಣ ಕೋರ್ಟ್ ಮೆಟ್ಟಿಲೇರಿದ ನಂತರ ಅನುಮತಿ ಪತ್ರ ಪಡೆದಂತಿದೆ’ ಎಂದು ಮೌಖಿಕವಾಗಿ ಅಸಮಾಧಾನ ಹೊರಹಾಕಿತು.</p>.<p>‘ಕೋರ್ಟ್ ನಿರ್ದೇಶನ ನೀಡಿದರೂ ಸರ್ಕಾರ ಸಮರ್ಪಕ ಮಾಹಿತಿ ನೀಡಿಲ್ಲ. ನೀಡಿರುವ ಮಾಹಿತಿಗಳಲ್ಲೂ ಸಾಕಷ್ಟು ಗೊಂದಲಗಳಿವೆ. ಇದು ಗಂಭೀರ ಲೋಪ. ಲಾಕ್ ಡೌನ್ ನಿಯಮ ಉಲ್ಲಂಘಿಸಿ ತಪ್ಪು ಮಾಡಿರುವ ಅಧಿಕಾರಿಗಳ ನಡೆಯನ್ನು ಸರ್ಕಾರ ಸಮರ್ಥಿಸುವಂತಿದೆ’ ಎಂದು ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>